ಪಡಿತರ ಚೀಟಿದಾರರಿಗೆ ಇನ್ಮುಂದೆ 21 ಕೆ.ಜಿ ಗೋಧಿ, 14 ಕೆ.ಜಿ ಅಕ್ಕಿ
ನವದೆಹಲಿ, ನವೆಂಬರ್, 18: ಪಡಿತರ ಚೀಟಿದಾರರಿಗೆ ಉಚಿತ ಆಹಾರ ಧಾನ್ಯಗಳ ಪ್ರಯೋಜನಗಳ ಮಿತಿಯನ್ನು ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಪಡಿತರ ಚೀಟಿದಾರರಿಗೆ 21 ಕೆ.ಜಿ. ಗೋಧಿ ಮತ್ತು 14 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಸರ್ಕಾರ ಘೋಷಣೆ ಮಾಡಿದೆ.
ಇನ್ನು ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ. ಗೋಧಿ, 14 ಕೆ.ಜಿ. ಅಕ್ಕಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಆದರೆ ಸಾಮಾನ್ಯ ಪಡಿತರ ಚೀಟಿದಾರರಿಗೆ ಕೇವಲ 2 ಕೆ.ಜಿ. ಗೋಧಿ, 3 ಕೆ.ಜಿ. ಅಕ್ಕಿ ಮಾತ್ರ ನೀಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಾರಿ ಪಡಿತರ ಚೀಟಿದಾರರು ಕೆ.ಜಿ. ಗೋಧಿಗೆ 2 ರೂಪಾಯಿ ಮತ್ತು ಕೆ.ಜಿ. ಅಕ್ಕಿಗೆ 3 ರೂಪಾಯಿ ಪಾವತಿಸಬೇಕು ಎಂದು ಹೇಳಲಾಗಿದೆ. ಹೆಚ್ಚುವರಿಯಾಗಿ ಎಲ್ಲಾ ಪಡಿತರ ಚೀಟಿ ಪಿಡಿಎಸ್ ವಿತರಕರು, ಉಪ್ಪು, ಎಣ್ಣೆ ಮತ್ತು ಬೆಳೆಕಾಳುಗಳ ಪ್ಯಾಕೆಟ್ಗಳನ್ನು ಹೊಂದಿದ್ದು, ಸರ್ಕಾರದ ಆದೇಶದ ಪ್ರಕಾರ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಉಚಿತವಾಗಿ ವಿತರಿಸಲಾಗುವುದು. ಈ ನಿಟ್ಟಿನಲ್ಲಿ ಮೊದಲು ಬಂದವರಿಗೆ ಹೆಚ್ಚಿನ ಆದ್ಯತೆ ನೀಡುವ ನಿಯಮವನ್ನು ಅನುಸರಿಸಲಾಗುವುದು ಎಂದು ತಿಳಿಸಿದೆ.

2000ನೇ ಸಾಲಿನಲ್ಲಿ ಅಂತ್ಯೋದಯ ಯೋಜನೆ
ಉಚಿತ ಆಹಾರ ಧಾನ್ಯಗಳ ಪ್ರಯೋಜನಗಳ ಮಿತಿಯನ್ನು ಹೆಚ್ಚಿಸಬಹುದು ಎನ್ನುವ ಮಾಹಿತಿ ಹೊರಬಿದ್ದು, ಯೋಜನೆಯ ಬಗ್ಗೆ ಸರ್ಕಾರ ಶೀಘ್ರದಲ್ಲಿಯೇ ತಿಳಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಡಿಸೆಂಬರ್, 2000ನೇ ಸಾಲಿನಲ್ಲಿ ಒಂದು ಕೋಟಿ ಬಡ ಕುಟುಂಬಗಳಿಗಾಗಿ ಅಂತ್ಯೋದಯ ಅನ್ನ ಯೋಜನೆ ಅನ್ನು ಪ್ರಾರಂಭಿಸಲಾಯಿತು. ರಾಜ್ಯಗಳೊಳಗಿನ ಟಿಪಿಡಿಎಸ್ ಅಡಿಯಲ್ಲಿ ಬರುವ ಬಿಪಿಎಲ್ ಕುಟುಂಬಗಳ ಪೈಕಿ ಒಂದು ಕೋಟಿ ಬಡ ಕುಟುಂಬಗಳನ್ನು ಗುರುತಿಸಲಾಗುವುದು. ಮತ್ತು ಅವರಿಗೆ ಪ್ರತಿ ಕೆ.ಜಿ.ಗೆ 2 ರೂಪಾಯಿಗಳ ಹೆಚ್ಚಿನ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಒದಗಿಸುವುದು ಎಎವೈ ಯೋಜನೆ ಒಳಗೊಂಡಿದೆ. ಗೋಧಿ ಮತ್ತು ಅಕ್ಕಿಗೆ ಪ್ರತಿ ಕೆ.ಜಿ.ಗೆ 3 ರೂಪಾಯಿ ವಿತರಕರು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಮಾರ್ಜಿನ್, ಸಾರಿಗೆ ವೆಚ್ಚ ಸೇರಿದಂತೆ ವಿತರಣಾ ವೆಚ್ಚವನ್ನು ರಾಜ್ಯಗಳು ಭರಿಸಬೇಕಾಗಿತ್ತು. ಹೀಗಾಗಿ ಆಹಾರ ಸಬ್ಸಿಡಿಯನ್ನು ಈ ಯೋಜನೆಯಡಿ ಗ್ರಾಹಕರಿಗೆ ನೀಡಲಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications