ಕೊರೊನಾ ಮೂರನೇ ಅಲೆ ಭೀತಿ: ರಾಜ್ಯದಲ್ಲಿ ವಿದ್ಯಾಗಮ ಕಲಿಕೆ ಮರು ಜಾರಿ
ಬೆಂಗಳೂರು, ಜ. 09: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ನಿರಂತರ ಕಲಿಕೆಗೆ ಅವಕಾಶ ಮಾಡಿಕೊಡಲು ಶಿಕ್ಷಣ ಇಲಾಖೆ ವಿದ್ಯಾಗಮ ಮರು ಜಾರಿ ಮಾಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಬೆಂಗಳೂರು ಹೊರತು ಪಡಿಸಿ ಹೊರತು ಪಡಿಸಿ ರಾಜ್ಯದಲ್ಲಿ ಶಾಲಾ ಕಾಲೇಜುಗಳು ತೆರೆಯಲು ಅವಕಾಶ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾದಲ್ಲಿ ಮಕ್ಕಳ ನಿರಂತರ ಕಲಿಕೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಆನ್ಲೈನ್ ತರಗತಿಗಳ ಜತೆಗೆ ವಿದ್ಯಾಗಮ ಜಾರಿ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಸಂಬಂಧ 1 ರಿಂದ 09 ನೇ ತರಗತಿ ವರೆಗೆ ವಿದ್ಯಾಗಮಗೆ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಪಾಳಿ ವ್ಯವಸ್ಥೆ
ವಿದ್ಯಾರ್ಥಿಗಳನ್ನು ತಲಾ 25 ವಿದ್ಯಾರ್ಥಿಗಳಂತೆ ತಂಡ ಮಾಡಿಕೊಳ್ಳಬೇಕು. ಪ್ರತಿ 25 ವಿದ್ಯಾರ್ಥಿಗಳ ತಂಡಕ್ಕೆ ಮಾರ್ಗದರ್ಶಿ ಶಿಕ್ಷಕರನ್ನು ನೇಮಿಸಬೇಕು. ಅವರ ಉಸ್ತುವಾರಿಯಲ್ಲಿ ಶಾಲೆಯಲ್ಲಿ ವಿದ್ಯಾಗಮ ಅನುಷ್ಠಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಭವಿಷ್ಯದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕು ಜಾಸ್ತಿಯಾದಲ್ಲಿ ಆನ್ಲೈನ್ ಹಾಗೂ ವಿದ್ಯಾಗಮ ಎರಡನ್ನೂ ಏಕಕಾಲದಲ್ಲಿ ಅನುಷ್ಠಾನ ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮೊಬೈಲ್, ಕಂಪ್ಯೂಟರ್ ಅಂತರ್ಜಾಲ ಸಂಪರ್ಕ ಸೌಲಭ್ಯವಿಲ್ಲದ ಮಕ್ಕಳು ಶಾಲೆಗೆ ತೆರಳಿ ಕಲಿಯಲು ಅವಕಾಶ ಕಲ್ಪಿಸಲಾಗಿದೆ.

ನಾಲ್ಕು ತರಗತಿಗೆ ಅವಕಾಶ
ಒಂದು ಶಾಲೆಯಲ್ಲಿ ಪ್ರತಿ ದಿನ ಆರರಿಂದ ಎಂಟು ತರಗತಿಗಳು ನಡೆಯುತ್ತವೆ. ಆದರೆ ವಿದ್ಯಾಗಮ ಅಡಿ ನಾಲ್ಕು ತರಗತಿಗಳಿಗೆ ಸೀಮಿತಗೊಳಿಸಲಾಗಿದೆ. ಇದರ ಜತೆಗೆ ಪಾಳಿ ವ್ಯವಸ್ಥೆಯಲ್ಲಿ ಕಡಿಮೆ ವಿದ್ಯಾರ್ಥಿಗಳನ್ನು ಇಟ್ಟುಕೊಂಡು ಬೋಧನೆ ಮಾಡಲು ವಿದ್ಯಾಗಮ ಅಡಿ ಸೂಚನೆ ನೀಡಲಾಗಿದೆ. ಮೊಬೈಲ್, ಕಂಪ್ಯೂಟರ್ ಸಾಧನ ಇಲ್ಲದ ಮಕ್ಕಳು ದೇವಸ್ಥಾನ, ವಠಾರ, ಸಮುದಾಯ ಭವನ, ಶಾಲೆ ಆವರಣದಲ್ಲಿ ಕಾಲ್ಪನಿಕ ತರಗತಿ ಕೋಣೆಯಲ್ಲಿ ವಿದ್ಯಾಗಮ ನಡೆಸಲು ಸೂಚಸಲಾಗಿದೆ.

ಸಲಹಾತ್ಮಕ ವೇಳಾ ಪಟ್ಟಿ ಬಿಡುಗಡೆ
1 ರಿಂದ 5 ನೇ ತರಗತಿ ವರೆಗಿನ ಕಿರಿಯ ಪ್ರಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಗಮ ಮತ್ತು ಪರ್ಯಾಯ ಶೈಕ್ಷಣಿಕ ಚಟುವಟಿಕೆ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯನ್ನು ಸಹ ಶಿಕ್ಷಣ ಇಲಾಖೆ ನೀಡಿದೆ. 1 ರಿಂದ 3 ನೇ ತರಗತಿ ವರೆಗೆ ವಾರಕ್ಕೆ ಎರಡು ದಿನ, 4 ರಿಂದ 5 ನೇ ತರಗತಿ ವರೆಗೆ ವಾರಕ್ಕೆ ಮೂರು ದಿನ, ಪಾಳಿ ಪದ್ಧತಿಯಲ್ಲಿ ತಲಾ 45 ನಿಮಿಷದಂತೆ ಮೂರು ಅವಧಿಗಳಂತೆ 2. 30 ನಿಮಿಷ ಕಾಲಾವಕಾಶ ನಿಗದಿ ಮಾಡಲಾಗಿದೆ. ಹೀಗೆ 1 ರಿಂದ 9 ನೇ ತರಗತಿ ವರೆಗೆ ವರೆಗೆ ಸಲಹತ್ಮಕ ವೇಳಾ ಪಟ್ಟಿಯನ್ನು ಸಹ ಶಿಕ್ಷಣ ಇಲಾಖೆ ನೀಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ
ಈ ಹಿಂದೆ ಕೊರೊನಾ ಸೋಂಕಿನಿಂದ ಮಕ್ಕಳ ಕಲಿಕೆ ಮೇಲೆ ಭಾರೀ ನಕಾರಾತ್ಮಕ ಪರಿಣಾಮ ಬೀರಿದೆ. ಹೀಗಾಗಿ ಮಕ್ಕಳ ಕಲಿಕೆ ಮೇಲೆ ಬೀರುವ ಪರಿಣಾಮ ತಪ್ಪಿಸಿ ನಿರಂತರ ಕಲಿಕೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ವಿದ್ಯಾಗಮ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುತ್ತಿದೆ. ಮಕ್ಕಳ ಕಲಿಕೆಗೆ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ವಿದ್ಯಾಗಮ ಮರು ಜಾರಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications