Good news: ಅಕ್ಕಿ ದರ ಇಳಿಕೆ, ಎಷ್ಟು?-ಅಂಕಿಅಂಶಗನ್ನು ಗಮನಿಸಿ
ಬೆಂಗಳೂರು, ಏಪ್ರಿಲ್, 02: ಬಿಸಿಲಿನ ತಾಪಮಾನ ಹೇಗೆ ಏರಿಕೆ ಆಗುತ್ತದೆಯೋ ಅದೇ ರೀತಿ ದಿನಬಳಕ್ಕೆ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರಿಂದ ಜನರು ಬೆಂದು ಹೋಗಿದ್ದರು. ಆದರೆ ಇದೀಕ ಅಕ್ಕಿ ದರ ಇಳಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ಜನರಿಗೆ ಸಂತಸದ ಸುದ್ದಿಯಾಗಿದೆ. ಹಾಗಾದರೆ ಎಷ್ಟು ಇಳಿಕೆಯಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಗಗನಕ್ಕೇರಿದ್ದ ಅಕ್ಕಿ ದರ ಇದೀಗ ಸ್ವಲ್ಪ ಇಳಿಕೆ ಕಂಡಿದೆ. ಸ್ಟೀಮ್ ರೈಸ್ ಅಕ್ಕಿ ದರ ಕಡಿಮೆಯಾಗಿದೆ. ಬೇಡಿಕೆಯ ರಾ ರೈಸ್ ದರ ಯಥಾ ಸ್ಥಿತಿಯಲ್ಲಿ ಮುಂದುವರೆದಿದೆ ಎಂದು ತಿಳಿದುಬಂದಿದೆ. ಹಾಗಾದರೆ ಅಂಕಿಅಂಶಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬೇಸಿಗೆ ಬೆಳೆ ಬಂದಿರುವುದರಿಂದ ಅಕ್ಕಿ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಆಗಿದೆ. ಸ್ಟೀಮ್ ರೈಸ್ ದರ ತಗ್ಗಿದರೂ ಅದನ್ನು ಎಲ್ಲರೂ ಬಳಕೆ ಮಾಡುವುದಿಲ್ಲ. ಹೋಟೆಲ್ನವರು ಹೆಚ್ಚಿನ ಪ್ರಮಾಣದಲ್ಲಿ ಸ್ಟೀಮ್ ರೈಸ್ ಅನ್ನು ಬಳಕೆ ಮಾಡುತ್ತಾರೆ. ಇದರ ಬೆಲೆ ಇಳಿಕೆ ತಾತ್ಕಾಲಿಕ ಎಂದು ಹೇಳಲಾಗಿದೆ.
ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಿಂದ ಹೊಸ ಭತ್ತ ಬಂದಿದೆ. ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಉತ್ಪಾದನೆ ಆಗಿದ್ದು, ಭಾರತ್ ರೈಸ್ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿದೆ. ಅಷ್ಟೇ ಅಲ್ಲದೆ ಅಕ್ಕಿ ದಾಸ್ತಾನಿನ ಮೇಲೆ ಕೇಂದ್ರ ಸರ್ಕಾರ ಕಣ್ಣಿಟ್ಟಿದೆ. ಇವೆಲ್ಲ ಕಾರಣಗಳಿಂದ ಅಕ್ಕಿ ದರ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ.
ಸ್ಟೀಮ್ ರೈಸ್ ದರ ಕೆಜಿಗೆ 8 ರೂಪಾಯಿವರೆಗೆ ಕಡಿಮೆ ಆಗಿದ್ದು, ಕಳೆದ ಫೆಬ್ರವರಿಯಲ್ಲಿ ಆರ್ಎನ್ಆರ್ ಸ್ಟೀಮ್ ರೈಸ್ ದರ ಕೆ.ಜಿ.ಗೆ 57-58 ರೂಪಾಯಿ ಇತ್ತು. ಇದೀಗ 48-49 ರೂಪಾಯಿಗೆ ಇಳಿದಿದೆ. ಸೋನಾ ಸ್ಟೀಮ್ ರೈಸ್ ದರ ಕೆಜಿಗೆ 56-47 ರೂಪಾಯಿಗೆ ಇಳಿಕೆ ಆಗಿದೆ. ರಾ ರೈಸ್ ದರ 55-57 ರೂಪಾಯಿ ಇದೆ ಎಂದು ತಿಳಿದುಬಂದಿದೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications