ಗಾಢ ನಿದ್ರೆಗೆ ಜಾರಲು ಇಲ್ಲಿವೆ ಸುಲಭ ಉಪಾಯಗಳು: ಇಂದೇ ಪ್ರಯತ್ನಿಸಿ
ಇಂದಿನ ವೇಗವಾದ ಜೀವನಶೈಲಿಯಲ್ಲಿ ಅನೇಕರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಒತ್ತಡ, ಅತಿಯಾದ ಮೊಬೈಲ್ ಬಳಕೆ ಮತ್ತು ದೈಹಿಕ ವ್ಯಾಯಾಮದ ಕೊರತೆ ಇದರ ಪ್ರಮುಖ ಕಾರಣಗಳಾಗಿವೆ ಎಂದು ತಜ್ಞರು ಹೇಳುತ್ತಾರೆ. ಇದರ ಜೊತೆಗೆ ನಾವು ತೆಗೆದುಕೊಳ್ಳುವ ಆಹಾರವೂ ಕೂಡ ನಿದ್ರೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.
ತಜ್ಞರ ಪ್ರಕಾರ ಕೆಲವು ಆಹಾರ ಪದಾರ್ಥಗಳು ಉತ್ತಮ ನಿದ್ರೆಗೆ ಸಹಾಯ ಮಾಡುತ್ತವೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ನಿದ್ರಾಹೀನತೆ ಸಮಸ್ಯೆಯನ್ನು ಕಡಿಮೆ ಮಾಡಬಹುದು ಮತ್ತು ಶಾಂತಿಯುತ ನಿದ್ರೆ ಪಡೆಯಬಹುದು.

ಬಾದಾಮಿ ಉತ್ತಮ ನಿದ್ರೆಗೆ ತುಂಬಾ ಸಹಾಯಕ
ಬಾದಾಮಿಯಲ್ಲಿ ಮ್ಯಾಗ್ನೀಷಿಯಮ್ ಸಮೃದ್ಧವಾಗಿದ್ದು ಇದು ದೇಹವನ್ನು ನಿಯಂತ್ರಣಕ್ಕೆ ತರುತ್ತದೆ ಮತ್ತು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಸಂಜೆ 5 ರಿಂದ 7 ಗಂಟೆಗಳ ನಡುವೆ ನೆನೆಸಿದ ಬಾದಾಮಿಯನ್ನು ತಿನ್ನುವುದು ಉತ್ತಮ. ಇದು ರಾತ್ರಿ ಮಧ್ಯೆ ಎಚ್ಚರವಾಗುವುದನ್ನು ಕಡಿಮೆ ಮಾಡಿ ಸರಿಯಾಗಿ ನಿದ್ರೆ ಮಾಡಲು ಸಹಕಾರಿಯಾಗುತ್ತದೆ.
ಬಾಳೆಹಣ್ಣು ಇದು ಸಹಜ ನಿದ್ರೆಯ ಸ್ನೇಹಿತ
ಬಾಳೆಹಣ್ಣು ಕೂಡ ಉತ್ತಮ ನಿದ್ರೆ ಮಾಡಲು ಸಹಾಯ ಮಾಡುತ್ತದೆ. ಊಟದ ನಂತರ ಅಥವಾ ಮಲಗುವ ಮುನ್ನ ಬಾಳೆಹಣ್ಣು ಸೇವಿಸಿದರೆ ದೇಹಕ್ಕೆ ವಿಶ್ರಾಂತಿ ದೊರೆಯುತ್ತದೆ ಮತ್ತು ದೇಹದ ದಣಿವನ್ನು ದೂರ ಮಾಡುತ್ತದೆ.
ಹಾಲು ಮತ್ತು ಅರಿಶಿಣ
ಮಲಗುವ ಮೊದಲು ತುಸು ಬೆಚ್ಚಗಿನ ಹಾಲಿಗೆ ಅರಿಶಿಣ ಸೇರಿಸಿ ಕುಡಿಯುವುದು ಉತ್ತಮ. ಇದರಿಂದ ದೇಹಕ್ಕೆ ಆರಾಮ ಸಿಗುತ್ತದೆ ಮತ್ತು ನಿದ್ರೆ ಸುಲಭವಾಗುತ್ತದೆ. ಇದಕ್ಕೆ ಸ್ವಲ್ಪ ಜಾಯಿಕಾಯಿ ಪುಡಿ ಸೇರಿಸಿದರೆ ಇನ್ನಷ್ಟು ಲಾಭಕರ ಎಂದು ತಜ್ಞರು ಸಲಹೆ ನೀಡುತ್ತಾರೆ.
ಚೆರಿ ಹಣ್ಣು
ಚೆರಿ ಹಣ್ಣುಗಳು ಹುಳಿಯಾಗಿರುತ್ತದೆ ಹಾಗೂ ದೇಹವನ್ನು ತಂಪಾಗಿಡುತ್ತವೆ ಇದು ಮೆಲಟೋನಿನ್ ಉತ್ಪಾದನೆಯನ್ನು ಕೂಡ ಹೆಚ್ಚಿಸುತ್ತವೆ. ಸಂಜೆ ವೇಳೆಯಲ್ಲಿ ತಾಜಾ ಚೆರಿ ಹಣ್ಣುಗಳನ್ನು ಸೇವಿಸುವುದರಿಂದ ರಾತ್ರಿ ಸರಿಯಾಗಿ ನಿದ್ರೆ ಬರುತ್ತದೆ.
ಜೀವನಶೈಲಿ ಬದಲಾವಣೆ
ಆಹಾರದ ಜೊತೆಗೆ ಜೀವನಶೈಲಿ ಸಹ ಬದಲಾವಣೆ ಮಾಡಿಕೊಳ್ಳವುದು ಮುಖ್ಯವಾಗಿದೆ. ರಾತ್ರಿ ವೇಳೆ ಮೊಬೈಲ್ ಬಳಕೆ ಕಡಿಮೆ ಮಾಡುವುದು, ಕೆಫೀನ್ ಸೇವನೆ ನಿಲ್ಲಿಸುವುದು, ತಡ ರಾತ್ರಿ ಭಾರವಾದ ಆಹಾರ ಊಟವನ್ನು ಮಾಡದೆ ಇರುವುದು ಮತ್ತು ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ.
ಪ್ರತಿ ದಿನ ಸರಿಯಾದ ಸಮಯಕ್ಕೆ ಮಲಗುವುದು ಮತ್ತು ಸರಿಯಾದ ಸಮಯಕ್ಕೆ ಎದ್ದೇಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸರಿಯಾದ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಿದರೆ ನಿದ್ರೆಯ ಸಮಸ್ಯೆಯನ್ನು ಸಹಜವಾಗಿ ನಿವಾರಿಸಿಕೊಳ್ಳಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
-
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
ಬಾಳೆಹಣ್ಣು ತಿನ್ನುವ ಸರಿಯಾದ ಕ್ರಮ ಯಾವುದು? ಈ ಸಣ್ಣ ತಪ್ಪು ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು -
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ














Click it and Unblock the Notifications