ಡಾ.ರಾಜ್ ಹುಟ್ಟುಹಬ್ಬ: ಡೂಡಲ್ ಮೂಲಕ ಅಣ್ಣಾವ್ರಿಗೆ ಗೂಗಲ್ ಗೌರವ
ತೈಲವರ್ಣದಲ್ಲಿ ರಚಿಸುವಂತೆ ಕಾಣುವ ಡಾ. ರಾಜ್ ಕುಮಾರ್ ಅವರ ಭಾವಚಿತ್ರವನ್ನು ಡೂಡಲ್ ನಲ್ಲಿ ಉಪಯೋಗಿಸಲಾಗಿದ್ದು, ಚಿತ್ರ ಮಂದಿರದ ತೆರೆಯ ಮೇಲೆ ಡಾ. ರಾಜ್ ಕುಮಾರ್ ಅವರ ಮೊಗ ಕಂಗೊಳಿಸುತ್ತಿರುವಂತೆ ರಚಿಸಲಾಗಿದೆ.
ಬೆಂಗಳೂರು, ಏಪ್ರಿಲ್ 24: ಕನ್ನಡ ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟು ಹಬ್ಬಕ್ಕೆ ಖ್ಯಾತ ಅಂತರ್ಜಾಲ ಸರ್ಚ್ ಇಂಜಿನ್ ಆದ ಗೂಗಲ್ ಸಂಸ್ಥೆ ವಿಶೇಷ ಡೂಡಲ್ ಅನ್ನು ತನ್ನ ಸರ್ಚ್ ಇಂಜಿನ್ ನ ಮುಖಪುಟದಲ್ಲಿ ಹಾಕುವ ಮೂಲಕ ಗೌರವ ಸಮರ್ಪಿಸಿದೆ.
ಏಪ್ರಿಲ್ 24ರಂದು ವರನಟ ಡಾ. ರಾಜ್ ಕುಮಾರ್ ಅವರ 89ನೇ ಹುಟ್ಟುಹಬ್ಬವನ್ನು ನಾಡಿನಾದ್ಯಂತ ಹಾಗೂ ವಿಶ್ವದೆಲ್ಲೆಡೆ ಇರುವ ಡಾ. ರಾಜ್ ಅಭಿಮಾನಿಗಳು ಆಚರಿಸುತ್ತಾರೆ.[ಅಣ್ಣಾವ್ರ 89ನೇ ಜನ್ಮದಿನೋತ್ಸವ: ಎಲ್ಲೆಲ್ಲಿ ಏನೇನು ವಿಶೇಷ?]

ತೈಲವರ್ಣದಲ್ಲಿ ರಚಿಸುವಂತೆ ಕಾಣುವ ಡಾ. ರಾಜ್ ಕುಮಾರ್ ಅವರ ಭಾವಚಿತ್ರವನ್ನು ಡೂಡಲ್ ನಲ್ಲಿ ಉಪಯೋಗಿಸಲಾಗಿದ್ದು, ಚಿತ್ರ ಮಂದಿರದ ತೆರೆಯ ಮೇಲೆ ಡಾ. ರಾಜ್ ಕುಮಾರ್ ಅವರ ಮೊಗ ಕಂಗೊಳಿಸುತ್ತಿರುವಂತೆ, ಅದನ್ನು ನೂರಾರು ಪ್ರೇಕ್ಷಕರು ನೋಡುತ್ತಿರುವಂತೆ ಬಿಂಬಿಸಲಾಗಿದೆ.
ಇನ್ನುಳಿದಂತೆ, ಡೂಡಲ್ ನಲ್ಲಿ ಸಾಮಾನ್ಯವಾಗಿ ಗೂಗಲ್ ಪದವನ್ನು ಕಂಡೂ ಕಾಣದ ರೀತಿಯಲ್ಲಿ ಅಳವಡಿಸುವಂತೆ ಈ ಚಿತ್ರದಲ್ಲೂ ಸಮ್ಮಿಳಿತಗೊಳಿಸಲಾಗಿದೆ.
ಈ ಡೂಡಲ್ ಅನ್ನು ಕ್ಲಿಕ್ ಮಾಡಿದರೆ, ಡಾ. ರಾಜ್ ಕುಮಾರ್ ಅವರಿಗೆ ಹಾಗೂ ಅವರಿಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಬಹುದಾದ ಲಿಂಕ್ ಗಳ ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ ಮೊದಲ ಲಿಂಕ್ ಡಾ. ರಾಜ್ ಕುಮಾರ್ ಬಗೆಗಿನ ವಿಕಿಪೀಡಿಯಾ ಲಿಂಕ್ ಇದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications