ಪ್ರವೀಣ್ ಖಾಂಡ್ಯ ವಿರುದ್ಧ ಗೂಂಡಾ ಕಾಯ್ದೆ ಜಾರಿ, ಕಲಬುರಗಿ ಜೈಲಿಗೆ
33 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಪ್ರವೀಣ್ ಖಾಂಡ್ಯನನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಗುಲ್ಬರ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ.
ಚಿಕ್ಕಮಗಳೂರು, ಜನವರಿ 30: ಒಟ್ಟು 33 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಹಿಂದೂಪರ ಸಂಘಟನೆ ಮುಖಂಡ ಖಾಂಡ್ಯದ ಪ್ರವೀಣ್ನನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಗುಲ್ಬರ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ. ಡಿವೈಎಸ್ಪಿ ಕಲ್ಲಪ್ಪ ಅವರ ಸಾವಿಗೆ ಕಾರಣವಾದ ತೇಜಸ್ ಅಪಹರಣ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ದೇವದಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾಂಡ್ಯ ಎಂಬಲ್ಲಿನ ಎಚ್.ಕೆ.ಪ್ರವೀಣ್ ಅಲಿಯಾಸ್ ಖಾಂಡ್ಯ ಪ್ರವೀಣ್ ಗೆ ಜಿಲ್ಲೆಯಲ್ಲಿಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡಂತೆ ಪೊಲೀಸ್ ಅಧಿಕಾರಿಗಳು ಈ ಮೊದಲು ಎಚ್ಚರಿಕೆ ನೀಡಿದ್ದರು.

ಆದರೆ ಕ್ರಿಮಿನಲ್ ಚಟುವಟಿಕೆಯೊಂದಿಗಿನ ತನ್ನ ನಡವಳಿಕೆಯನ್ನು ಬದಲಾಯಿಸದ ಹಿನ್ನಲೆಯನ್ನು ಚಿಕ್ಕಮಗಳೂರು ಪೊಲೀಸರು ಆರೋಪಿ ಪ್ರವೀಣ್ ಖಾಂಡ್ಯ ವಿರುದ್ದ ವಿವರವಾದ ವರದಿಯನ್ನು ಸಿದ್ದಪಡಿಸಿ ಜಿಲ್ಲಾಧಿಕಾರಿಗೆ ನೀಡಲಾಗಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಅಣ್ಣಾಮಲೈ ತಿಳಿಸಿದ್ದಾರೆ.
ತೇಜಸ್ ಅಪಹರಣ ಹಾಗೂ ಡಿವೈಎಸ್ ಪಿ ಕಲ್ಲಪ್ಪ ಹಂಡಿಭಾಗರವರ ಆತ್ಮಹತ್ಯೆ ಪ್ರಕರಣದ ಸಂಬಂಧ ಪ್ರವೀಣ್ ಖಾಂಡ್ಯ ಪ್ರಮುಖ ಆರೋಪಿಯಾಗಿದ್ದು, ಆತ್ಮಹತ್ಯೆ ಬಳಿಕ ತಲೆಮರಿಸಿಕೊಂಡಿದ್ದವನು ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಪಡೆದು ಚಿಕ್ಕಮಗಳೂರಿಗೆ ಮರಳಿದ್ದ ಅದರೆ, ಗ್ರಾಮಾಂತರ ಠಾಣೆಯ ಪೋಲಿಸರು 2011ರಲ್ಲಿ ದತ್ತ ಜಯಂತಿ ನಡೆಯುವ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಕೆಲಸಕ್ಕೆ ಅಡಚಣೆ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು. ಜನವರಿ 16ರವರೆಗೆ ಚಿಕ್ಕಮಗಳೂರು ಜೈಲಿನಲ್ಲಿದ್ದ ಪ್ರವೀಣ್ ಖಾಂಡ್ಯ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಿ, ಪೊಲೀಸ್ ಬೆಂಗಾವಲಿನಲ್ಲಿ ಗುಲ್ಬರ್ಗಾ ಜೈಲಿಗೆ ಕಳುಹಿಸಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications