ರಾಮಚಂದ್ರಾಪುರ ಮಠದ ಯಶಸ್ವೀ 'ಗೋಯಾತ್ರೆ'ಗೆ ಮತ್ತೊಂದು ಗರಿ
ಹೊಸನಗರ ರಾಮಚಂದ್ರಾಪುರ ಮಠದ ನೇತೃತ್ವದಲ್ಲಿ ನಡೆಯುತ್ತಿರುವ ಗೋಯಾತ್ರೆಗೆ ಪ್ರತಿಷ್ಟಿತ 'ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವಾರ್ಡ್ಸ್ ಫಾರ್ ಇನ್ನೋವೇಶನ್' ಪ್ರಶಸ್ತಿ ಲಭಿಸಿದೆ.
ನವದೆಹಲಿ, ಮೇ 12: ಹೊಸನಗರ ರಾಮಚಂದ್ರಾಪುರ ಮಠದ ನೇತೃತ್ವದಲ್ಲಿ ನಡೆಯುತ್ತಿರುವ ಗೋಯಾತ್ರೆಗೆ ಪ್ರತಿಷ್ಟಿತ 'ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವಾರ್ಡ್ಸ್ ಫಾರ್ ಇನ್ನೋವೇಶನ್' ಪ್ರಶಸ್ತಿ ಲಭಿಸಿದೆ.
ನವದೆಹಲಿಯ ಇಂಡಿಯಾ ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ಗುರುವಾರ, ಮೇ ಹನ್ನೊಂದರಂದು ನಡೆದ ಸಮಾರಂಭದಲ್ಲಿ ಮಠದ ಪರವಾಗಿ, ರಾಮಚಂದ್ರಾಪುರ ಮಠದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಕೆ ಜಿ ಭಟ್ ಪ್ರಶಸ್ತಿ ಸ್ವೀಕರಿಸಿದರು. [ನಾವೂ ಹೃದಯ ಕಳ್ಕೊಂಡರೆ ಗೋವು ಬದ್ಕೋದು ಹೇಗೆ]

ರಾಮಚಂದ್ರಾಪುರ ಮಠದ ಶ್ರೀಗಳಾದ ರಾಘವೇಶ್ವರಭಾರತೀ ಶ್ರೀಗಳರವರ ಪರಿಕಲ್ಪನೆ ಹಾಗೂ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆದ ಮಂಗಲ ಗೋಯಾತ್ರೆ ಅದ್ಭುತ ಯಶಸ್ಸು ಗಳಿಸಿ ರಾಷ್ಟ್ರಾದ್ಯಂತ ಮನೆಮಾತಾಗಿತ್ತು.
ಈ ಸಂದರ್ಭದಲ್ಲಿ ಇಂಡಿಯನ್ ಆರ್ಮಿ, ಉತ್ತರಪ್ರದೇಶ ಪೋಲಿಸ್, ಏರ್ ಇಂಡಿಯಾ, ಕಾನ್ಪುರದ ರಾಮ ಯುನಿವರ್ಸಿಟಿ ಸಂಸ್ಥೆಗಳಿಗೆ ರಿಥಿಂಕ್ ಇಂಡಿಯಾ ಸಂಸ್ಥೆಯು ಅಟಲ್ ಬಿಹಾರಿ ವಾಜಪೇಯಿ ಅವಾರ್ಡ್ಸ್ ಫಾರ್ ಇನ್ನೊವೇಶನ್ ಪ್ರಶಸ್ತಿಯನ್ನೂ ಪ್ರಧಾನ ಮಾಡಿದೆ.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಡಾ. ಸುರಭಿ ವೈಶ್ ಮಿತ್ತಲ್, ರಾಘವ್ ಮಿತ್ತಲ್ ಮುಂತಾದವರು ಉಪಸ್ಥಿತರಿದ್ದರು.
ಗೋವುಗಳನ್ನು ಸಂರಕ್ಷಿಸುವ ಮತ್ತು ಗೋರಕ್ಷಣೆಗೆ ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು ಎಂದು ಜಾಗೃತಿ ಮೂಡಿಸುವ 'ಗೋಯಾತ್ರೆ'ಯನ್ನು ರಾಮಚಂದ್ರಾಪುರ ಮಠ ಹಮ್ಮಿಕೊಂಡಿತ್ತು. ಮಠದ ವತಿಯಿಂದ ಆಯೋಜಿಸಲಾಗಿದ್ದ ಈ ಗೋಯಾತ್ರೆ ವ್ಯಾಪಕ ಪ್ರಶಂಸೆಗೊಳಗಾಗಿತ್ತು.
-
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ












Click it and Unblock the Notifications