Nagamale: ಚಾಮರಾಜನಗರದ ನಾಗಮಲೆಗೆ ಉಚಿತ ಪ್ರವೇಶ: ಷರತ್ತುಗಳು ಅನ್ವಯ!
ಚಾಮರಾಜನಗರ ನವೆಂಬರ್ 1: ಚಾಮರಾಜನಗರದ ನಾಗಮಲೆ ಚಾರಣ ಪ್ರಿಯರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ನಾಗಮಲೆಗೆ ತೆರಳುವ ಮಾದಪ್ಪನ ಭಕ್ತರಿಗೆ ಉಚಿತ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿದೆ. ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಹತ್ತಿರವಾದ ನಾಗಮಲೆ ಚಾರಣಕ್ಕೆ ವಿಧಿಸಲಾಗಿದ್ದ ನಿಷೇಧ ಆದೇಶವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಬಹುತೇಕ ಭಕ್ತಾದಿಗಳು ನಾಗಮಲೆ ಕ್ಷೇತ್ರಕ್ಕೆ ಹೋಗಿ ಬರುವುದು ಸಂಪ್ರದಾಯವಿದೆ. ಜಾತ್ರಾ ಮಹೋತ್ಸವ, ಹಬ್ಬ ಹರಿದಿನ ಸೇರಿದಂತೆ ಇನ್ನಿತರ ದಿನಗಳಲ್ಲಿ ಭಕ್ತಾದಿಗಳು ದಿನದ 24 ಗಂಟೆಯೂ ನಾಗಮಲೆ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಸಾಲು ಸಾಲು ಹಬ್ಬ ರಜೆಗಳು ಇರುವುದರಿಂದ ಇಲ್ಲಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದ್ದು ಸರ್ಕಾರ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ.

ಆದರೆ ಅಲ್ಲಿಗೆ ಹೋಗುವಾಗ ಹಾಗೂ ಬರುವಾಗ ಕಾಡು ಪ್ರಾಣಿಗಳು ದಾಳಿ ನಡೆಸಿದ ಪರಿಣಾಮ ಈ ಹಿಂದೆ ಭಕ್ತಾದಿಗಳು ಮೃತಪಟ್ಟಿರುವುದಿದೆ. ಹೀಗಾಗಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಕಳೆದ ಫೆಬ್ರವರಿಯಲ್ಲಿ ನಾಗಮಲೆ ಕ್ಷೇತ್ರಕ್ಕೆ ಜೀಪ್ ಮುಖಾಂತರ ಹಾಗೂ ಪಾದಯಾತ್ರೆಯ ಮೂಲಕ ಭಕ್ತಾದಿಗಳು ತೆರಳಲು ನಿರ್ಬಂಧ ವಿಧಿಸಲಾಗಿತ್ತು.
ನಾಗಮಲೆಗೆ ಚಾರಣಕ್ಕೆ ತೆರಳಲು ಅರಣ್ಯ ಇಲಾಖೆಯ www.aranyavihaara.karanataka.gov.inಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕಿತ್ತು. ದಿನಾಂಕ ನಿಗದಿ ಮಾಡಿಕೊಂಡ ನಂತರವೇ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಭಕ್ತಾದಿಗಳಿಗೆ ಹಾಗೂ ಚಾರಣಿಗರಿಗೆ ಬೆಳಗ್ಗೆ 6 ರಿಂದ 10 ಗಂಟೆಯ ತನಕದ ಸ್ಲಾಟ್ ಬುಕ್ಕಿಂಗ್ಗೆ ಅವಕಾಶ ನೀಡಲಾಗಿತ್ತು. ಜೊತೆಗೆ ಒಬ್ಬರಿಗೆ 200ರೂಪಾಯಿ ಬೆಲೆ ನಿಗದಿ ಮಾಡಿತ್ತು.
14 ಕಿ.ಮೀ. ನಾಗಮಲೆ ಯಾತ್ರೆಗೆ ಹಳೆಯೂರು ಗೇಟ್ನಿಂದ ಚಾರಣ ಆರಂಭವಾಗುತ್ತದೆ. ಜೊತೆಗೆ ಚಾರಣ ಮಾಡುವವರೊಂದಿಗೆ ಗೈಡ್ ಕೂಡ ಇರುತ್ತಿದ್ದರು. ಅರಣ್ಯ ಇಲಾಖೆಯಿಂದ ಪ್ರಾಯೋಗಿಕವಾಗಿ ಒಂದು ದಿನಕ್ಕೆ 200 ಜನರಿಗೆ ಮಾತ್ರ ಚಾರಣಕ್ಕೆ ಅವಕಾಶ ಕಲ್ಪಿಸಿತ್ತು.
ಆದರೆ, 'ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಭಕ್ತರು ಬರುವುದರಿಂದ ಭಕ್ತರ ಮಿತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು' ಎಂದು ಸಾಲೂರು ಮಠದ ಶಾಂತಮಲ್ಲಿಕಾರ್ಜುನಸ್ವಾಮಿ ಅವರು ಪ್ರಧಾನ ಮುಖ್ಯಾರಣ್ಯ ಸುರಕ್ಷಣಾಧಿಕಾರಿಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಪಿಸಿಸಿಎಫ್ 'ದೀಪಾವಳಿ, ಕಾರ್ತಿಕ ಸೋಮವಾರಗಳು ಸೇರಿ ಇತರೆ ವಿಶೇಷ ದಿನಗಳಲ್ಲಿ ಮಾತ್ರ ವನ್ಯಜೀವಿ ಕಾಯ್ದೆ ಉಲ್ಲಂಘನೆಯಾಗದಂತೆ ಹಾಗೂ ಅರಣ್ಯ ಮತ್ತು ವನ್ಯಜೀವಿಗಳಿಗೆ ಹಾನಿ ಉಂಟು ಮಾಡದೆ ಷರತ್ತಿಗೆ ಒಳಪಟ್ಟು ಬೆಳಿಗ್ಗೆ 6 ಗಂಟೆಯಿಂದ 11 ಗಂಟೆ ಒಳಗೆ ನಾಗಮಲೆಗೆ ಹೋಗಬಹುದು' ಎಂದು ತಿಳಿಸಿದೆ.
ಮಲೆ ಮಹದೇಶ್ವರಸ್ವಾಮಿಯು ಲಿಂಗದ ರೂಪದಲ್ಲಿ ನಾಗಮಲೆಯಲ್ಲಿ ನೆಲೆಸಿದ್ದಾರೆಂಬ ನಂಬಿಕೆ ಭಕ್ತರದ್ದಾಗಿದೆ. ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದವರು ನಾಗಮಲೆಗೆ ಬರುವುದು ಸಂಪ್ರದಾಯವಾಗಿತ್ತು. ದಟ್ಟಕಾನಿನ ಮಧ್ಯೆ ಕಾಲ್ನಡಿಗೆಯಲ್ಲಿ ಸಾಗುವುದು ದೈವಿಕದ ಜೊತೆ ರೋಮಾಂಚಕ ಅನುಭ ನೀಡಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications