ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ: ಯಾರ ಕಣ್ಣಿಗೆ ಸುಣ್ಣ, ಯಾರಿಗೆ ಬೆಣ್ಣೆ
Recommended Video

ಬೆಂಗಳೂರು, ಜುಲೈ 31: ಮೈತ್ರಿ ಸರ್ಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ಆಯ್ಕೆ ಮಾಡಿದ್ದು ಸಂಪ್ರದಾಯದಂತೆ ಸಚಿವರುಗಳನ್ನೇ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದೆ.
ಈ ಬಾರಿ ಅತೃಪ್ತರ ಸಂಖ್ಯೆ ಹೆಚ್ಚಿದ್ದ ಕಾರಣ ಸಚಿವರಲ್ಲದಿವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡುತ್ತಾರೆಂಬ ಊಹಾಪೋಹಗಳು ಹಬ್ಬಿದ್ದವು ಆದರೆ ಅದೆಲ್ಲವೂ ಸುಳ್ಳಾಗಿದೆ.
ಜಿಲ್ಲೆಯಲ್ಲಿ ಪ್ರಭಾವ ಹೊಂದಿರುವ ನಾಯಕರಿಗೆ ಆ ಜಿಲ್ಲೆಯ ಉಸ್ತುವಾರಿ ನೀಡಲು ಎರಡೂ ಪಕ್ಷಗಳು ಪ್ರಯತ್ನಿಸಿವೆ. ಪ್ರಮುಖವಾಗಿ ಬೆಂಗಳೂರು ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಜಾರ್ಜ್ ಫರ್ನಾಂಡಿಸ್ಗೆ ಹಿನ್ನಡೆಯಾಗಿದ್ದು ನಗರ ಉಸ್ತುವಾರಿ ಪರಮೇಶ್ವರ್ ಅವರ ಬಳಿ ಇದೆ.

ಪರಮೇಶ್ವರ್ಗೆ ಡಬಲ್ ಧಮಾಕಾ
ಜಿ.ಪರಮೇಶ್ವರ್ ಅವರಿಗೆ ತಮ್ಮ ಸ್ವ ಜಿಲ್ಲೆ ತುಮಕೂರು ಜೊತೆಗೆ ಬೆಂಗಳೂರು ನಗರ ಉಸ್ತುವಾರಿ ನೀಡಲಾಗಿದೆ. ಬೆಂಗಳೂರು ಉಸ್ತುವಾರಿ ಸ್ಥಳೀಯರಾದ ಕೆ.ಜೆ.ಜಾರ್ಜ್ ಅವರಿಗೆ ದೊರೆಯುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಹಿನ್ನಡೆ ಆಗಿದೆ. ಕಳೆದ ಬಾರಿ ತುಮಕೂರಿನ ಉಸ್ತುವಾರಿಯನ್ನು ಟಿ.ಬಿ.ಜಯಚಂದ್ರ ಅವರಿಗೆ ನೀಡಲಾಗಿತ್ತು.

ಬೇಡದ ಜಿಲ್ಲೆಗೆ ಹೊರಟ ಜಮೀರ್
ಚಾಮರಾಜಪೇಟೆಯಲ್ಲಿ ಭರ್ಜರಿ ವಿಜಯ ಸಾಧಿಸಿದ್ದ ಜಮೀರ್ ಅಹ್ಮದ್ ಖಾನ್ ಅವರಿಗೆ ಉತ್ತರದ ಹಾವೇರಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಸಿದ್ದರಾಮಯ್ಯ ಬೆಂಬಲಿಗರು ಎನ್ನುವ ಕಾರಣಕ್ಕೆ ಈ ಶಿಕ್ಷೆಯೋ ಎಂಬ ಅನುಮಾನವೂ ಇದೆ. ಜಮೀರ್ ಅವರಿಗೆ ಮೈಸೂರು ಅಥವಾ ಚಾಮರಾಜನಗರದ ಮೇಲೆ ಕಣ್ಣಿತ್ತು. ಹಾವೇರಿ ಜಿಲ್ಲೆಯ ಉಸ್ತುವಾರಿಯನ್ನು ರುದ್ರಪ್ಪ ಲಮಾಣಿ ವಹಿಸಿದ್ದರು.

ಬಳ್ಳಾರಿ ರೆಡ್ಡಿಗಳಿಗೆ ಠಕ್ಕರ್ ಕೊಡಲಿದ್ದಾರೆ ಡಿಕೆಶಿ
ಡಿ.ಕೆ.ಶಿವಕುಮಾರ್ ಅವರಿಗೆ ಒಕ್ಕಲಿಗರು ಬಹುಸಂಖ್ಯಾತರಾಗಿರುವ ಜೆಡಿಎಸ್ ಭದ್ರ ಕೋಟೆ ರಾಮನಗರದ ಉಸ್ತುವಾರಿ ನೀಡಲಾಗಿದೆ. ಅದರ ಜೊತೆಗೆ ಬಳ್ಳಾರಿ ಸಹ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿದೆ. ಡಿಕೆ ಶಿವಕುಮಾರ್ ಕಳೆದ ಬಾರಿ ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು.

ಜಯಮಾಲಾಗೆ ಉಡುಪಿ
ಅದೃಷ್ಟವಶಾತ್ ಮಂತ್ರಿ ಆಗಿದ್ದಾರೆ ಎಂದು ಸ್ವಪಕ್ಷದಿಂದಲೇ ಟೀಕೆ ಎದುರಿಸುತ್ತಿರುವ ಜಯಮಾಲಾ ಅವರಿಗೆ ಉಡುಪಿ ಜಿಲ್ಲೆ ನೀಡಲಾಗಿದೆ. ಅದೃಷ್ಟದಲ್ಲೇ ಮಂತ್ರಿ ಆದ ಆರ್.ಶಂಕರ್ ಅವರಿಗೆ ಕೊಪ್ಪಳದ ಉಸ್ತುವಾರಿ ವಹಿಸಲಾಗಿದೆ. ಬಿಎಸ್ಪಿಯ ಮಹೇಶ್ ಅವರಿಗೆ ಗದಗದ ಉಸ್ತುವಾರಿ ನೀಡಲಾಗಿದೆ.

ಪಟ್ಟು ಬಿಡದ ಜಿ.ಟಿ.ದೇವೇಗೌಡಗೆ ಒಲಿದ ಮೈಸೂರು
ಮೈಸೂರನ್ನು ಸಿದ್ದರಾಮಯ್ಯ ಅವರ ಬಿಗಿ ಮುಷ್ಠಿಯಿಂದ ಸಡಿಲಗೊಳಿಸಲು ಮುಂದಾಗಿರುವ ಜಿ.ಟಿ.ದೇವೇಗೌಡ ಅವರಿಗೆ ಇನ್ನೊಂದು ಗೆಲುವು ಎಂಬಂತೆ ಮೈಸೂರಿನ ಉಸ್ತುವಾರಿ ಅವರಿಗೆ ದೊರೆತಿದೆ. ಜಿಲ್ಲೆಯಲ್ಲಿ ಸಿದ್ದರಾಮಯ್ಯ ಅವರ ಪ್ರಭಾವ ಕಡಿಮೆ ಮಾಡಲು ಈ ಅವಕಾಶವನ್ನು ಅವರು ಬಳಸಿಕೊಳ್ಳುವ ಸಾಧ್ಯತೆ ಇದೆ.

ಹಾಸನಕ್ಕೆ ಎಚ್.ಡಿ.ರೇವಣ್ಣ
ಸ್ವಂತ ಜಿಲ್ಲೆಗೆ ಎಚ್.ಡಿ.ರೇವಣ್ಣ ಅವರು ಉಸ್ತುವಾರಿ ಆಗಿದ್ದಾರೆ. ರೇವಣ್ಣ ಅವರು ಎರಡು ಜಿಲ್ಲೆಯ ಉಸ್ತುವಾರಿ ಕೇಳಬಹುದೆಂಬ ನಿರೀಕ್ಷೆ ಇತ್ತು ಆದರೆ ಅವರಿಗೆ ಒಂದು ಕ್ಷೇತ್ರವನ್ನು ಮಾತ್ರವೇ ನೀಡಲಾಗಿದೆ.

ಎರಡು ಜಿಲ್ಲೆಗಳನ್ನು ಪಡೆದವರಿವರು
ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ತುಮಕೂರಿನ ಜೊತೆಗೆ ಬೆಂಗಳೂರು ಗ್ರಾಮಾಂತರ , ಆರ್.ವಿ.ದೇಶಪಾಂಡೆ ಅವರಿಗೆ ಉತ್ತರ ಕನ್ನಡ ಮತ್ತು ಧಾರವಾಡ, ಕೃಷ್ಣಬೈರೇಗೌಡ ಅವರಿಗೆ ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳನ್ನು ನೀಡಲಾಗಿದೆ. ಜೆಡಿಎಸ್ನ ಮಂತ್ರಿಗಳೆಲ್ಲರಿಗೂ ಒಂದೊಂದು ಜಿಲ್ಲೆಯನ್ನು ಮಾತ್ರವೇ ನೀಡಲಾಗಿದೆ.
-
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications