Chinnaswamy Stadium Stampede; ನ್ಯಾ.ಮೈಕಲ್ ಡಿ.ಕುನ್ಹಾ ವರದಿಗೆ ಸರ್ಕಾರ ಒಪ್ಪಿಗೆ : ಡಾ.ಜಿ.ಪರಮೇಶ್ವರ್
ಬೆಂಗಳೂರು, ಜುಲೈ 25: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕುರಿತು ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ.ಕುನ್ಹಾ ಅವರ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುನ್ಹಾ ಅವರ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ. ಅದರಲ್ಲಿ ಶಿಫಾರಸ್ಸು ಮಾಡಿರುವ ಅಂಶಗಳನ್ನು ಅನುಷ್ಟಾನ ಮಾಡುತ್ತೇವೆ. ಆರ್ಸಿಬಿ, ಡಿಎನ್ಎ ಅವರ ವಿರುದ್ಧದ ಹೈಕೋರ್ಟ್ನಲ್ಲಿರುವ ಕೇಸ್ಗಳು ಮುಂದುವರೆಯುತ್ತವೆ ಎಂದರು.

ಪೊಲೀಸ್ ಅಧಿಕಾರಿಗಳನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಇಲಾಖಾ ವಿಚಾರಣೆಗೆ ಒಳಪಡಿಸಲು ಸರ್ಕಾರ ತೀರ್ಮಾನಿಸಿದೆ. ಮುಂದೆ ನಡೆಯುವ ಮ್ಯಾಚ್ಗಳಿಗೆ ಅನುಮತಿ ನೀಡುವಾಗ ಯಾವ ರೀತಿಯ ಕಂಡೀಷನ್ಸ್ ಹಾಕಬೇಕು. ಜನಸಮೂಹ ನಿಯಂತ್ರಣಕ್ಕೆ ನಿಯಮ ಮಾಡಬೇಕು ಎಂಬುದು ಸೇರಿದಂತೆ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರ ಪರಿಗಣಿಸುತ್ತದೆ ಎಂದರು.
ಬಿಜೆಪಿಯವರು ವಿರೋಧ ಪಕ್ಷದ ಸ್ಥಾನದಲ್ಲಿದ್ದಾರೆ. ಪಾಸಿಟಿವ್ ಟೀಕೆಗಳನ್ನು ಮಾಡಿ, ಸಲಹೆಗಳನ್ನು ನೀಡಲಿ. ಸಲಹೆಗಳು ಉತ್ತಮವಾಗಿದ್ದರೆ ವಿರೋಧ ಪಕ್ಷ ಅಂದುಕೊಳ್ಳದೆ, ರಾಜ್ಯದ ಮತ್ತು ಜನರ ದೃಷ್ಟಿಯಿಂದ ಪರಿಗಣಿಸುತ್ತೇವೆ ಎಂದು ಹೇಳಿದರು. ಬಿಜೆಪಿಯವರು ಟೀಕೆಗಳನ್ನು ಮಾಡುತ್ತಿರುತ್ತಾರೆ. ಅದಕ್ಕೆ ಏನು ಮಾಡಲು ಆಗುವುದಿಲ್ಲ. ವಿರೋಧ ಪಕ್ಷದಲ್ಲಿದ್ದಾಗ ಟೀಕೆ ಮಾಡುವುದು ಸಹಜ. ಅದಕ್ಕೆ ಮಾಡಬೇಡಿ ಅಂತ ಹೇಳಲು ಆಗುತ್ತದೆಯೇ? ಎಂದರು. ವರದಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಅವರ ಹೆಸರು ಉಲ್ಲೇಖವಿಲ್ಲ. ಆರ್ಸಿಬಿ, ಡಿಎನ್ಎ, ಕೆಎಸ್ಸಿಎ, ಪೊಲೀಸ್ ಅಧಿಕಾರಿಗಳ ಬಗ್ಗೆ ಉಲ್ಲೇಖವಿದೆ.
ರಾಹುಲ್ ಗಾಂಧಿ ಹೇಳಿಕೆಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈಗಾಗಲೇ ಪಕ್ಷದ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ. ಅಂತದ್ದು ನಡೆದಿದೆ ಎಂದು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಡೀ ದೇಶದಲ್ಲಿ ಲೋಕಸಭಾ ಚುನಾವಣೆ ಅಕ್ರಮ ಆಗಿದೆ. ಕರ್ನಾಟಕದಲ್ಲೂ ಆಗಿದೆ ಅಂದಿದ್ದಾರೆ. ಅದನ್ನ ಸಾಬೀತುಪಡಿಸುವುದಾಗಿ ತಿಳಿಸಿದ್ದಾರೆ ಎಂದರು
ಮಹಾದಾಯಿ ವಿಚಾರದ ಕುರಿತು ಪ್ರತಿಕ್ರಿಯಿಸಿ 2022ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಆನಂತರದ ಬೆಳವಣಿಗೆಯಲ್ಲಿ ನಿಲ್ಲಿಸಿದರು. ಗೋವಾ ಮತ್ತು ರಾಜ್ಯಕ್ಕು ಒಂದು ರೀತಿಯ ಸಂಘರ್ಷ ಪ್ರಾರಂಭವಾಗಿದೆ. ಕುಡಿಯುವ ನೀರಿನ ಯೋಜನೆಗೆ ಯಾವುದೇ ರೀತಿಯ ನಿರ್ಬಂಧ ಇರಬಾರದು ಎಂದು ಕೇಂದ್ರ ಸರ್ಕಾರ ಅನೇಕ ಸಂದರ್ಭಗಳಲ್ಲಿ ಹೇಳಿದೆ. ಮಹಾದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಬೇಗ ಬಗೆಹರಿಸಿಕೊಟ್ಟರೆ ಸಂತೋಷ. ಇದನ್ನೇ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ತಿಳಿಸಿದರು
ಮೇಕೆದಾಟು ಯೋಜನೆ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಯೋಜನೆ. ನೀರಾವರಿ ಯೋಜನೆ ಎಂದುಕೊಂಡಿಲ್ಲ. ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ 47 ಟಿಎಂಸಿ ನೀರು ಸಿಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಸರ್ವಪಕ್ಷಗಳ ಸಭೆ ಕರೆಯುವ ಬಗ್ಗೆ ಮುಖ್ಯಮಂತ್ರಿಗಳು, ನೀರಾವರಿ ಸಚಿವರು ತೀರ್ಮಾನ ಮಾಡುತ್ತಾರೆ ಎಂದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications