ವಿವಾದಿತ ವಾಲ್ಮೀಕಿ ಯಾರು? ಪುಸ್ತಕ ಮುಟ್ಟುಗೋಲು
ಬೆಂಗಳೂರು, ಜು.25 : ವಾಲ್ಮೀಕಿ ಜನಾಂಗದ ಕೆಂಗಣ್ಣಿಗೆ ಗುರಿಯಾಗಿದ್ದ ವಿದ್ವಾಂಸ ಡಾ.ಕೆ.ಎಸ್.ನಾರಾಯಣಚಾರ್ಯ ಅವರು ಬರೆದ ವಾಲ್ಮೀಕಿ ಯಾರು? ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿದೆ. ವಿಧಾನಪರಿಷತ್ತಿನಲ್ಲಿ ಸಭಾನಾಯಕ ಎಸ್.ಆರ್.ಪಾಟೀಲ್ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಕುರಿತು ಮಾಹಿತಿ ನೀಡಿದ್ದಾರೆ.
ಗುರುವಾರದ ವಿಧಾನ ಪರಿಷತ್ ಕಲಾಪದ ವೇಳೆ ಸಭಾನಾಯಕ ಎಸ್.ಆರ್.ಪಾಟೀಲ್ ಈ ವಿಷಯ ಪ್ರಕಟಿಸಿದ್ದಾರೆ. ವಾಲ್ಮೀಕಿ ಯಾರು? ಕೃತಿಯನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸದಸ್ಯ ವಿ.ಎಸ್.ಉಗ್ರಪ್ಪ, ಸದನದ ಬಾವಿಗಿಳಿದು ಈ ಕುರಿತು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಮಣಿದ ಸರ್ಕಾರ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿದೆ ಮತ್ತು ಕೃತಿಯ ಬಗ್ಗೆ ರಾಜ್ಯದ ಹಲವು ಕಡೆ ದಾಖಲಾಗಿರುವ ದೂರುಗಳನ್ವಯ ಕೃತಿಕಾರರ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್.ಆರ್.ಪಾಟೀಲ್ ಸದನಕ್ಕೆ ಮಾಹಿತಿ ನೀಡಿದರು. [ವಾಲ್ಮೀಕಿ ಯಾರು? ಪುಸ್ತಕದ ವಿರುದ್ಧ ಭುಗಿಲೆದ್ದ ಆಕ್ರೋಶ]
ಉಗ್ರಪ್ಪ ಹೇಳಿದ್ದೇನು ? : ಸದನದಲ್ಲಿ ವಾಲ್ಮೀಕಿ ಯಾರು? ಪುಸ್ತಕದ ಕುರಿತು ಮಾತನಾಡಿದ ವಿ.ಎಸ್.ಉಗ್ರಪ್ಪ ಅವರು, ವಾಲ್ಮೀಕಿ ಬಗ್ಗೆ ಸಮಾಜದಲ್ಲಿ ಉತ್ತಮ ಗೌರವವಿದೆ. ಆದರೆ, ನಾರಾಯಣಾಚಾರ್ಯ ಅವರು ವಾಲ್ಮೀಕಿ ಬೇಡ ಜನಾಂಗದವನಲ್ಲ, ಬ್ರಾಹ್ಮಣ ಜನಾಂಗಕ್ಕೆ ಸೇರಿದವನು ಎಂದು ಕೃತಿಯಲ್ಲಿ ಬರೆದಿದ್ದಾರೆ ಎಂದರು.
ಕೃತಿಯಿಂದಾಗಿ ಜನಾಂಗದವರಿಗೆ ಸಾಕಷ್ಟು ನೋವು ಉಂಟಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಕೃತಿಯನ್ನು ನಿಷೇಧಿಸಬೇಕು, ಹೊರಬಂದಿರುವ ಕೃತಿಗಳನ್ನು ಸುಟ್ಟು ಹಾಕಬೇಕು ಎಂದು ಆಗ್ರಹಿಸಿದರು. ಜೆಡಿಎಸ್ ಸದಸ್ಯರಾದ ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ ಅವರು ಕೃತಿಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರೆ, ಬಿಜೆಪಿಯ ನಾರಾಯಣ ಬಾಂಢಗೆ ಮತ್ತಿತರ ಸದಸ್ಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಹೊಸಪೇಟೆ ಬಂದ್ : ಸರ್ಕಾರ "ವಾಲ್ಮೀಕಿ ಯಾರು?" ಎಂಬ ಪುಸ್ತಕವನ್ನು ಮುಟ್ಟುಗೋಲು ಹಾಕಬೇಕು ಮತ್ತು ಪುಸ್ತಕ ಬರೆದ ಕೆ.ಎಸ್.ನಾರಾಯಣಾಚಾರ್ಯ ಅವರನ್ನು ಬಂಧಿಸಬೇಕು ಎಂದು ವಾಲ್ಮೀಕಿ ಜನಾಂಗದ ನಾಯಕರು ಕೆಲವು ದಿನಗಳ ಹಿಂದೆ ಒತ್ತಾಯಿಸಿದ್ದರು. ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಒತ್ತಾಯಿಸಿ ಹೊಸಪೇಟ್ ಬಂದ್ ನಡೆಸಿದ್ದರು.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications