ಮಳೆ ಬಂದಾಗ ಸರ್ಕಾರಿ ಶಾಲೆಗಳಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳೇನು?
ಬೆಂಗಳೂರು, ಜೂನ್. 16: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇದೆ ವೇಳೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸಾರ್ವಜನಿಕರ ಮನೆ, ಬೆಳೆ ನಷ್ಟ ಕೂಡ ವರದಿಯಾಗಿದೆ. ಸರ್ಕಾರಿ ಶಾಲೆಗಳ ಸ್ಥಿತಿ ಕೂಡ ಇದಕ್ಕೆ ಹೊರತಲ್ಲ. ಹೀಗಾಗಿಯೇ ಮಳೆ ಬರುವ ಸಂದರ್ಭದಲ್ಲಿ ರಾಜ್ಯದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತ ರಾಜ್ಯ ಸರ್ಕಾರದ ಸುತ್ತೋಲೆ ಹೊರಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರ ಕಚೇರಿ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. 2024-25 ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ ದಿನಾಂಕ 29/05/2024 ರಿಂದ ಶಾಲೆಗಳು ಪ್ರಾರಂಭವಾಗಿರುತ್ತದೆ. ಪ್ರಸ್ತುತ, ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಮಳೆಯುಂಟಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಈ ಕೆಳಕಂಡ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ಮತ್ತು ಸಿಬ್ಬಂದಿಗೆ ಈ ಮೂಲಕ ಮತ್ತೊಮ್ಮೆ ಸೂಚಿಸಿದೆ.

ಮಳೆ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು
1. ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿರುವ ಕೆಲವು ಶಾಲಾ ಕಟ್ಟಡಗಳು ಯಾವುದೇ ಸಂದರ್ಭದಲ್ಲಿ ಹಾನಿಗೊಳಗಾಗುವ ಅಥವಾ ಬಿದ್ದು ಹೋಗುವ ಸಂಭವವಿರುತ್ತದೆ. ಪ್ರಯುಕ್ತ, ಅಂತಹ ಶಾಲಾ ಕಟ್ಟಡಗಳನ್ನು, ತರಗತಿಯ ಕೊಠಡಿಗಳನ್ನು ಮತ್ತು ಶೌಚಾಲಯಗಳನ್ನು ಬಳಸದೇ, ಸಮೀಪದ ಸುಸ್ಥಿತಿಯಲ್ಲಿರುವ ಕಟ್ಟಡ, ಕೊಠಡಿಗಳನ್ನು ಹಾಗೂ ಶೌಚಾಲಯಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು.
ವಿದ್ಯಾರ್ಥಿಗಳು ಇಂತಹ ಕಟ್ಟಡಗಳ, ಕೊಠಡಿಗಳ, ಶೌಚಾಲಯಗಳ, ಕಾಂಪೌಂಡ್ಗಳ ಹಾಗೂ ಶಾಲಾ ಆವರಣದಲ್ಲಿನ ಮರಗಳ ಸಮೀಪದಲ್ಲಿ ಸುತ್ತಾಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸತಕ್ಕದ್ದು. ಶಿಥಿಲಾವಸ್ಥೆಯಲ್ಲಿರುವ ಅಥವಾ ಅಪಾಯಕಾರಿಯಾಗಿರುವ ಇಂತಹ ಸನ್ನಿವೇಶಗಳ ತೀವ್ರತೆಯನ್ನು ಪರಿಗಣಿಸಿ ಅವುಗಳನ್ನು ತೆರವುಗೊಳಿಸಲು ಅಥವಾ ನೆಲಸಮಗೊಳಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು.
2. ಕೆಲವೆಡೆ ತೀವ್ರ ಮಳೆಯಿಂದಾಗಿ ಪ್ರವಾಹ ಅಥವಾ ನೆರೆ ಬಂದು ವಿದ್ಯಾರ್ಥಿಗಳು ಶಾಲೆಗಳಿಗೆ ಬಂದು ಹೋಗಲು ತೊಂದರೆಯುಂಟಾಗುವ ಅಥವಾ ಕೆಲವು ಸಂದರ್ಭಗಳಲ್ಲಿ ಮಳೆಯಿಂದಾಗಿ ಶಾಲೆಗಳ ಕೊಠಡಿಗಳಲ್ಲಿ ಮತ್ತು ಆವರಣದೊಳಗೆ ನೀರು ಸಂಗ್ರಹವಾಗುವ ಸಂಭವವಿರುತ್ತದೆ.

3. ಇಂತಹ ಸಂದರ್ಭಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ, ಪುರ ಸಭೆ, ನಗರ ಸಭೆ, ಮಹಾನಗರ ಪಾಲಿಕೆಗಳ (ಸ್ಥಳೀಯ ಸಂಸ್ಥೆಗಳ) ಸಹಕಾರದಿಂದ ಶಾಲಾ ಕಟ್ಟಡದಲ್ಲಿ ಅಥವಾ ಆವರಣದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸುವುದು.
4. ಇಂತಹ ಸನ್ನಿವೇಶಗಳಲ್ಲಿ ಅಗತ್ಯಾನುಸಾರ / ಸಂದರ್ಭಾನುಸಾರ ಶಾಲಾ ಮುಖ್ಯೋಪಾಧ್ಯಾಯರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಜಿಲ್ಲಾ ಉಪನಿರ್ದೇಶರು(ಆಡಳಿತ) ರವರ ಪೂರ್ವಾನುಮತಿ ಪಡೆದು ಶಾಲೆಗಳಿಗೆ ರಜೆಯನ್ನು ಘೋಷಿಸುವುದು. ಅಂತಹ ರಜಾ ದಿನಗಳಲ್ಲಿನ ಪಾಠ-ಪ್ರವಚನಗಳನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಿದೆ.
5. ಶಾಲಾ ಆವರಣದಲ್ಲಿ ತೆರೆದ ಸಂಪು /ಪಿಟ್ /ಫೌಂಡೇಷನ್ ಪಿಟ್ /ತೆರೆದ ಗುಂಡಿ /ಮ್ಯಾನ್ ಹೋಲ್ ಇತ್ಯಾದಿಗಳು ಇದ್ದಲ್ಲಿ ಅವುಗಳನ್ನು ಯಾವುದೇ ಕಾರಣಕ್ಕೂ ತೆರೆದಿಡದೇ ಸುರಕ್ಷಿತವಾಗಿರಿಸುವ/ಭದ್ರಗೊಳಿಸುವ ಕುರಿತು ಅಗತ್ಯ ಕ್ರಮವಹಿಸುವುದು ಹಾಗೂ ವಿದ್ಯಾರ್ಥಿಗಳು ಅವುಗಳ ಬಳಿ ಹೋಗದಂತೆ ಮುನ್ನೆಚ್ಚರಿಕೆ ವಹಿಸುವುದು.
6. ವಿದ್ಯುಚ್ಛಕ್ತಿ ಸಂಪರ್ಕ ಪಡೆದಿರುವ wire/cable ಗಳು ಯಾವುದೇ ಕಾರಣಕ್ಕೂ ನೆಲದ ಮೇಲೆ ಹಾದು ಹೋಗದಂತೆ ಹಾಗೂ ವಿದ್ಯಾರ್ಥಿಗಳಿಗೆ ಎಟುಕದಂತೆ ಕ್ರಮವಹಿಸುವುದು ಮತ್ತು ಸುರಕ್ಷಿತವಲ್ಲದ ವಿದ್ಯುತ್ ಸಂಪರ್ಕದಿಂದ ಸಂಭವಿಸಬಹುದಾದ ಅವಘಡಗಳ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು. ಇಂತಹ ಪ್ರಕರಣಗಳಲ್ಲಿ ಈ ಕಚೇರಿಯ ಸುತ್ತೋಲೆ ಸಂಖ್ಯೆ: ಎಡಿಎಂ2(4)/ಶಾ.ಆ.ವಿ-31/ 2021-22 ದಿನಾಂಕ: 13.09.2021 ರಂತೆ ನಿಯಮಾನುಸಾರ ಸೂಕ್ತ ಕ್ರಮಗಳನ್ನು ವಹಿಸತಕ್ಕದ್ದು.
7. ಶಾಲೆಗಳಲ್ಲಿ ಸಣ್ಣ ಮಟ್ಟದ ದುರಸ್ತಿಗಳಿದ್ದಲ್ಲಿ ಹಾಗೂ ಕಟ್ಟಡದಿಂದ (ಮೇಲ್ಬಾವಣಿ ಇತ್ಯಾದಿ) ನೀರು ಸೋರುವಿಕೆ ಕಂಡುಬಂದಲ್ಲಿ ಗ್ರಾಮಪಂಚಾಯ್ತಿ/ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ತುರ್ತಾಗಿ ದುರಸ್ತಿಯನ್ನು ಕೈಗೊಳ್ಳುವುದು.
ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಹಾಗೂ ಉಲ್ಲೇಖ (2), (3) ಮತ್ತು (4) ರ ಸುತ್ತೋಲೆಗಳಲ್ಲಿ ಈ ಸಂಬಂಧ ಈಗಾಗಲೇ ತಿಳಿಸಿರುವ ಎಲ್ಲಾ ಅಂಶಗಳನ್ನು ಕಟ್ಟಿನಿಟ್ಟಾಗಿ ಪಾಲಿಸುವುದು ಹಾಗೂ ಸ್ಥಳೀಯ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳ ಮತ್ತು ತಾಲ್ಲೂಕು/ಜಿಲ್ಲಾಡಳಿತಗಳ ಸಹಕಾರದೊಂದಿಗೆ/ಮಾರ್ಗದರ್ಶನದೊಂದಿಗೆ ಅಗತ್ಯ ಕ್ರಮಗಳನ್ನು ಸಕಾಲದಲ್ಲಿ ಕೈಗೊಳ್ಳುವುದು.
ಮಳೆಯಿಂದ ಯಾವುದೇ ವಿದ್ಯಾರ್ಥಿ ಅಥವಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ, ಶಾಲೆಯ ಆವರಣದಲ್ಲಿ ಹಾಗೂ ಶಾಲೆಯ ಸುತ್ತ-ಮುತ್ತ ಯಾವುದೇ ರೀತಿಯ ತೊಂದರೆ ಅಥವಾ ಜೀವ ಹಾನಿ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಹಾಗೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಶಾಲೆಗಳನ್ನು ನಡೆಸಿಕೊಂಡು ಹೋಗುವಂತೆ ಈ ಮೂಲಕ ಸೂಚಿಸಿದೆ. ಪ್ರತಿ ವರ್ಷ ಇಂತಹ ಸನ್ನಿವೇಶಗಳಲ್ಲಿ ಮೇಲ್ಕಂಡ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮತ್ತು ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ತಿಳಿಸಲಾಗಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications