ಸರಕಾರೀ ನೌಕರರಿಗೆ ಹೀಗೂ ಮಾಡಬಹುದು ಎಂದು ತೋರಿಸಿಕೊಟ್ಟ ಎಚ್ಡಿಕೆ
Recommended Video

ಬೆಂಗಳೂರು, ಅ 8: ಬಹುಷಃ ಕರ್ನಾಟಕದ ಇತಿಹಾಸದಲ್ಲಿ, ಸರಕಾರ ತೆಗೆದುಕೊಂಡ ಅಪರೂಪದ ನಿರ್ಧಾರವಿದು ಎಂದರೆ ಅತಿಶಯೋಕ್ತಿಯಾಗಲಾರದು. ಸರಕಾರೀ ನೌಕರರಿಗೆ ಬೋನಸ್, ವೇತನ ಹೆಚ್ಚಳ, ಭತ್ಯೆ ಮುಂತಾದ ವಿಚಾರದ ಬಗ್ಗೆ ಕೇಳಿದ್ದೇವೆ. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ, ಹೀಗೂ ಒಂದು ಕ್ರಮ ತೆಗೆದುಕೊಳ್ಳಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.
ಇದೊಂದು ರಜೆಗೆ ಸಂಬಂಧಪಟ್ಟ ವಿಚಾರವಾದರೂ, ಲಕ್ಷಾಂತರ ಸರಕಾರೀ ನೌಕರರು ಸಂತೋಷ ಪಡುವಂತಹ ವಿಚಾರ. ದಸರಾ/ನವರಾತ್ರಿ ಪ್ರಯುಕ್ತ ಸಾಲುಸಾಲು ರಜೆ ಬರುತ್ತಿರುವ ಹಿನ್ನಲೆಯಲ್ಲಿ, ರಜೆಯ ಖುಷಿಯನ್ನು ಇನ್ನಷ್ಟು ಸವಿಯಲು, ಕುಟುಂಬದ ಜೊತೆ ಕಾಲಕಳೆಯಲು ಸರಕಾರ ಅನುವು ಮಾಡಿಕೊಡುವ ಸಾಧ್ಯತೆಯಿದೆ.
ಇದೇ ಶನಿವಾರ (ಅ 13) ಸೆಕೆಂಡ್ ಸಾಟರ್ಡೇ ರಜೆಯನ್ನು ರದ್ದು ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಅಂದು ಕೆಲಸ ನಿರ್ವಹಿಸಿ, ಅದಕ್ಕೆ ಪರ್ಯಾಯವಾಗಿ ಅಕ್ಟೋಬರ್ 20ಕ್ಕೆ (ಮೂರನೇ ಶನಿವಾರ) ರಜೆ ನೀಡುವ ನಿರ್ಧಾರಕ್ಕೆ ಸರಕಾರ ಬಂದಿದೆ. ಹಾಗಾಗಿ, ಒಟ್ಟು ನಾಲ್ಕು ದಿನಗಳ ರಜೆಯ ಮಜಾವನ್ನು ಸರಕಾರೀ ನೌಕರರು ಪಡೆಯುವಂತಾಗುತ್ತದೆ.

ಗುರುವಾರ (ಅ 18) ಆಯುಧಪೂಜೆ, ಶುಕ್ರವಾರ (ಅ 19) ವಿಜಯದಶಮಿ, ಶನಿವಾರ (ಅ 20) ಮತ್ತು ಭಾನುವಾರ (ಅ 21), ಹೀಗೆ ಒಟ್ಟು ನಾಲ್ಕು ದಿನಗಳ ಸಾಲುಸಾಲು ರಜೆಯನ್ನು ನೌಕರರು ಪಡೆಯಬಹುದಾಗಿದೆ. ಇದು ಈ ತಿಂಗಳಿಗೆ ಮಾತ್ರ ಮಾಡಿರುವಂತಹ ಬದಲಾವಣೆ.
ಒಂದು ವೇಳೆ ಮೂರನೇ ಶನಿವಾರ ರಜೆ ನೀಡದಿದ್ದರೂ, ಸಿಬ್ಬಂದಿಗಳು ರಜೆ ಹಾಕುವ ಸಾಧ್ಯತೆಯಿದೆ, ಅದರ ಬದಲು ಸೆಕೆಂಡ್ ಸಾಟರ್ಡೇಯನ್ನು ಕೆಲಸದ ದಿನವನ್ನಾಗಿ ಮಾಡಿದರೆ ಸರಕಾರೀ ಕೆಲಸಗಳು ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನೆರಡು ದಿನದಲ್ಲಿ ರಜೆಯ ಸಂಬಂಧ ಸುತ್ತೋಲೆ ಹೊರಡಿಸುವುದಾಗಿ ಡಿಪಿಎಆರ್ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ) ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದು ಗಮನಿಸಬೇಕಾದ ಅಂಶವೇನಂದರೆ, ರಾಜ್ಯ ಸರಕಾರೀ ನೌಕರರಿಗೆ ಮಾತ್ರ ಇದು ಸಂಬಂಧಪಟ್ಟದ್ದು. ರಾಜ್ಯದ, ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳು ರಿಸರ್ವ್ ಬ್ಯಾಂಕಿನ ನೆಗೋಶಿಯೇಬಲ್ instruments ಆಕ್ಟ್ -1881 ಪ್ರಕಾರ ಕೆಲಸ ನಿರ್ವಹಿಸಲಿದೆ. ಅಂದರೆ, ಎರಡನೇ ಶನಿವಾರ ರಜೆ, ಮೂರನೇ ಶನಿವಾರ ಕೆಲಸ ನಿರ್ವಹಿಸಲಿದೆ.
ಎರಡನೇ ಶನಿವಾರ ರಜೆ ನೀಡುವ ಪದ್ದತಿ 1986ರಲ್ಲಿ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದ ಆರಂಭವಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications