ಪೋಷಕರೇ ಎಚ್ಚರ.. ಎಚ್ಚರ.. ರಾಜ್ಯದಲ್ಲಿನ 1695 ಅನಧಿಕೃತ ಶಾಲೆಗಳಿಗೆ ಬೀಗ ಹಾಕಲು ಸರ್ಕಾರ ನಿರ್ಧಾರ
ಇತ್ತೀಚಿನ ದಿನಗಳಲ್ಲಿ ವಿದ್ಯೆ ಅನ್ನೋದು ಕಮರ್ಷಿಯಲ್ ಆಗುತ್ತಿದೆ. ಹೀಗಾಗಿ ನಗರದ ಯಾವುದೇ ಭಾಗದಲ್ಲಿ ನೋಡಿದರೂ ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳೇ ಹೆಚ್ಚಾಗಿ ಕಾಣುತ್ತಿವೆ. ಇದರಲ್ಲಿ ಅಧಿಕೃತವಾಗಿ ನಡೆಸುತ್ತಿರುವುದು ಒಂದು ಕಡೆಯಾದರೆ, ಶಿಕ್ಷಣ ಇಲಾಖೆಯ ಅನುಮತಿಯನ್ನೇ ಪಡೆಯದೇ ಶಿಕ್ಷಣ ನೀಡುತ್ತಿರುವ ಶಾಲೆಗಳು ಮತ್ತೊಂದು ಕಡೆಯಿವೆ.
ಹೀಗೆ ಇಲಾಖೆ ಅನುಮತಿ ಇಲ್ಲದೆ ಸದ್ಯ ರಾಜ್ಯದಲ್ಲಿ 1695 ಶಾಲೆಗಳು ನಡೆಯುತ್ತಿದ್ದು, ಇದಕ್ಕೆ ಬ್ರೇಕ್ ಹಾಕಬೇಕು ಅಂತಾ ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮುಂದಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಖಾಸಗಿ ಶಾಲಾ ಆಡಳಿತ ಮಂಡಳಿಗಳ ಜೊತೆ ಸಭೆ ನಡೆಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯಾದ್ಯಂತ ಖಾಸಗಿ ಶಾಲೆಗಳ ಪ್ರತಿನಿಧಿಗಳು ಭಾಗವಹಿಸಿದ್ದು, ಹತ್ತಾರು ವಿಚಾರಗಳ ಕುರಿತು ಚರ್ಚೆ ನಡೆಯಿತು. ಆದರೂ ಅನಧಿಕೃತ ಶಾಲೆಗಳ ವಿಚಾರವೇ ಹೆಚ್ಚು ಚರ್ಚೆಯಾಯಿತು.

ಇಲಾಖೆ ಅನುಮತಿಯಿಲ್ಲದೆ ನಡೆಯುತ್ತಿರುವ ಶಾಲೆಗಳು
1. ರಾಜ್ಯದಲ್ಲಿ ಇರುವ ಅನಧಿಕೃತ ಶಾಲೆಗಳು - 1695
2. ಅನುಮತಿ ಇಲ್ಲದೆ ಉನ್ನತೀಕರಣ ಮಾಡಿರುವ ಶಾಲೆಗಳು - 72
3. ಇತರೆ ಪಠ್ಯ ಬೋಧನೆ ಮಾಡುತ್ತಿರುವ ಶಾಲೆಗಳು - 143
4. ವಿಭಾಗ ಬದಲಾವಣೆ ಮಾಡಿರುವ ಶಾಲೆಗಳು - 631
5. ಅನುಮತಿ ಇಲ್ಲದೆ ಸ್ಥಳಾಂತರ ಮಾಡಿರುವ ಶಾಲೆಗಳು - 190
6. ಅನುಮತಿ ಪಡೆಯದೇ ಹಸ್ತಾಂತರ ಮಾಡಿರುವ ಶಾಲೆಗಳು -15
7. ಕೇಂದ್ರ ಪಠ್ಯದ ಬದಲು ರಾಜ್ಯಪಠ್ಯ ಬೋಧನೆ ಮಾಡುತ್ತಿರುವ ಶಾಲೆಗಳು - 68
8. ರಾಜ್ಯ ಪಠ್ಯ ಅನುಮತಿ ಪಡೆದು ಇತರೆ ಪಠ್ಯ ಬೋಧನೆ ಮಾಡುತ್ತಿರುವ ಶಾಲೆಗಳು - 494
ಸದ್ಯಕ್ಕೆ ಶಾಲೆಗಳು ಆರಂಭಗೊಂಡಿವೆ, ಹೀಗಾಗಿ ತಕ್ಷಣದಲ್ಲಿ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ. ಹಂತ ಹಂತವಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಅಂತಾ ಹೇಳಿರುವ ಶಿಕ್ಷಣ ಸಚಿವರು, ಮುಂದಿನ ದಿನಗಳಲ್ಲಿ ಹೊಸದಾಗಿ ಅನಧಿಕೃತ ಶಾಲೆಗಳು ಕಂಡು ಬಂದರೆ ಅದಕ್ಕೆ ಬಿಇಓಗಳೇ ನೇರ ಹೊಣೆ ಅಂತಾ ಎಚ್ಚರಿಕೆ ಕೊಟ್ಟರು.
ಖಾಸಗಿ ಶಾಲೆ ಆಡಳಿತ ಮಂಡಳಿಗಳು ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಅನುದಾನ ಹೆಚ್ಚಳ ನೀಡುವ ವಿಚಾರವನ್ನು ಪ್ರಸ್ತಾಪ ಮಾಡಿದ್ದು, ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications