Government employee; ಕಂಪ್ಯೂಟರ್ ಪರೀಕ್ಷೆ ಬಗ್ಗೆ ಮತ್ತೊಂದು ಆದೇಶ
ಬೆಂಗಳೂರು, ಜೂನ್ 19; ಕರ್ನಾಟಕದ ಎಲ್ಲಾ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವುದು ಮತ್ತು ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಇದಕ್ಕಾಗಿ ಸರ್ಕಾರ ದಿನಾಂಕ 31-12-2023ರವರೆಗೆ ಸಮಯಾವಕಾಶ ವಿಸ್ತರಿಸಿ ಆದೇಶ ಹೊರಡಿಸಿದೆ. ಈಗ ಈ ಪರೀಕ್ಷೆ ಬಗ್ಗೆ ಮತ್ತೊಂದು ಆದೇಶ ಪ್ರಕಟವಾಗಿದೆ.
ಯೋಜನಾ ನಿರ್ದೇಶಕರು ಸಾಮರ್ಥ್ಯ ಸಂಘಟನೆ, ಇ-ಆಡಳಿತ ಕೇಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳಿಗೆ ನಡೆಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ. ಸರ್ಕಾರದ ಸುತ್ತೋಲೆ ದಿನಾಂಕ 20/5/2023 ಮತ್ತು ದಿನಾಂಕ 3/4/2023 ಉಲ್ಲೇಖ ಮಾಡಲಾಗಿದೆ.

ಆದೇಶದಲ್ಲಿ ಏನಿದೆ?; ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅನುಕೂಲ ಮಾಡಿಕೊಡಲಾಗಿದ್ದು, ಇನ್ನೂ ಸುಮಾರು 2,00,000 ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಸರ್ಕಾರವು ದಿನಾಂಕ 31/12/2023ರವರೆಗೆ ಸಮಯಾವಕಾಶ ವಿಸ್ತರಿಸಿ, ಆದೇಶ ಹೊರಡಿಸಿರುತ್ತದೆ ಎಂದು ಹೇಳಿದೆ.
ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಅನುತ್ತೀರ್ಣರಾದವರು, ನೋಂದಾವಣೆ ಮಾಡಿ ಪರೀಕ್ಷೆ ತೆಗೆದುಕೊಳ್ಳದೇ ಇರುವವರೂ ಸಹ ದಿನಾಂಕ 31/12/2023ರ ಒಳಗಾಗಿ ಉತ್ತೀರ್ಣರಾಗಬೇಕಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ದಿನಾಂಕ: 31/12/2023ರೊಳಗೆ ಹಾಗೂ ನೇರ ನೇಮಕಾತಿ ಹೊಂದಿದ ನೌಕರರು ದಿನಾಂಕ 31/12/2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ ಎಂದು ಆದೇಶ ಹೇಳಿದೆ.
ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ಕೂಡಲೇ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿದೆ.
ಆಯಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಮಾಹಿತಿ ನೀಡುವಂತೆ ಈ ಆದೇಶದಲ್ಲಿ ಕೋರಲಾಗಿದೆ.
ಈ ಹಿನ್ನಲೆಯಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳದಿರುವ ಅಧಿಕಾರಿ/ ನೌಕರರುಗಳು https://clt.karnataka.gov.in ಹಾಗೂ ನಿಗಮ ಮಂಡಳಿಗಳ ನೌಕರರು https://nkclt.clt.karnataka.gov.in ವೆಬ್ಸೈಟ್ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿ, ಪರೀಕ್ಷೆಯನ್ನು ತೆಗೆದುಕೊಳ್ಳವಂತೆ ಮನವಿ ಮಾಡಲಾಗಿದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ; ಕರ್ನಾಟಕದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಅನ್ನು ಅಧಿಸೂಚನೆ ಸಂಖ್ಯೆ: ಸಿಆಸುಇ 43 ಸೇವನೆ 2008 ದಿನಾಂಕ 7/3/2012ರಲ್ಲಿ ರೂಪಿಸಲಾಗಿದೆ. ಸದರಿ ನಿಯಮಗಳು ದಿನಾಂಕ 22/3/2012ರಿಂದ ಜಾರಿಗೆ ಬಂದಿರುತ್ತದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಈ ಹಿಂದಿನ ಆದೇಶದಲ್ಲಿ ದಿನಾಂಕ 31/12/2022ರ ತನಕ ಅವಕಾಶ ನೀಡಲಾಗಿತ್ತು. ಬಳಿಕ ವಿವಿಧ ಕಾರಣಗಳಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಕಡ್ಡಾಯವಾಗಿ ಉತ್ತೀರ್ಣರಾಗುವ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಯಂತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕವನ್ನು 31/12/2023ರ ತನಕ ವಿಸ್ತರಣೆ ಮಾಡಲಾಗಿದೆ. ಕೆಲವು ಕಾರಣಗಳಿಂದಾಗಿ ಸುಮಾರು 1 ಲಕ್ಷಕ್ಕೂ ಅಧಿಕ ಅಧಿಕಾರಿ, ನೌಕರರು ನಿಗದಿತ ಅವಧಿಯೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಸಾಧ್ಯವಾಗದಿರುವುದನ್ನು ಗಮನಿಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕ ವಿಸ್ತರಣೆ ಮಾಡಲಾಗಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Karnataka: ರಾಜ್ಯದಲ್ಲಿ ಹೆಚ್ಚಾಯ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: 3 ವರ್ಷದಲ್ಲಿ 27 ಸಾವು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ











Click it and Unblock the Notifications