Government Employee: ಸರ್ಕಾರಿ ನೌಕರರು ಈ ಖಾತೆ ತೆರೆಯುವುದು ಕಡ್ಡಾಯ
ಬೆಂಗಳೂರು, ಮಾರ್ಚ್ 24: ಕರ್ನಾಟಕದ ಸರ್ಕಾರಿ ನೌಕರರಿಗೆ 1 ಕೋಟಿ ರೂ.ಗಳ ಅಪಘಾತ ವಿಮೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಮಾಹಿತಿ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಾಮಾಜಿಕ ಭದ್ರತೆಯು ಸರ್ಕಾರದ ಪ್ರಮುಖ ವಿಷಯವಾಗಿದ್ದು, ಸರ್ಕಾರ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಇದಕ್ಕಾಗಿ ಈಗ ಆರ್ಥಿಕ ಇಲಾಖೆ ಆದೇಶವೊಂದನ್ನು ಹೊರಡಿಸಿದೆ.
ರಾಜ್ಯ ಸರ್ಕಾರದ ಎಲ್ಲಾ ನೌಕರರು/ ಅಧಿಕಾರಿಗಳು ಬ್ಯಾಂಕ್ ಮತ್ತು ಅಂಚೆ ಕಛೇರಿಗಳಲ್ಲಿ 'ಸಂಬಳ ಪ್ಯಾಕೇಜ್ ಖಾತೆ' ಕಡ್ಡಾಯವಾಗಿ ತೆರೆಯಬೇಕು ಎಂದು ಆರ್ಥಿಕ ಇಲಾಖೆ ಆದೇಶವನ್ನು ಹೊರಡಿಸಿದೆ. ಈ ಖಾತೆ ಹೊಂದಿರುವ ಸರ್ಕಾರಿ ನೌಕರ/ ಅಧಿಕಾರಿಗಳಿಗೆ ಬ್ಯಾಂಕುಗಳು ವಿವಿಧ ಸೌಲಭ್ಯವನ್ನು ನೀಡಲಿವೆ ಎಂದು ಆದೇಶ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ವಿವಿಧ ಬ್ಯಾಂಕುಗಳು ಒದಗಿಸುವ ಸಂಬಳ ಪ್ಯಾಕೇಜ್ಗಳ ಅಡಿಯಲ್ಲಿ ಎಲ್ಲಾ ನೌಕರರು. (ಖಾಯಂ/ ಗುತ್ತಿಗೆ/ ಹೊರಗುತ್ತಿಗೆ ಇತ್ಯಾದಿ) ಖಾತೆಗಳನ್ನು ತೆರೆಯಲು/ ಆಯ್ಕೆ ಮಾಡಿಕೊಳ್ಳಲು ಕಡ್ಡಾಯಗೊಳಿಸಲಾಗುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಯ ಬಳಿಕ ಆರ್ಥಿಕ ಇಲಾಖೆ ಸರ್ಕಾರಿ ನೌಕರರಿಗೆ ಸೂಚನೆಯನ್ನು ನೀಡಿದೆ.
ಅಲ್ಲದೇ ಸರ್ಕಾರಿ ನೌಕರರು ಬ್ಯಾಂಕ್ಗಳು/ ಅಂಚೆ ಕಚೇರಿಗಳು ನೀಡುವ PMJJBY ಮತ್ತು PMSBY ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತವಾಗಿ ವಿಮಾ ರಕ್ಷಣೆಯನ್ನು ಪಡೆಯಲು ಉದ್ಯೋಗಿಗಳನ್ನು ಪ್ರೋತ್ಸಾಹಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು.
ಸಂಬಳ ಪ್ಯಾಕೇಜ್ ಖಾತೆ: ಎಲ್ಲಾ ಸರ್ಕಾರಿ ನೌಕರ/ ಅಧಿಕಾರಿ 'ಸಂಬಳ ಪ್ಯಾಕೇಜ್ ಖಾತೆ' ತೆರೆಯುವುದು ಕಡ್ಡಾಯಗೊಳಿಸಲಾಗಿದೆ. ಈ ಖಾತೆ ಹೊಂದಿದ್ದರೆ ಉದ್ಯೋಗಿಗೆ ಬ್ಯಾಂಕ್ಗಳು ಕಡಿಮೆ ಬಡ್ಡಿದರದಲ್ಲಿ ಗೃಹ ಸಾಲ ನೀಡುತ್ತವೆ. ಉಚಿತವಾಗಿ ರುಪೇ ಡೆಬಿಟ್ ಕಾರ್ಡ್ ಸೌಲಭ್ಯ ಸಿಗುತ್ತದೆ. ಲಾಕರ್ ಸೇವೆಯಲ್ಲಿ ರಿಯಾಯಿತಿ ಸಿಗಲಿದೆ ಹೀಗೆ ವಿವಿಧ ಸೇವೆ ಸಿಗಲಿದೆ ಎಂದು ಮಾಹಿತಿ ನೀಡಲಾಗಿದೆ.
'ಸಂಬಳ ಪ್ಯಾಕೇಜ್ ಖಾತೆ' ತೆರೆಯುವಂತೆ ಸೂಚನೆ ನೀಡಿದ್ದರೂ ಸಹ ಹಲವು ಅಧಿಕಾರಿ/ ನೌಕರರು ಇನ್ನೂ ಖಾತೆ ತೆರದಿಲ್ಲ. ಆದ್ದರಿಂದ ವಿವಿಧ ಬ್ಯಾಂಕ್ಗಳು, ಅಂಚೆ ಕಛೇರಿಯಲ್ಲಿ ಈ ಮಾದರಿ ಖಾತೆಯನ್ನು ಕಡ್ಡಾಯವಾಗಿ ತೆರೆಯಬೇಕು ಎಂದು ಆರ್ಥಿಕ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
ಎಲ್ಲಾ ಇಲಾಖೆಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ಅಧಿಕಾರಿ/ ನೌಕರರು 'ಸಂಬಳ ಪ್ಯಾಕೇಜ್ ಖಾತೆ' ತೆರೆಯುವಂತೆ ಕ್ರಮ ಕೈಗೊಳ್ಳುವುದು. ಈ ಖಾತೆ ತೆರೆಯುವಂತೆ ಅವರನ್ನು ಪ್ರೋತ್ಸಾಹಿಸಲು ಸಹ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರ್ಥಿಕ ಇಲಾಖೆ ಸೂಚನೆಯನ್ನು ನೀಡಿದೆ.
30/1/2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಹಾಲಿ ಜಾರಿಯಲ್ಲಿರುವ ಸಾಮಾಜಿಕ ಭದ್ರತಾ ವ್ಯವಸ್ಥೆಯ ಜೊತೆಗೆ ಇನ್ನಷ್ಟು ಸೌಲಭ್ಯ ಒದಗಿಸಲು ಪ್ರಸ್ತಾವನೆಯನ್ನು ಮಂಡಿಸಿ, ಅನುಮೋದನೆ ನೀಡಲಾಗಿತ್ತು. ಸರ್ಕಾರಿ ನೌಕರರು ಬ್ಯಾಂಕ್ಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತವಾಗಿ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಪ್ರೋತ್ಸಾಹಿಸಲಾಗುತ್ತದೆ ಎಂದು ಸರ್ಕಾರ ಹೇಳಿತ್ತು. ಬ್ಯಾಂಕ್ಗಳ ಸಹಯೋಗದಲ್ಲಿ ಸರ್ಕಾರಿ ನೌಕರರಿಗೆ 1 ಕೋಟಿ ರೂ.ಗಳ ಅಪಘಾತ ವಿಮೆಯನ್ನು ಜಾರಿಗೆ ತರುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ.
ಹಲವು ಬ್ಯಾಂಕುಗಳು ಈಗಾಗಲೇ ಸರ್ಕಾರಿ ನೌಕರರ 'ಸಂಬಳ ಪ್ಯಾಕೇಜ್ ಖಾತೆ' ಅಡಿಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡಿವೆ. ಎಸ್ಬಿಐ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್ನಲ್ಲಿ ರೂ. 10 ಸಾವಿರಕ್ಕಿಂತ ಮೇಲ್ಪಟ್ಟು ನಿವ್ವಳ ಸಂಬಳ ಪಡೆಯುತ್ತಿರುವ ಅಧಿಕಾರಿ/ ನೌಕರರಿಗೆ ರೂ. 1 ಕೋಟಿ ವೈಯಕ್ತಿಕ ಅಪಘಾತ ವಿಮೆಯನ್ನು ನೀಡುತ್ತದೆ ಹಾಗೂ ರೂ. 1,60 ಕೋಟಿ ವರೆಗೆ ವಿಮಾನ ಅಪಘಾತ ವಿಮೆ ರಕ್ಷಣೆಯನ್ನು ಪೂರಕ ಕೊಡುಗೆಯಾಗಿ ನೀಡಲಿದೆ.
ಕೆನರಾ ಬ್ಯಾಂಕ್ ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್ನಲ್ಲಿ ರೂ. 50 ಸಾವಿರದ ವರೆಗೆ ನಿವ್ವಳ ಸಂಬಳ ಪಡೆಯುತ್ತಿರುವ ಅಧಿಕಾರಿ/ ನೌಕರರಿಗೆ ರೂ. 50 ಲಕ್ಷಗಳ ವೈಯಕ್ತಿಕ ಅಪಘಾತ ವಿಮೆ ರಕ್ಷಣೆಯನ್ನು ಪೂರಕ ಕೊಡುಗೆಯಾಗಿ ನೀಡಲಿದೆ. ರೂ. 50 ಸಾವಿರಕ್ಕೆ ಮೆಲ್ಪಟ್ಟು ನಿವ್ವಳ ಸಂಬಳ ಪಡೆಯುತ್ತಿರುವ ಅಧಿಕಾರಿ/ ನೌಕರರಿಗೆ ರೂ. 1 ಕೋಟಿ ವೈಯಕ್ತಿಕ ಅಪಘಾತ ವಿಮೆ ರಕ್ಷಣೆ ನೀಡುತ್ತದೆ.
ಸರ್ಕಾರಿ ನೌಕರ ಮೂರು ತಿಂಗಳ ಅವಧಿಯಲ್ಲಿ ಅಧಿಕಾರಿಗಳು/ ನೌಕರರು ತಮ್ಮ ಇಚ್ಛಾನುಸಾರ ಯಾವುದೇ ಬ್ಯಾಂಕಿನ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಸರ್ಕಾರ ದಿನಾಂಕ 21/2/2025ರಲ್ಲಿ ಆದೇಶಿಸಿತ್ತು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications