ಕರ್ನಾಟಕ ಸರ್ಕಾರಿ ನೌಕರರ ಕ್ರೀಡಾಕೂಟ 2025: ಭಾಗವಹಿಸಲು ನಿಯಮಗಳು
ಬೆಂಗಳೂರು, ಮೇ 11: 2024-25ನೇ ಸಾಲಿನ ಕರ್ನಾಟಕ ಸರ್ಕಾರಿ ನೌಕರರ ಕ್ರೀಡಾಕೂಟದ ದಿನಾಂಕ ಘೋಷಣೆಯಾಗಿದೆ. ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗ ನಗರದಲ್ಲಿ ದಿನಾಂಕ 18/05/2025 ರಿಂದ 20ರ ತನಕ ನಡೆಸಲಾಗುತ್ತದೆ. ಆಯುಕ್ತರ ಕಾರ್ಯಾಲಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ನಿಯಮಗಳನ್ನು ತಿಳಿಸಿದೆ.
ಈ ಕುರಿತು ಆಯುಕ್ತರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೋಲೆಯನ್ನು ಹೊಡಿಸಿದ್ದಾರೆ. ಈ ಸುತ್ತೋಲೆ 2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಸಂಘಟಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ ಕ್ರೀಡಾಕೂಟವನ್ನು ಆಯೋಜಿಸಲು ಸೂಚಿಸಿ ಸುತ್ತೋಲೆಯನ್ನು ಹೊರಡಿಸಿದೆ ಎಂದು ತಿಳಿಸಿದೆ. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳನ್ನು ತಿಳಿಸಲಾಗಿದೆ.
* ಸದರಿ ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಕೆ.ಜಿ.ಐ.ಡಿ. ಸಂಖ್ಯೆಯನ್ನು ಹೊಂದಿರುವ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಲ್ಲಿ ಮಾತ್ರ ಸ್ಪರ್ಧೆಗಳಲ್ಲಿ ಭಾಗವಹಿಸಲು ಹಾಗೂ ಸೌಲಭ್ಯ ಪಡೆಯಲು ಮಾತ್ರ ಅರ್ಹರಿರುತ್ತಾರೆ.
* ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು ಹಾಗೂ ಕ್ರೀಡಾಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
* ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
* ದಿನಗೂಲಿ ನೌಕರರು, ಅರಕಾಲಿಕ ನೌಕರರು, ಕ್ಷೇಮಾಭಿವೃದ್ಧಿ, ನೌಕರರು, ಗುತ್ತಿಗೆ ನೌಕರರು, ನಿಗಮ/ ಮಂಡಳಿ ನೌಕಕರು ಮತ್ತು ಇತರೇ ಖಾಯಂ ಅಲ್ಲದ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ. ಪೊಲೀಸ್ (ಸಮವಸ್ತ್ರಧಾರಿಗಳಿಗೆ) ಹಾಗೂ ಕ್ರೀಡಾ ಮೀಸಲಾತಿಯಲ್ಲಿ ಆಯ್ಕೆಯಾದ ಎಲ್ಲಾ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
* ಅರಣ್ಯ ಇಲಾಖೆಗಳ ಮತ್ತು ಅಗ್ನಿಶಾಮಕ ಇಲಾಖೆಗಳ ಬ್ಯಾಡ್ಜ್ ನಂಬರ್ ಸಿಬ್ಬಂದಿಗಳು (ಕ್ರೀಡಾ ಮೀಸಲಾತಿಯಡಿ ಆಯ್ಕೆಯಾದ ನೌಕರರನ್ನು ಹೊರತುಪಡಿಸಿ) ಹಾಗೂ ಲಿಪಿಕ ಸಿಬ್ಬಂದಿಗಳು ಸಹ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅನುಮತಿ ನೀಡುವುದು.
* 1 ಟ್ರ್ಯಾಕ್ ಮತ್ತು 2 ಫೀಲ್ಡ್ ಅಥವಾ 2 ಟ್ರಾಕ್ ಮತ್ತು 1 ಫೀಲ್ಡ್ ಸೇರಿ ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸತಕ್ಕದ್ದು. 45 ವರ್ಷ ಮೇಲ್ಪಟ್ಟ ಸ್ಪರ್ಧಿಗಳು 45 ವರ್ಷಕ್ಕೊಳಪಟ್ಟವರಿಗೆ ಇರುವ ಸ್ಪರ್ಧೆಗಳಲ್ಲಿ ಸ್ಪಂತ ಜವಾಬ್ದಾರಿ ಮೇಲೆ ಭಾಗವಹಿಸಬಹುದು. 45 ವರ್ಷಕ್ಕೊಳಪಟ್ಟವರು 45 ವರ್ಷ ಮೇಲ್ಪಟ್ಟವರ ಜೊತೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
* ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ, ತಕರಾರಿಗೆ ಅವಕಾಶವಿರುವುದಿಲ್ಲ. ಏಕಕಾಲದಲ್ಲಿ ಸ್ಪರ್ಧೆಗಳನ್ನು ನಡೆಸಲಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧಿಗಳನ್ನು ಕಾಯುವುದಿಲ್ಲ. ಕರಕುಶಲ ವಸ್ತು ಪ್ರದರ್ಶನದಲ್ಲಿ ಸಿದ್ಧವಿರುವ ವಸ್ತುಗಳ ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ. ಸ್ಥಳದಲ್ಲಿ ತಯಾರಾಗಿ (ಮೊದಲನೇ ದಿನ) ಇಡಬೇಕು. 2ನೇ ದಿನ ತೀರ್ಪುಗಾರರಿಂದ ಪರಿಶೀಲಿಸಲಾಗುವುದು.
* ಸ್ಪರ್ಧೆ ನಡೆಯದ ಕ್ರೀಡೆಗಳಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ನೀಡಲಾಗುವುದಿಲ್ಲ. ಸಂಘಟಕರೊಡನೆ ಅಥವಾ ತೀರ್ಪುಗಾರರೊಡನೆ ಅಸಭ್ಯವಾಗಿ ವರ್ತಿಸುವ ಕ್ರೀಡಾಪಟುಗಳನ್ನು ಕ್ರೀಡಾ ಸ್ಪರ್ಧೆಯಿಂದ ಹೊರಹಾಕುವುದಲ್ಲದೆ, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತಂದು ತಪ್ಪಿತಸ್ಥ ಕ್ರೀಡಾಪಟುವಿನ ಮೇಲೆ ಸೇವಾ ನಿಯಮಗಳ ರೀತ್ಯಾ ಶಿಸ್ತಿನ ಕ್ರಮ ಜರುಗಿಸಲು ಶಿಫಾರಸ್ಸು ಮಾಡಲಾಗುವುದು.
* ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ಪ್ರಾರಂಭವಾಗುವ ನಿಗದಿತ ಸಮಯಕ್ಕೆ ಕನಿಷ್ಠ 1 ಗಂಟೆ ಮುಂಚಿತವಾಗಿ ಹಾಜರಿದ್ದು, ಕ್ರೀಡಾ ಸಂಘಟಕನಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಕ್ರೀಡಾ ಸ್ಪರ್ಧೆಗಳಲ್ಲಿ ಸಂಗೀತ, ನೃತ್ಯ ಹಾಗೂ ನಾಟಕಗಳಲ್ಲಿ ಭಾಗವಹಿಸುವ ಸ್ಪರ್ಧಿಗಳು ತಮ್ಮದೇ ಆದ ಸಲಕರಣೆಗಳನ್ನು ತರತಕ್ಕದ್ದು. ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಚಲನಚಿತ್ರ ಗೀತೆಯ ತುಣುಕು ಇತ್ಯಾದಿಗಳಿಗೆ ಅವಕಾಶವಿಲ್ಲ.
* ಸಂಗೀತ, ನೃತ್ಯ, ಚೆಸ್ ಮತ್ತು ನಾಟಕ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸ್ಪರ್ಧೆಗಳು ಇರುವುದಿಲ್ಲ. ಸ್ಪರ್ಧಿಗಳು ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಆಯಾ ಜಿಲ್ಲೆಯ ಬಾವುಟದೊಂದಿಗೆ ಭಾಗವಹಿಸುವುದು ಕಡ್ಡಾಯವಾಗಿದೆ. ಉದ್ಘಾಟನಾ ಸಮಾರಂಭಕ್ಕೆ ಮೊದಲು ನೋಂದಾವಣೆ ಮಾಡಿಕೊಳ್ಳುವ ಕ್ರೀಡಾಪಟುಗಳಿಗೆ ಮಾತ್ರ ಹಾಜರಾತಿ ನೀಡಲಾಗುವುದು.
* ಸರ್ಕಾರಿ ಆದೇಶದಂತೆ ರಾಜ್ಯ ಸರ್ಕಾರದ ವತಿಯಿಂದ ನಡೆಸುವ ರಾಜ್ಯಮಟ್ಟದ ಮತ್ತು ಜಿಲ್ಲಾಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯಗಳನ್ನು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿದೆ.
* ಯಾವ ಸ್ಪರ್ಧೆಗಳಲ್ಲಿ ಕ್ರೀಡಾಪಟುಗಳು ಭಾಗವಹಿಸಿರುವುದಿಲ್ಲವೋ ಅಂತಹ ಸ್ಪರ್ಧೆಗಳಿಗೆ ಕ್ರೀಡಾಪಟುವಲ್ಲದ ನೌಕರರನ್ನು ಸೇರ್ಪಡೆಗೊಳಿಸುವ ಕ್ರಮವನ್ನು ಕೈಬಿಡುವುದು. ಒಂದು ವೇಳೆ ತಪ್ಪು ಮಾಹಿತಿ ನೀಡಿರುವುದು ಕಂಡುಬಂದಲ್ಲಿ ಅಂತಹ ಜಿಲ್ಲೆಗಳ ಸಹಾಯಕ ನಿರ್ದೇಶಕರು ಹಾಗೂ ನೌಕರರ ವಿರುದ್ಧ ಶಿಸ್ತು ಕ್ರಮ ಅನಿವಾರ್ಯವಾಗಲಿದೆ ಎಂಬ ಅಂಶವನ್ನು ಸ್ಪಷ್ಟಪಡಿಸುವುದು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications