ಸರ್ಕಾರಿ ನೌಕರರ ವರ್ಗಾವಣೆಗೆ ಷರತ್ತು ಬದ್ಧ ಅನುಮತಿ
ಬೆಂಗಳೂರು, ಮೇ 31; ಕರ್ನಾಟದಲ್ಲಿ ಅಧಿಕಾರಕ್ಕೆ ಬಂದಿರುವ ಹೊಸ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಒಂದು ಕಡೆ ಡಿಎ ಹೆಚ್ಚಳ ಮಾಡಿದೆ, ಮತ್ತೊಂದು ಕಡೆ ಸರ್ಕಾರಿ ನೌಕರರ ವರ್ಗಾವಣೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಆದರೆ ಶಿಕ್ಷಕರ ವರ್ಗಾವಣೆಗೆ ಒಪ್ಪಿಗೆ ಕೊಟ್ಟಿಲ್ಲ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರ.) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-1) ಹೇಮಲತ ಜಿ. ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಆದೇಶ ಸಂಖ್ಯೆ ದಿನಾಂಕ 7/6/2013ರ ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿದೆ. 2023-24ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳು ಎಂಬ ವಿಷಯವನ್ನು ಈ ಆದೇಶ ಒಳಗೊಂಡಿದೆ.
ಆದೇಶದ ವಿವರ; ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತ್ರತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ.

2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲು ನಿರ್ಧರಿಸಿರುವುದರಿಂದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ ಎಂದು ಹೇಳಿದೆ.
ಸರ್ಕಾರಿ ಆದೇಶ ಸಂಖ್ಯೆ 30/5/2023ರಂತೆ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು 2023-24ನೇ ಸಾಲಿಗೆ ಗ್ರೂಪ್-ಎ, ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ 01/06/2023 ರಿಂದ ದಿನಾಂಕ 15/06/2023ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ ಎಂದು ತಿಳಿಸಿದೆ.
ಶಿಕ್ಷಕರ ವರ್ಗಾವಣೆ; ಶೇಕಡಾ 6 ರಷ್ಟು ಸರ್ಕಾರಿ ನೌಕರರ ವರ್ಗಾವಣೆ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ. ಈಗಾಗಲೇ ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಬುಧವಾರದಿಂದ ಮಕ್ಕಳು ಶಾಲೆಗೆ ಆಗಮಿಸುತ್ತಿದ್ದಾರೆ. ಆದ್ದರಿಂದ ಶಿಕ್ಷಕರಿಗೆ ವರ್ಗಾವಣೆ ಇಲ್ಲದಂತಾಗಿದೆ.
ಮಾರ್ಚ್ 29ರಂದು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿತ್ತು. ಆದರೆ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವುದಾಗಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಭರವಸೆ ನೀಡಿದ್ದರು.
ರಿತೇಶ್ ಕುಮಾರ್ ಸಿಂಗ್ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚುನಾವಣಾ ಆಯೋಗಕ್ಕೆ ಶಿಕ್ಷಕರ ವರ್ಗಾವಣೆ ಕುರಿತು ಪತ್ರ ಬರೆದಿದ್ದಾರೆ. ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳಡಿಯಲ್ಲಿ ವರ್ಗಾವಣೆಗಾಗಿ ಶಿಕ್ಷಕರಿಂದ 88,324 ಅರ್ಜಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿಯನ್ವಯ ಹಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ ಸಾಮಾನ್ಯ ವರ್ಗಾವಣೆ (ಕೌನ್ಸಿಲಿಂಗ್ ಮುಖಾಂತರ ಮಾತ್ರ) ಪ್ರಕ್ರಿಯೆಯನ್ನು ಮುಂದುವರೆಸಲು ಸಕ್ಷಮ ಪ್ರಾಧಿಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದ್ದರು.
ಚುನಾವಣಾ ಆಯೋಗ ರಿತೇಶ್ ಕುಮಾರ್ ಸಿಂಗ್ ಅವರ ಪತ್ರಕ್ಕೆ ಮೌಖಿಕ ಸೂಚನೆ ನೀಡಿತ್ತು. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈಗ ವರ್ಗಾವಣೆ ಪ್ರಕ್ರಿಯೆ ಬೇಡ ಎಂದು ಹೇಳಿತ್ತು. ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಮೇ 14ರಂದು ತೆರವುಗೊಂಡಿದೆ. ಈಗ ಹೊಸ ಸರ್ಕಾರ ರಚನೆಗೊಂಡಿದೆ. ಆದರೆ ಶೈಕ್ಷಣಿಕ ವರ್ಷ ಆರಂಭಗೊಂಡಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications