Government employee; ಆರೋಗ್ಯ ಸಂಜೀವಿನಿ ಯೋಜನೆ ಯಾವಾಗ ಜಾರಿ?
ಬೆಂಗಳೂರು, ಜುಲೈ 10; ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಘೋಷಣೆ ಮಾಡಿದೆ. ಈ ಯೋಜನೆಯ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮ್ಯಯ ವಿಧಾನ ಪರಿಷತ್ನಲ್ಲಿ ಉತ್ತರ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಮುನಿರಾಜು ಗೌಡ ಎಂ. ಪಿ. (ವಿಧಾನಸಭೆಯಿಂದ ಚುನಾಯಿತರಾದವರು) ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಸೇವೆಗೆ ನಿಯಮಾವಳಿಗಳನ್ನು ಜಾರಿ ಮಾಡಲಾಗಿದೆಯೇ? ಹಾಗಿದ್ದಲ್ಲಿ ಯಾವ ದಿನಾಂಕದಂದು ಜಾರಿ ಮಾಡಲಾಗಿದೆ? ಎಂದು ಪ್ರಶ್ನಿಸಲಾಗಿತ್ತು.

ಮುಖ್ಯಮಂತ್ರಿಗಳು ಉತ್ತರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ರೂಪಿಸಿರುವ ನಗದು ರಹಿತ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನ (KASS)' ಯನ್ನು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ಭಾಗವಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದಿನಾಂಕ 17/8/2021ರ ಸರ್ಕಾರಿ ಆದೇಶದಂತೆ ನಿರ್ದೇಶನ/ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಎಷ್ಟು ಜನರಿಗೆ ಅನುಕೂಲವಾಗಲಿದೆ?; ನಗದು ರಹಿತ ಆರೋಗ್ಯ ಸೇವೆಯಿಂದ ರಾಜ್ಯದ ಎಷ್ಟು ಜನ ನೌಕರರಿಗೆ ಮತ್ತು ಅವರ ಅವಲಂಬಿತರಿಗೆ ಅನುಕೂಲವಾಗಲಿದೆ? ಎಂದು ಪ್ರಶ್ನೆ ಮಾಡಲಾಗಿತ್ತು.
ಮುಖ್ಯಮಂತ್ರಿಗಳು ಉತ್ತರದಲ್ಲಿ ನಗದು ರಹಿತ ಆರೋಗ್ಯ ಸೇವೆಯಿಂದ ರಾಜ್ಯದ ಅಂದಾಜು 5 ಲಕ್ಷಕ್ಕೂ ಹಚ್ಚಿನ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಒಂದಕ್ಕೆ ಸರಾಸರಿ 5 ಸದಸ್ಯರಂತೆ ಸುಮಾರು 25 ರಿಂದ 30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಅಂದಾಜು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಗದು ರಹಿತ ಆರೋಗ್ಯ ಸೇವೆಯನ್ನು ಜಾರಿಗೆ ತರಲು ಎಷ್ಟು ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ? ಎಂಬ ಪ್ರಶ್ನೆಗೆ ಸಹ ಉತ್ತರ ನೀಡಲಾಗಿದೆ. ದಿನಾಂಕ 9/3/2023ರ ಸರ್ಕಾರದ ಆದೇಶದಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST)ನ ವಿವಿಧ ಯೋಜನೆಗಳಡಿಯಲ್ಲಿ ಮತ್ತು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963ರ ಅಡಿ ನೊಂದಾಯಿತವಾಗಿರುವ ಜ್ಯೋತಿ ಸಂಜೀವಿನಿ ಯೋಜನೆ ಸೇರಿದಂತೆ) ಖಾಸಗಿ ಆಸ್ಪತ್ರೆಗಳನ್ನು KASS ಯೋಜನೆಯಡಿ ಭಾವಿತ ನೋಂದಾವಣೆಗೆ (Deemed Empanelment) ಒಳಪಡಿಸಲು ಅನುಮತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಗದು ರಹಿತ ಆರೋಗ್ಯ ಸೇವೆಯನ್ನು ಜಾರಿಗೆ ತರಲು ಖಾಸಗಿ ಆಸ್ಪತ್ರೆಗಳ ಜೊತೆ ನೂತನವಾಗಿ ಒಪ್ಪಂದ ಮಾಡಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ ಕಾರ್ಯವು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಪ್ರಗತಿಯಲ್ಲಿರುತ್ತದೆ ಎಂದು ವಿವರಣೆ ನೀಡಿದ್ದಾರೆ.
ನಗದು ರಹಿತ ಆರೋಗ್ಯ ಸೇವೆಯನ್ನು ಯಾವ ಕಾಲಮಿತಿಯಲ್ಲಿ ಜಾರಿಗೆ ತರಲಾಗುವುದು? ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ನೀಡಿದ್ದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)ಯನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನಲ್ಲಿ ಒಂದು ವಿಶೇಷ ಕೋಶವನ್ನು (KASS Cell) ಸೃಜಿಸಿದ್ದು, ಈ ಯೋಜನೆಯನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ












Click it and Unblock the Notifications