Government Employee: ಹಳೆ ಪಿಂಚಣಿ ಯೋಜನೆ, ಅರ್ಹತಾದಾಯಕ ಸೇವೆ ಆದೇಶ
ಬೆಂಗಳೂರು, ಮೇ 14: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಂತೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ಆದೇಶಿಸಿದೆ. ಈಗ ಹಿಂದಿನ ಡಿಫೈನ್ ಪಿಂಚಿಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 247-A ರನ್ವಯ ಪಿಂಚಣಿ ಸೌಲಭ್ಯಕ್ಕಾಗಿ ಅರ್ಹತಾದಾಯಕ ಸೇವೆಯನ್ನು ಪರಿಗಣಿಸುವ ಕುರಿತು ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, ಅಜಯ್ ಎಸ್. ಕೊರಡೆ ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ. ಸರ್ಕಾರಿ ಆದೇಶ ದಿನಾಂಕ 31.3.2006, ಸರ್ಕಾರಿ ಆದೇಶ ಸಂಖ್ಯೆ ದಿನಾಂಕ 29.3.2010 ಉಲ್ಲೇಖಿಸಿದ್ದಾರೆ.

ಪ್ರಸ್ತಾವನೆ ಏನು?; ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ ದಿನಾಂಕ 01/04/2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರುವ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ವ್ಯಾಖ್ಯಾನಿತ ಅಂಶದಾಯಿ ಕೊಡುಗೆ ಯೋಜನೆಪದ್ದತಿಯನ್ನು ಕಡ್ಡಾಯಗೊಳಿಸಿ ಜಾರಿಗೆ ತರಲಾಗಿರುತ್ತದೆ. ಸರ್ಕಾರಿ ಆದೇಶದಲ್ಲಿ, ಸದರಿ ಯೋಜನೆಯನ್ನು ಕಾರ್ಯರೂಪಗೊಳಿಸಿದೆ. ದಿನಾಂಕ 31/03/2006ರ ಆದೇಶಾನುಸಾರ ನೌಕರನು ಸೇವೆಗೆ ವಾಸ್ತವವಾಗಿ ವರದಿ ಮಾಡಿಕೊಂಡ ದಿನಾಂಕದ ಆಧಾರದ ಮೇರೆಗೆ ನೂತನ ವ್ಯಾಖ್ಯಾನಿತ ಅಂಶದಾಯಿ ಕೊಡುಗೆ ಯೋಜನೆಗೆ ಒಳಪಡುವುದಾಗಿದೆ.
ಸರ್ಕಾರಿ ಆದೇಶದಲ್ಲಿ, ರಾಜ್ಯ ಸಿವಿಲ್ ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ 1/4/2006ರ ಪೂರ್ವದ ಆಯ್ಕೆ ಮತ್ತು ನೇಮಕಾತಿ ಪ್ರಕ್ರಿಯೆಗಳ ಸಂಬಂಧದಲ್ಲಿ ದಿನಾಂಕ 1/4/2006 ಮತ್ತು ತದನಂತರದಲ್ಲಿ ಆಯ್ಕೆ ಮತ್ತು ನೇಮಕ ಹೊಂದಿ ಸೇವೆಗೆ ಸೇರಿರುವ ಅಭ್ಯರ್ಥಿಗಳ ಪ್ರಕರಣಗಳಿದ್ದು, ಆದರೆ ಅದೇ ತಂಡದಲ್ಲಿನ ಇತರೆ ಅಭ್ಯರ್ಥಿಗಳು ದಿನಾಂಕ 1/4/2006ರ ಪೂರ್ವದಲ್ಲಿಯೇ ಆಯ್ಕೆ ಮತ್ತು ನೇಮಕಾತಿಗಳು ಪೂರ್ಣಗೊಂಡು ಸೇವೆಗೆ ನೇಮಕ ಹೊಂದಿ ವರದಿ ಮಾಡಿಕೊಂಡಿರುವ ಮತ್ತು ಇದರಿಂದಾಗಿ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಟ್ಟಿರುವ ಸಂದರ್ಭಗಳಿರುವ ನಿರ್ದಿಷ್ಟ ವಿಶಿಷ್ಟ ಪ್ರಕರಣಗಳನ್ನು ಮಾತ್ರ ಸರ್ಕಾರದ ಆದೇಶ ದಿನಾಂಕ 31/3/2006ರ ಆದೇಶದನ್ವಯ ದಿನಾಂಕ 1/4/2006ರಿಂದ ಜಾರಿಗೊಳಿಸಲಾದ ನೂತನ ವ್ಯಾಖ್ಯಾನಿತ ಅಂಶದಾಯಿ ಕೊಡುಗೆ ಯೋಜನಾ ವ್ಯಾಪ್ತಿಯಿಂದ ಸಡಿಲಿಕೆಯನ್ನು ನೀಡಿ ಕೆಲವೊಂದು ಷರತ್ತುಗಳಿಗೊಳಪಡಿಸಿ ಹಿಂದಿನ ಡಿಫೈನ್ಡ್ ಪಿಂಚಣಿ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಆದೇಶಿಸಿದೆ.
ಸರ್ಕಾರಿ ಆದೇಶದಲ್ಲಿ ದಿನಾಂಕ 1/4/2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ 1/4/2006 ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿದೆ.
ಪ್ರಸ್ತುತ ಸರ್ಕಾರ ಮೇಲೆ ನಮೂದಿಸಿದ ದಿನಾಂಕ 17/2/2021 ಹಾಗೂ ದಿನಾಂಕ 24/1/2024ರ ಸರ್ಕಾರಿ ಆದೇಶಗಳ ಮೂಲಕ OPS ಯೋಜನೆಯ ವ್ಯಾಪ್ತಿಗೊಳಪಟ್ಟ ನೌಕರರಿಗೆ OPS ಯೋಜನೆಯ ಎಲ್ಲ ಸೌಲಭ್ಯಗಳನ್ನು ವಿಸ್ತರಿಸಲು ತೀರ್ಮಾನಿಸಿ ಆದೇಶಿಸಿದೆ.
ಸರ್ಕಾರದ ಆದೇಶ: ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆದೇಶ ದಿನಾಂಕ 17/2/2021 ಹಾಗೂ ಸರ್ಕಾರಿ ಆದೇಶ ದಿನಾಂಕ 24/1/2024ರ ಉಪಬಂಧಗಳನ್ವಯ ಹಿಂದಿನ ಡಿಫೈನ್ಡ್ ಪಿಂಚಿಣಿ ಯೋಜನೆಗೆ ಯೋಜನೆಯನ್ನು ವಿಸ್ತರಿಸಲ್ಪಟ್ಟ ಸರ್ಕಾರಿ ನೌಕರರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 2-C ಅನ್ವಯವಾಗತಕ್ಕದ್ದಲ್ಲವೆಂದು ಮತ್ತು ಈ ನೌಕರರಿಗೆ ಅದೇ ನಿಯಮಾವಳಿಯ ನಾಲ್ಕನೇ ಭಾಗದಲ್ಲಿನ ಎಲ್ಲ ಉಪಬಂಧಗಳು ಅನ್ವಯವಾಗತಕ್ಕದ್ದೆಂದು ಆದೇಶಿಸಿದೆ. ಈ ಕುರಿತು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗೆ ಅಗತ್ಯ ತಿದ್ದುಪಡಿಯನ್ನು ಮಾಡಲಾಗುವುದು ಎಂದು ಹೇಳಿದೆ.
-
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications