ಉತ್ತರ ಕರ್ನಾಟಕದಲ್ಲಿ ಮೋಡ ಬಿತ್ತನೆ, ಕೃತಕ ಮಳೆ?
ಬೆಂಗಳೂರು, ಜು.25: ಮುಂಗಾರು ಮಳೆ ಕೊರತೆ ಅನುಭವಿಸುತ್ತಿರುವ ಉತ್ತರ ಕರ್ನಾಟಕ ಭಾಗದಲ್ಲಿ ಮೋಡ ಬಿತ್ತನೆ ಮೂಲಕ ಕೃತಕ ಮಳೆ ತರಿಸುವ ಬಗ್ಗೆ ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ವಿಧಾನಸಭೆ ಕಲಾಪದ ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯ ಎನ್.ಎಚ್.ಕೋನರೆಡ್ಡಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಮೋಡ ಬಿತ್ತನೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಬರ, ಪ್ರವಾಹ ಪರಿಸ್ಥಿತಿ ಹಾಗೂ ಇತರೆ ನೈಸರ್ಗಿಕ ವಿಪತ್ತುಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ಮುಂದಿನ ವಾರ ಸಭೆ ಸೇರಲಿದ್ದು, ಅಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ತಜ್ಞರ ತಂಡ ಬೇಕು: ಮೋಡ ಬಿತ್ತನೆ ಮಾಡುವಂಥ ಸಲಕರಣೆಗಳು ನಮ್ಮ ದೇಶದಲ್ಲಿ ಇಲ್ಲ. ಒಂದು ವೇಳೆ ಇಲ್ಲೆ ಲಭ್ಯವಾದರೆ ತ್ವರಿತವಾಗಿ ಕ್ರಮ ಕೈಗೊಳ್ಳಬಹುದು. ವಿದೇಶದಲ್ಲಿದ್ದರೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ. ಈ ಸಂಬಂಧ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಜೂ.1ರಿಂದ ಜು.23ರವರೆಗೆ ವಾಡಿಕೆ ಮಳೆ 405.10 ಮಿ.ಮೀ, ಪ್ರತಿಯಾಗಿ 315.61 ಮಿ.ಮೀ.ಯಷ್ಟಾಗಿದ್ದು, ಶೇ.22ರಷ್ಟು ಸಾಮಾನ್ಯಕ್ಕಿಂತ ಕಡಿಮೆ ಆಗಿದೆ. ಮುಖ್ಯವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣವು ಸಾಮಾನ್ಯಕ್ಕಿಂತ ಶೇ.41ರಷ್ಟು ಕಡಿಮೆಯಾಗಿದೆ ಎಂದು ಅವರು ಹೇಳಿದರು.
ಆಹಾರ ಸಂಸ್ಕರಣಾ ಘಟಕಗಳಿಗೆ ನೋಟಿಸ್: ರಾಜ್ಯದಲ್ಲಿ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಭೂಮಿ ಪಡೆದು ಅದನ್ನು ಅನ್ಯ ಉದ್ದೇಶಗಳಿಗಾಗಿ ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಕಂಪೆನಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಮಾಲೂರಿನಲ್ಲಿ 87 ಎಕರೆ ಪ್ರದೇಶದಲ್ಲಿರುವ ಇನೋವಾ ಅಗ್ರಿ ಪಾರ್ಕ್, ಹಿರಿಯೂರಿನಲ್ಲಿ- 106 ಎಕರೆ ಪ್ರದೇಶದಲ್ಲಿ ಅಕ್ಷಯ ಫುಡ್ ಪಾರ್ಕ್, ಬಾಗಲಕೋಟೆಯಲ್ಲಿ -100 ಎಕರೆಯಲ್ಲಿ ಗ್ರೀನ್ ಫುಡ್ ಪಾರ್ಕ್ ಹಾಗೂ ಜೇವರ್ಗಿ ಯಲ್ಲಿ-105 ಎಕರೆ ಜೇವರ್ಗಿ ಫುಡ್ ಪಾರ್ಕ್ ಗಳಿಗೆ ನೋಟಿಸ್ ಜಾರಿಯಾಗಿದೆ.
ರಾಜ್ಯದಲ್ಲಿ 22 ಕೃಷಿ ಹೊಂಡ ನಿರ್ಮಾಣದ ಗುರಿ ಹೊಂದಿ ದ್ದು, ಆ ಪೈಕಿ 14,796 ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗಿದೆ. ಈ ಕಾರ್ಯಕ್ಕೆ 38.58 ಕೋಟಿ ರೂ.ಗಳ ನ್ನು ವೆಚ್ಚ ಮಾಡಲಾಗಿದೆ ಎಂದು ಜೆಡಿಎಸ್ ಚಲುವರಾಯ ಸ್ವಾಮಿ ಕೇಳಿದ ಪ್ರಶ್ನೆಗೆ ಕೃಷ್ಣ ಭೈರೇಗೌಡ ಉತ್ತರ ನೀಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications