Anna Bhagya: ಹೊಸ ರೇಷನ್ ಕಾರ್ಡ್ ನೀಡಲು ಸೂಚನೆ, ಆಂಧ್ರ-ತೆಲಂಗಾಣ ಅಕ್ಕಿ ನೀಡಲು ಒಪ್ಪಿವೆ: ಮುನಿಯಪ್ಪ
ಬೆಂಗಳೂರು, ಆಗಸ್ಟ್ 04: ಸರ್ಕಾರ ಹಸಿದವರಿಗೆ ಅನ್ನ ಸಿಗಲಿ ಎಂಬ ಉದ್ದೇಶದಿಂದ 'ಅನ್ನಭಾಗ್ಯ' ಯೋಜನೆ ಜಾರಿಗೊಳಿಸಿದೆ. ಈವರೆಗೆ ಒಂದು ಕೋಟಿ ಮಂದಿಗೆ ಅಕ್ಕಿಯ ಹಣ ಜಮೆ ಮಾಡಲಾಗಿದೆ. ಮುಖ್ಯವಾಗಿ ನೀತಿ ಸಂಹಿತೆ ಹಿನ್ನೆಲೆ ಸ್ಥಗಿತಗೊಂಡಿದ್ದ ಪಡಿತರ ಚೀಟಿ/ರೇಷನ್ ಕಾರ್ಡ (Ration Card) ವಿತರಿಸುವಂತೆ ಅಧಿಕಾರಿಗಳು ಸೂಚಿಸಲಾಗಿದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
ಸದ್ಯ ಅಕ್ಕಿ ಬದಲಿಗೆ ಹಣ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆದಷ್ಟು ಶೀಘ್ರವೇ ಹಣದ ಬಳಿಗೆ ಘೋಷಿಸಿದಂತೆ ತಲಾ ಹತ್ತು ಕೆ.ಜಿ ಅಕ್ಕಿ ನೀಡಲಾಗುವುದು ಎಂದು ತಿಳಿಸಿದರು.

ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚಿಸಲಾಗಿದೆ. ಬಿಪಿಎಲ್, ಎಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸುವವರು ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತಗೊಳಿಲಾಗಿತ್ತು. ಇದೀಗ ಮತ್ತೆ ಆರಂಭವಾಗಿದ್ದು, ಹೊಸ ಸದಸ್ಯರ ಸೇರ್ಪಡೆಯನ್ನು ಪಡಿತರ ಕಾರ್ಡ್ಗೆ ಸೇರಿಸಲೂ ಅವಕಾಶ ನೀಡಲಾಗಿದೆ ಎಂದರು.
ರಾಜ್ಯದ ಬಡವರಿಗೆ ತಲಾ ಹತ್ತು ಅಕ್ಕಿ ಕೊಡುವು ಸಂಬಂಧ 'ಅನ್ನಭಾಗ್ಯ' ಯೋಜನೆ ಗ್ಯಾರಂಟಿ ಘೋಷಿಸಲಾಗಿದೆ. ಈವರೆಗೆ ಒಟ್ಟು ಒಂದು ಕೋಟಿ ಕುಟುಂಬಗಳಿಗೆ ಹೆಚ್ಚುವರಿ ಅಕ್ಕಿ ಬದಲಾಗಿ ತಲಾ ಇಂತಿಷ್ಟು ಹಣ ಎಂದು ಒಟ್ಟು ಸುಮಾರು 556 ಕೋಟಿ ಹಣ ಅವರ ಖಾತೆಗೆ ಜಮೆ ಮಾಡಲಾಗಿದೆ. ಸದ್ಯ ಇದರಿಂದ 3.50 ಕೋಟಿ ಪ್ರಯೋಜನ ಆಗುತ್ತಿದೆ ಎಂದು ಅವರು ವಿವರಿಸಿದರು.

ಬೆಂಬಲ ಬೆಲೆಗೆ ಮನವಿ
ಅಷ್ಟೇ ಅಲ್ಲದೇ ಕಾರ್ಡ್ನಲ್ಲಿರುವ ಮೃತರ ಹೆಸರನ್ನು ತೆಗೆಯಲು ಸೂಚಿಸಿದ್ದೇವೆ. ಜೋಳ, ರಾಗಿ ಬೆಂಬಲ ಬೆಲೆಗೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ರೇಷನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುವವರು ಸಲ್ಲಿಸಬಹುದಾಗಿದೆ.
ಅನ್ನ ಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರ ಅಕ್ಕಿ ನೀಡಲು ಮುಂದೆ ಬಂದಿವೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮುಂದಿನ ಒಂದು ವಾರದಲ್ಲಿ ಆ ಸರ್ಕಾರದಗಳ ಅಧಿಕಾರಿಗಳು ಅಂತಿಮ ನಿರ್ಧಾರ ತಿಳಿಸಲಿದ್ದಾರೆ. ಸೆಪ್ಟೆಂಬರ್ ನಲ್ಲಿ ಅನ್ನಭಾಗ್ಯ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಇನ್ನೂ ಯಾರಾದರೂ ಸ್ವಂತ ಬಳಕೆಗೆಂದು ವೈಟ್ ಬೋರ್ಡ್ ಕಾರು ಹೊಂದಿದಲ್ಲಿ ಅವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದಿಲ್ಲ. ಯೆಲ್ಲೋ ಬೋರ್ಡ್ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಇನ್ನೂ ಈ ಕುರಿತು ಹೆಚ್ಚಿನ ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications