Government Employees: ಈ ನಿಯಮಗಳ ಪಾಲಿಸುವುದು ರಾಜ್ಯ ಸರ್ಕಾರಿ ನೌಕರಿಗೆ ಕಡ್ಡಾಯ : ಸರ್ಕಾರ ಆದೇಶ
ಬೆಂಗಳೂರು, ಫೆಬ್ರವರಿ 03: ರಾಜ್ಯ ಸರ್ಕಾರದಿಂದ ಕರ್ನಾಟಕದ ಸರ್ಕಾರಿ ನೌಕರರಿಗೆ ಪ್ರಮುಖವಾದ ಮಾಹಿತಿಯೊಂದು ಇಲ್ಲಿದೆ. ಸರಕಾರಿ ಇಲಾಖೆಗಳಲ್ಲಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಚಾಟಿ ಬೀಸಲು ಮುಂದಾಗಿರುವ ರಾಜ್ಯ ಸರಕಾರ ಇದೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಹಾಜರಾತಿ ಜಾರಿಗೆ ಮುಂದಾಗಿದೆ. ಅಲ್ಲದೇ ಕೆಲವು ನಿಯಮಗಳನ್ನಸರ್ಕಾರಿ ನೌಕರರು ಪಾಲಿನೆ ಮಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆಗಿ ಆದೇಶ ಮಾಡಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನ ಮಾಡದಿರುವುದು,

ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಸೂಚನಗಳನ್ನು ಪಾಲಿಸಲು ಸೂಚಿಸಿದ್ದಾರೆ. ಈ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಈ ನಿಯಮಗಳ ಪಾಲಿನೆ ಕಡ್ಡಾಯ
1. ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
3. ಕಛೇರಿ ಸಮಯದಲ್ಲಿ ನೌಕರರು ಹಾಗೂ ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ನಮೂದಿಸಿ, ಮೇಲಾಧಿಕಾರಿಗಳ ವಹಿಯಲ್ಲಿ ಸಕಾರಣವನ್ನು ಚಲನ-ವಲನ ಪೂರ್ವಾನುಮತಿಯನ್ನು ಪಡೆಯತಕ್ಕದ್ದು.
4. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
5. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
6. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
7. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
8. ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
9. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ವಯ ವಿಲೇವಾರಿ ಮಾಡುವುದು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications