'ಸದ್ಗುರು ಹೆಸರಿನ ವ್ಯಕ್ತಿಗೂ ದೇವನಹಳ್ಳಿ ಸಮೀಪ ಹತ್ತಾರು ಎಕರೆ ಭೂಮಿ'
ದೇಶದ ಸ್ವಾತಂತ್ರ್ಯ ಹಾಗೂ ಕರ್ನಾಟಕದ ಏಕೀಕರಣದ ನಂತರದಲ್ಲಿ ಇಲ್ಲಿ ಆಡಳಿತ ನಡೆಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು "ಉಳುವವನೇ ಭೂಮಿ ಒಡೆಯ" ಹಾಗೂ ಭೂ ಸುಧಾರಣಾ ಕಾಯ್ದೆಗಳನ್ನು ಜಾರಿಗೊಳಿಸಿ ಭೂಮಿಯೇ ಇಲ್ಲದೇ ಬದುಕುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ಭೂಮಿಯನ್ನು ನೀಡುವ ಕೆಲಸ ಮಾಡಿದೆ.
ಈ ಕೆಲಸ ಪರಿಣಾಮವೇ ಭಾರತದಲ್ಲಿ ಕ್ರಮೇಣ ಆಹಾರ ಧಾನ್ಯಗಳ ಉತ್ಪಾದನೆ ಮತ್ತು ರೈತರ ಸ್ವಾವಲಂಬನೆಯ ಬದುಕೂ ಕೂಡಾ ಸಾಧ್ಯವಾಗಿದೆ ಎಂಬುದು ಭೂಮಿಯನ್ನು ಪಡೆದು ಬದುಕುತ್ತಿರುವ ಬಹಳಷ್ಟು ಜನರಿಗೆ ತಿಳಿದಿರುವ ಸಂಗತಿ.
ಆದರೆ ಇದೀಗ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗರು ಕೋಟಿಗಟ್ಟಲೇ ಬೆಲೆ ಬಾಳುವ ಸರ್ಕಾರಿ ಜಮೀನು, ಗೋಮಾಳ ಇತ್ಯಾದಿಗಳನ್ನು RSS ಪ್ರೇರಿತ ವಿವಿಧ ಸಂಘ ಸಂಸ್ಥೆಗಳಿಗೆ ನಿರಂತರವಾಗಿ ನೀಡುತ್ತಿದ್ದು ಅವುಗಳ ಜಿಲ್ಲಾವಾರು ಶಾಖೆಗಳ ಮೂಲ ಸೌಕರ್ಯ ಹೆಚ್ಚಿಸುವ ಕೆಲಸಕ್ಕೆ ಮುಂದಾಗಿದೆ.

ಇದೀಗ ತಮಿಳುನಾಡಿನಲ್ಲಿ ನೂರಾರು ಎಕರೆಯಲ್ಲಿ ಇಶಾ ಎಂಬ ಧಾರ್ಮಿಕ ಕೇಂದ್ರವನ್ನು ಹೊಂದಿರುವ ಸದ್ಗುರು ಹೆಸರಿನ ವ್ಯಕ್ತಿಗೂ ಕೂಡಾ ದೇವನಹಳ್ಳಿ ಸಮೀಪ ಹತ್ತಾರು ಎಕರೆ ಭೂಮಿಯನ್ನು ನೀಡಿರುವ ಬಗ್ಗೆ ಮಾಹಿತಿ ಇದೆ.
ಭೂ ರಹಿತ ರೈತರು, ದಲಿತರು ಹಾಗೂ ಅಲೆಮಾರಿ ಸಮುದಾಯದ ಎಷ್ಟೋ ಮಂದಿ ತುಂಡು ಭೂಮಿಗಾಗಿ ಅರ್ಜಿ ಸಲ್ಲಿಸಿ ಇನ್ನೂ ಕಾಯುತ್ತಾ ಇದ್ದರೂ ಕೂಡಾ ಅವರ ಬಗ್ಗೆ ತಲೆಯನ್ನೇ ಕೆಡಿಸಿಕೊಳ್ಳದೇ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟು ಕೈಚೆಲ್ಲಿರುವ ಸರ್ಕಾರ RSS ಪ್ರೇರಿತ ಸಂಸ್ಥೆಗಳಿಗೆ ಮಾತ್ರ ಬೇಕಾಬಿಟ್ಟಿಯಾಗಿ ಭೂಮಿಯನ್ನು ಹಂಚಿಕೆ ಮಾಡುತ್ತಿದೆ.

ಇನ್ನು ಅರಣ್ಯ ಹಾಗೂ ಮಣ್ಣು ರಕ್ಷಣೆಯ ಅಭಿಯಾನ ಮಾಡುವ ಸದ್ಗುರು ಎಂಬ ಹೆಸರಿನ ಈತ ಅದೇ ಭೂಮಿಯನ್ನು ಪಡೆದುಕೊಂಡಿರುವುದು ಹಾಸ್ಯಾಸ್ಪದ ಸಂಗತಿ ಆಗಿದೆ. ಬಾಬಾ ಸಾಹೇಬರು ಹೇಳಿದಂತೆ ಸರ್ಕಾರದ ಜಮೀನು ಆದಷ್ಟು ಸರ್ಕಾರದ ಬಳಿಯೇ ಇದ್ದಾಗ ಮಾತ್ರ ಸರ್ಕಾರವೂ ಸುಭದ್ರವಾಗಿರುತ್ತದೆ ಮತ್ತು ಅದರಿಂದ ಬಡವರಿಗೂ ಸಹಾಯ ಮಾಡಲು ಸಾಧ್ಯವಾಗುತ್ತದೆ!
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications