ಗಿರೀಶ್ ಕಾರ್ನಾಡ್ ನಿಧನ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು, ಜೂನ್ 10: ಹಿರಿಯ ಸಾಹಿತಿ, ರಂಗಕರ್ಮಿ, ಜ್ಞಾನಪೀಠ ಪುರಸ್ಕೃತ ಗಿರೀಶ್ ಕಾರ್ನಾಡ್(81) ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸೋಮವಾರ ಸಾರ್ವತ್ರಿಕ ರಜೆ ಘೋಷಿಸಿದೆ.
ಹಾಗೆಯೇ ಜೂನ್ 10ರಿಂದ 12ರವರೆಗೆ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರೆಯನ್ನು ಆಚರಿಸಲಾಗುವುದು ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ, ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ.
ಗಿರೀಶ್ ಕಾರ್ನಾಡ್ ಅವರ ಅಂತ್ಯ ಸಂಸ್ಕಾರ ಬೈಯಪ್ಪನಹಳ್ಳಿಯ ಸ್ಮಶಾನದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ. ಸರ್ಕಾರಿ ಗೌರವ ಬೇಡ ಎಂದು ಕುಟುಂಬ ಮನವಿ ಮಾಡಿದರೂ ಕೂಡ ಗೌರವ ಕೊಡುವುದು ನಮ್ಮ ಕರ್ತವ್ಯ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾರ್ನಾಡ್ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ
ಮೂರು ಸಭೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದೂಡಿದ್ದಾರೆ, ಹಾಗೂ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಗಿರೀಶ್ ಕಾರ್ನಾಡ್ ಅವರು ಬಹು ಅಂಗ ವೈಫಲ್ಯದಿಂದ ಬಳಲುತ್ತಿದ್ದರು.
ಬೆಂಗಳೂರಿನ ಬೈಯಪ್ಪನಹಳ್ಳಿಯ ಕಲ್ಪಳ್ಳಿ ಸ್ಮಶಾನದಲ್ಲಿ ಇಂದು ಸಂಜೆ ಅಂತ್ಯಕ್ರಿಯೆಯನ್ನು ನಡೆಸಲು ತೀರ್ಮಾನಿಸಲಾಗಿದ್ದು, ಅಲ್ಲೇ ಅಂತಿಮ ದರ್ಶನಕ್ಕೂ ಅವಕಾಶ ನೀಡಲಾಗಿದೆ. ಸಮಯವನ್ನು ಇನ್ನೂ ಖಚಿತಪಡಿಸಿಲ್ಲ.
ಕಾರ್ನಾಡ್ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಯಾವುದೇ ವ್ಯವಸ್ಥೆಯನ್ನು ಏರ್ಪಡಿಸಲಾಗಿಲ್ಲ. ಕಾರ್ನಾಡ್ ಪತ್ನಿ ಸರಸ್ವತಿ ಅವರು, ಯಾರೂ ಅಪಾರ್ಟ್ ಮೆಂಟ್ ಬಳಿ ಬಾರದಂತೆ ಮನವಿ ಮಾಡಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ
ಮನೆಯ ಬಳಿ ಸಾಕಷ್ಟು ಜನರು ಸೇರಿದರೆ ತೊಂದರೆ ಆಗುತ್ತದೆ ಎಂಬ ಉದ್ದೇಶದೊಂದಿಗೆ ಈ ಬೇಡಿಕೆ ಇಟ್ಟಿದ್ದಾರೆ. ಯಾವುದೇ ಧಾರ್ಮಿಕ ವಿಧಿವಿಧಾನಗಳಿಲ್ಲದೇ ಕಾರ್ನಾಡ್ ಅವರ ಅಂತ್ಯಕ್ರಿಯೆಯನ್ನು ನಡೆಸಲು ತೀರ್ಮಾನಿಸಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.