ಕರ್ನಾಟಕ ಸರ್ಕಾರ: ಜಿಲ್ಲೆಗಳಿಗೆ ಕೋವಿಡ್, ಚಿಕಿತ್ಸಾ ಸೂಚನೆಗಳು
ಬೆಂಗಳೂರು, ಡಿಸೆಂಬರ್ 29: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡಿದೆ. ಈ ಮಧ್ಯೆ ರಾಜ್ಯದ ಜನರು ಹೊಸ ವರ್ಷಚರಣೆಗೆ ಸಿದ್ದರಾಗಿದ್ದಾರೆ. ಇದೆಲ್ಲ ಗಮನದಲ್ಲಿಟ್ಟುಕೊಂಡು ಕೋವಿಡ್ ಏರಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದೆ.
ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇತ್ತೀಚೆಗೆ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ಬಳಿಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಚಿಕಿತ್ಸೆಗೆ ತ್ವರಿತ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಕೊರೊನಾ ವಾರ್ಡ್ ಹಾಗೂ ಐಸಿಯು ಬೆಡ್ಗಳನ್ನು ಮೀಸಲಿಡಬೇಕು ಎಂದು ಸೂಚಿಸಿ ಸುತ್ತೋಲೆ ಹೊರಡಿಸಿದ್ದರು.

ಹೊಸ ವರ್ಷಾಚರಣೆ ವೇಳೆ ಕೊರೊನಾ ಸೋಂಕು ಹೆಚ್ಚಾಗಬಹುದು. ಆದ್ದರಿಂದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣ ಎದುರಿಸಲು, ಸೂಕ್ತ ಚಿಕಿತ್ಸೆ ನೀಡಲು ಸಜ್ಜಾಗಬೇಕು. ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ ಮಟ್ಟಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್ ಮೀಸಲಿಡಬೇಕು.
ಐಸಿಯು ಬೆಡ್ ಮೀಸಲಿಡಲು ಸೂಚನೆ
ಜಿಲ್ಲೆಗಳ ಆಸ್ಪತ್ರೆಯಲ್ಲಿ ಕೆಲ ಐಸಿಯು ಬೆಡ್ಗಳನ್ನು ಮೀಸಲಿಡುವುದು ಸೇರಿದಂತೆ ಹಲವು ಸೂಚನೆಗಳನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಇಲಾಖೆ ಆಯುಕ್ತ ಡಿ.ರಂದೀಪ್ ಅವರು ನಿರ್ದೇಶಿಸಿದ್ದಾರೆ.
ಇನ್ನೂ ವ್ಯಕ್ತಿಯಲ್ಲಿ ಸೋಂಕು ಕಂಡು ಬಂದರೆ ಅವರ ಪ್ರಾಥಮಿಕ ಸಂಪರ್ಕಿತರನ್ನು ತಪಾಸಣೆಗೆ ಒಳಪಡಿಸಬೇಕು. ರೋಗಿಯು ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸಹ ಟೆಲಿ ಐಸಿಯು ಮೂಲಕ ಕೇಂದ್ರ ಕಚೇರಿಯಿಂದ ನಿಗಾ ವಹಿಸಬೇಕು. ಜಿಲ್ಲಾ ಮಟ್ಟದಲ್ಲಿ ಕೊರೊನಾ ಸಾವಿನ ಕುರಿತು ಆಗಿಂದಾಗ್ಗೆ ಮಾಹಿತಿ, ವರದಿ ನೀಡುತ್ತಿರಬೇಕು.

ಸೋಕು ದೃಢಪಡದಿದ್ದಲ್ಲಿ ಅವರಿಗೆ ಸಿಟಿ ಸ್ಕ್ಯಾನಿಂಗ್ ಮಾಡದೇ ಸ್ಕ್ಯಾನಿಂಗ್ ಕೇಂದ್ರಗಳಿಗೆ ಸೂಚಿಸಬೇಕು. ಗುಂಪು ಗೂಡುವುದು, ಮಾಸ್ಕ್ ಧಾರಣೆ ಮಾಡಬೆಕು. ಈ ಬಗ್ಗೆ ತಿಳಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇನ್ನೂ ಜ್ವರ, ಇನ್ನಿತರ ಗುಣಲಕ್ಷಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಫ್ಲೋಶಾಟ್ (ಜ್ವರದ ಲಸಿಕೆ) ಹಾಕಿಸಕೊಳ್ಳುವುದು, ಹೇಗೆ ಯಾರು ಲಸಿಕೆ ಪಡೆಯಬೇಕು ಎಂಬುದ ಕುರಿತು ಸರ್ಕಾರ ಪ್ರತ್ಯೇಕ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಗುರುವಾರ 158 ಹೊಸ ಕೇಸ್ ಪತ್ತೆ
ಕರ್ನಾಟಕದಲ್ಲಿ ಗುರುವಾರ 158 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿ ಆಗಿವೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡಾ 1.89 ದಾಖಲಾಗಿದೆ. ಕಳೆದ ಒಂದು ದಿನದಲ್ಲಿ ರಾಜ್ಯದಲ್ಲಿ ಒಟ್ಟು 8350 ಮಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಗುರುವಾರ ಪ್ರಕರಣ ಹೆಚ್ಚಾದರೂ ಸಹಿತ ಪಾಸಿಟಿವಿಟಿ ದರ ಕಡಿಮೆ ಇದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 568ಕ್ಕೆ ಹೆಚ್ಚಳವಾಗಿದೆ. ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಬಹುತೇಕವು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕಂಡು ಬಂದಿವೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gruha Arogya Scheme: ಗೃಹ ಆರೋಗ್ಯ ಯೋಜನೆ ವರದಿ ಶಾಕ್: ಗ್ರಾಮೀಣ ಪ್ರದೇಶದಲ್ಲೇ ಈ ಆರೋಗ್ಯ ಸಮಸ್ಯೆ ಹೆಚ್ಚು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications