Siddaramaiah: ಸಂವಿಧಾನ ಬದಲಾವಣೆ ಕುರಿತು ಪೇಜಾವರ ಶ್ರೀ ಹೇಳಿಕೆ: ಸಿದ್ದರಾಮಯ್ಯ ಏನಂದ್ರು?
ಬೆಂಗಳೂರು, ನವೆಂಬರ್ 26: ಸಂವಿಧಾನಕ್ಕೆ ವಿರೋಧವಾಗಿರುವವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳೂ ಸಹ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಿಧಾನಸೌಧ ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ , ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. ಕೇಂದ್ರ , ರಾಜ್ಯ ಸರ್ಕಾರಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳು ಸಂವಿಧಾನದಂತೆ ನಡೆದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತೆ ಕೆಲಸ ಮಾಡಬೇಕು. ಆದ್ದರಿಂದ ರಾಜ್ಯದ ೆಲ್ಲ ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿ, ಅದರ ಆಶಯಗಳನ್ನು ವಿದ್ಯಾರ್ಥಿಗಳು ಮನನ ಮಾಡಿಕೊಳ್ಳಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು. ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸಿ ಮುನ್ನಡೆಯಲಿದೆ.
ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ. ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ. ನಾಡಬಾಂಧವರಿಗೆಲ್ಲರಿಗೂ ಸಂವಿಧಾನ ದಿನಾಚರಣೆಯ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications