Jeans Park: ರಾಹುಲ್ ಗಾಂಧಿ ಭರವಸೆ ಈಡೇರಿಕೆ, ಬಳ್ಳಾರಿಯಲ್ಲಿ ಗ್ಲೋಬಲ್ ಜೀನ್ಸ್ ಪಾರ್ಕ್ ಸ್ಥಾಪನೆ
ಬೆಂಗಳೂರು, ಜನವರಿ 09: ಕರ್ನಾಟಕದ ಗಣಿ ಜಿಲ್ಲೆ ಎಂದೇ ಪ್ರಸಿದ್ಧಿಯಾಗಿರುವ ಬಳ್ಳಾರಿಯಲ್ಲಿ ಹೊಸ ಕಾರ್ಖಾನೆ ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಯಂತೆ 'ಜೀನ್ಸ್ ಪಾರ್ಕ್' ಸ್ಥಾಪನೆ ಸರ್ಕಾರ ಮುಂದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಗುರುವಾರ ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಸಚಿವ ಎಂ.ಬಿ.ಪಾಟೀಲ್ ಅವರು, ರಾಹುಲ್ ಗಾಂಧಿಯವರು ಕೊಟ್ಟಿದ್ದ ಭರವಸೆಯಂತೆ ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ KIADB ವತಿಯಿಂದ 'ಜೀನ್ಸ್ ಪಾರ್ಕ್' ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದೆ. ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಉಡುಪು ತಯಾರಿಕೆಯ ಕಂಪನಿಗಳೂ ಇರುವಂತೆ ನೋಡಿಕೊಳ್ಳಲಾಗುವುದು ಎಂದರು.

ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟಾದ ಮೇಲೆ ಅಲ್ಲಿನ ಜೀನ್ಸ್ ಉಡುಪು ತಯಾರಿಕೆ ಉದ್ಯಮ ನೆಲ ಕಚ್ಚಿದೆ. ಹೂಡಿಕೆದಾರರು ಮತ್ತು ರಫ್ತುದಾರರ ಗಮನ ಈಗ ಬಳ್ಳಾರಿಯಲ್ಲಿನ ಜೀನ್ಸ್ ತಯಾರಿಕೆ ಉದ್ಯಮದ ಮೇಲೆ ಹರಿಸಲಾಗಿದೆ. ಇದನ್ನು ನಾವು ಸದವಕಾಶವಾಗಿ ಪರಿವರ್ತಿಸಿಕೊಂಡು, ಹೂಡಿಕೆಯನ್ನು ಆಕರ್ಷಿಸಲಿದ್ದೇವೆ' ಎಂದಿದ್ದಾರೆ.
ಬಳ್ಳಾರಿಯಲ್ಲಿ ಸಾವಿರಾರು ಉದ್ಯೋಗ ಸೃಷ್ಟಿ
ಬಳ್ಳಾರಿಯಲ್ಲಿ 500ಕ್ಕಿಂತಲೂ ಹೆಚ್ಚು ಜೀನ್ಸ್ ಉಡುಪು ತಯಾರಿಕೆ ಘಟಕಗಳಿವೆ. ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹತ್ತಾರು ಸಾವಿರ ಉದ್ಯೋಗಗಳನ್ನು ಸೃಷ್ಟಿಸಿವೆ. ಇದಕ್ಕೆ ವ್ಯವಸ್ಥಿತ ರೂಪ ಕೊಟ್ಟು, ಇದನ್ನು ರಫ್ತು ಕೇಂದ್ರಿತವಾಗಿಯೂ ಬೆಳೆಸಬೇಕು ಎನ್ನುವುದು ಕೈಗಾರಿಕಾ ಇಲಾಖೆಯ ಚಿಂತನೆಯಾಗಿದೆ. ಇದಕ್ಕಾಗಿ ಜವಳಿ ಇಲಾಖೆಯ ಸಹಾಯವನ್ನೂ ಪಡೆಯಲಾಗುವುದು.

ಕೈಗಾರಿಕೆ ಇಲಾಖೆಯಲ್ಲಿ ಜೀನ್ಸ್ ತಯಾರಿಕೆ ಘಟಕಗಳಿಗೆ ರಿಯಾಯಿತಿ ಕೊಡುವ ವ್ಯವಸ್ಥೆ ಇದ್ದರೆ ಅದನ್ನೂ ಕೊಡಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಜವಳಿ ಸಚಿವರ ಜತೆಗೂ ಸಭೆ ನಡೆಸಲಾಗುವುದು ಎಂದು ಸಚಿವರು ಹೊಸ ಕಾರ್ಖಾನೆ ಸ್ಥಾಪನೆ ಕುರಿತು ವಿವರಿಸಿದರು.
ರಾಹುಲ್ ಗಾಂಧಿ ಭರವಸೆ ಈಡೇರಿಕೆ
ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಳ್ಳಾರಿಯ ಜೀನ್ಸ್ ತಯಾರಿಕೆ ಘಟಕಗಳ ಉದ್ಯೋಗಿಗಳು ಮತ್ತು ಮಾಲೀಕರ ಜತೆ ಮಾತುಕತೆ ನಡೆಸಿದ್ದರು. ಆಗ ಅವರು, ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು. ಇದಾದ ಮೇಲೆ, 2023ರ ಆಗಸ್ಟ್ 1ರಂದು ನಮ್ಮ ಇಲಾಖೆಗೆ ಪತ್ರ ಬರೆದು, ಈ ಬಗ್ಗೆ ಗಮನ ಸೆಳೆದಿದ್ದರು. ಈ ಯೋಜನೆಯ ಅನುಷ್ಠಾನಕ್ಕೆ ಈಗ ಕಾಲ ಪ್ರಶಸ್ತವಾಗಿದ್ದು, ಅಂತಾರಾಷ್ಟ್ರೀಯ ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಟಿನಲ್ಲೂ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ. ಈಗ ಅಸಂಘಟಿತವಾಗಿರುವ ಜೀನ್ಸ್ ಉದ್ಯಮಕ್ಕೆ ಸಂಘಟಿತ ರೂಪ ಕೊಟ್ಟು, ಇದನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸುವುದು ಇದರ ಹಿಂದಿನ ಉದ್ದೇಶವಾಗಿದೆ.
ಬಳ್ಳಾರಿ ಇತರ ಘಟಕೆಗಳಿಗೂ ಅಧಿಕ ನೆರವು
ಬಳ್ಳಾರಿ ಜೀನ್ಸ್ ಪಾರ್ಕ್ ನಿಂದ ಪ್ರಾದೇಶಿಕ ಆರ್ಥಿಕತೆಗೆ ಚೈತನ್ಯ ಬರಲಿದೆ. ಜತೆಗೆ ನಾವೀನ್ಯತೆ ಮತ್ತು ಉಡುಪು ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳಿಗೆ ಆದ್ಯತೆ ಸಿಗಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿ ಸುತ್ತಮುತ್ತ ಈಗಾಗಲೇ ಸಕ್ರಿಯವಾಗಿರುವ ಜೀನ್ಸ್ ಉಡುಪು ತಯಾರಿಕೆ ಘಟಕಗಳಿಗೂ ಹೆಚ್ಚಿನ ನೆರವು ನೀಡಲಾಗುವುದು. ಜೀನ್ಸ್ ಉಡುಪುಗಳು ಯುವಜನಾಂಗಕ್ಕೆ ಅಚ್ಚುಮೆಚ್ಚಿನದಾಗಿವೆ. ಇಲ್ಲಿರುವ ಮಾರುಕಟ್ಟೆಯನ್ನು ನಾವು ಗುರಿಯಾಗಿಟ್ಟುಕೊಂಡು, ದಾಪುಗಾಲಿಡಲಿದ್ದೇವೆ. ರಾಜ್ಯದ ಉದ್ಯಮಸ್ನೇಹಿ ಕೈಗಾರಿಕಾ ನೀತಿಯು ಇದಕ್ಕೆ ಮತ್ತಷ್ಟು ಇಂಬು ಕೊಡಲಿದೆ ಎಂದು ಸಚಿವರು ಹೇಳಿದ್ದಾರೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications