Government Job: ಈ ಕಾರಣಕ್ಕೆ ಸರ್ಕಾರಿ ಹುದ್ದೆಗಳು ನೇಮಕಾತಿ ಆಗುತ್ತಿಲ್ಲ: ವಿಜಯೇಂದ್ರ ಹೇಳಿದ್ದೇನು?
ರಾಜ್ಯದಲ್ಲಿ ಖಾಲಿ ಉಳಿದಿರುವ ಸರ್ಕಾರಿ ಹುದ್ದೆಗಳ ಭರ್ತಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ವಿಚಾರವೊಂದನ್ನು ಹೇಳಿದ್ದಾರೆ. ರಾಜ್ಯ ಸರ್ಕಾರವು ಆ ಒಂದು ಕಾರಣಕ್ಕೆ ಸರ್ಕಾರಿ ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ಆರಂಭಿಸಿಲ್ಲ ಎಂದು ದೂರಿದ್ದಾರೆ. ಸರ್ಕಾರ ನಿದ್ರೆಯಿಂದ ಎದ್ದು, ಸರ್ಕಾರಿ ಹುದ್ದೆಗಳು ಭರ್ತಿಯಾಗಲು ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ಸರ್ಕಾರಿ ಹುದ್ದೆಗಳ ಭರ್ತಿ ವಿಳಂಬ ಕುರಿತು ವಿಜಯೇಂದ್ರ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಪರಿಶಿಷ್ಟ ಸಮುದಾಯಗಳ ಬಗ್ಗೆ ತನಗಿರುವುದು ಬದ್ಧತೆಯ ಕಾಳಜಿಯಲ್ಲ, ಅದು "ಮೊಸಳೆ ಕಣ್ಣೀರು" ಎನ್ನುವುದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ತೋರಿಸಿ ಕೊಡುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಈಗಲೂ ಗೊಂದಲಗಳ ಗೂಡು ಕಟ್ಟಿಕೊಂಡಿರುವ ಸರ್ಕಾರವು ಸದ್ಯ ಹೊರಡಿಸಿರುವ ಆದೇಶದ ಅನ್ವಯ ಅಗತ್ಯ ತಂತ್ರಾಂಶವನ್ನೇ ಅಭಿವೃದ್ಧಿಪಡಿಸದೆ ಉಡಾಫೆ ಧೋರಣೆ ಪ್ರದರ್ಶಿಸಿದೆ. ಇದರ ಪರಿಣಾಮ ಸರ್ಕಾರಿ ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ಆರಂಭಿಸಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಬೇಕಿರುವ ಎಂಡಿ ಸೀಟು ಹಂಚಿಕೆಗೆ ಅರ್ಜಿ ಸಲ್ಲಿಸಲು ತೊಡಕಾಗಿದೆ ಎಂದಿದ್ದಾರೆ.

ಪರಿಶಿಷ್ಟ ಜಾತಿಗಳ ಅಭ್ಯರ್ಥಿಗಳು ಒಳ ಮೀಸಲಾತಿ ಅನ್ವಯ ಸವಲತ್ತು ಪಡೆಯಲು ಅನಗತ್ಯ ವಿಳಂಬ ಉಂಟಾಗುತ್ತಿದೆ. ಸರ್ಕಾರ ನಿದ್ರೆಯಿಂದ ಎದ್ದು ಈ ಕೂಡಲೇ ತಂತ್ರಾಂಶ ಅಭಿವೃದ್ಧಿಪಡಿಸಿ ಸುಲಲಿತವಾಗಿ ಸೀಟು ಹಂಚಿಕೆ ಹಾಗೂ ಸರ್ಕಾರಿ ಹುದ್ದೆಗಳು ಭರ್ತಿಯಾಗಲು ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಿದ್ಯಾವರ್ಧಕ ಸಂಘಕ್ಕೆ ಅನುದಾನ ಕೊಡಿ
ಕನ್ನಡ ಭಾಷೆಯ ಉಳಿವಿಗಾಗಿ ನಡೆದ ಗೋಕಾಕ್ ಚಳುವಳಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜನ್ಮತಾಳಲು ಕಾರಣವಾಗಿದ್ದ 125 ವರ್ಷಗಳ ಇತಿಹಾಸವಿರುವ ಕರ್ನಾಟಕ ವಿದ್ಯಾವರ್ಧಕ ಸಂಘ ಅನುದಾನವಿಲ್ಲದೇ ಸೊರಗುತ್ತಿರುವುದು ಅತ್ಯಂತ ಶೋಚನೀಯ ಎಂದು ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಜಾಗ, ಅನುದಾನ ಸೇರಿದಂತೆ ಹಲವು ಅಗತ್ಯ ಬೇಡಿಕೆಗಳ ಕುರಿತು ಸರ್ಕಾರದ ಗಮನಕ್ಕೆ ತಂದರೂ ಯಾವುದೇ ರೀತಿಯ ಪೂರಕ ಸ್ಪಂದನೆ ದೊರೆಯಲಿಲ್ಲ. ಇದು ಕನ್ನಡ ಭಾಷೆ ಹಾಗೂ ಕನ್ನಡ ಪರಂಪರೆ ಉಳಿವಿನ ಕಾರ್ಯಕ್ಕೆ ಶ್ರಮಿಸುವ ಸಂಘಕ್ಕೆ ಅನುದಾನ ನೀಡದೇ ಇರುವುದು ಕಾಂಗ್ರೆಸ್ ಸರ್ಕಾರದ ಕನ್ನಡ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಖಂಡಿಸಿದ್ದಾರೆ.
ಕನ್ನಡ ನಾಡು-ನುಡಿ, ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲದ ಈ ಸರ್ಕಾರ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಬಗ್ಗೆ ಅಸಡ್ಡೆ ನೀತಿ ಅನುಸರಿಸುತ್ತಿರುವುದು ಅತ್ಯಂತ ಖಂಡನೀಯ. ಧಾರವಾಡದ ನೆಲದಲ್ಲಿ ಸ್ವಾತಂತ್ರ್ಯಾ ಪೂರ್ವದಿಂದಲೂ ಕನ್ನಡ ಡಿಂಡಿಮ ಬಾರಿಸಿ, ನಾಡಿನ ಉದ್ದಾಮ ಪಂಡಿತರು ಹಾಗೂ ಸಾಹಿತಿಗಳ ಕಾರ್ಯಕ್ಷೇತ್ರದ ವೇದಿಕೆಯಾಗಿದ್ದ ಕರ್ನಾಟಕ ವಿದ್ಯಾವರ್ಧಕ ಸಂಘದ ಪುನಶ್ಚೇತನಕ್ಕೆ ಬದ್ಧತೆಯನ್ನು ಸಾಬೀತುಪಡಿಸುವ ನಿಟ್ಟಿನಲ್ಲಿ ಅಗತ್ಯ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications