ಕರ್ನಾಟಕದ ಮತ್ತೊಬ್ಬ ಪ್ರಭಾವಿ ಸಚಿವನ ವಿರುದ್ಧ ಸರ್ಕಾರಿ ಭೂಮಿ ಕಬಳಿಕೆ ದೂರು
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತಮ್ಮ ನಾಯಕರಿಗೆಂದೇ ಹೊಸದಾಗಿ ಏನಾದರು ಯೋಜನೆ ಜಾರಿ ಮಾಡಿದ್ಯಾ. ಯಾಕೆಂದರೆ ಒಬ್ಬೊಬ್ಬ ನಾಯಕರಾದ ಮೇಲೆ ಒಬ್ಬಂರತೆ ನಾಯಕರು ಸರ್ಕಾರಿ ಭೂಮಿ ಕಬಳಿಸುತ್ತಿರುವ ಆರೋಪಗಳು ಕೇಳಿ ಬರುತ್ತಿವೆ. ಇದಕ್ಕೆ ಕೇಳ್ತಾ ಇದ್ದೀವಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸರ್ಕಾರಿ ಜಮೀನು ಕಬಳಿಸುವ ಅಲಿಖಿತ ಯೋಜನೆ ಜಾರಿ ಮಾಡಿದ್ದೀರಾ ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ. ಅಬಕಾರಿ ಸಚಿವರ ಮೇಲೆ ಕೇಳಿ ಬಂದಿರುವ ಆರೋಪವನ್ನು ಜೆಡಿಎಸ್ ಉಲ್ಲೇಖಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಜೆಡಿಎಸ್ ಪೋಸ್ಟ್ ಮಾಡಿದೆ. ಮೂಡಾ ಹಗರಣ, ಕೆಐಎಡಿಬಿ ಸೈಟು ಅಕ್ರಮಗಳ ಬೆನ್ನಲ್ಲೇ, ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ವಿರುದ್ಧವೂ 92 ಎಕರೆ ಸರ್ಕಾರಿ ಭೂಮಿ ಕಬಳಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ರಾಯಚೂರು ಚಿಲ್ಲೆಯ ಲಿಂಗಸಗೂರು ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸೇರಿದ 49 ಎಕರೆ, ಹಾಗೂ ಅರಣ್ಯ ಇಲಾಖೆಯ 43 ಎಕರೆ ಜಮೀನನ್ನು ತಿಮ್ಮಾಪುರ ಒಡೆತನದ ಆರ್.ಬಿ ಶುಗರ್ಸ್ ಫ್ಯಾಕ್ಟರಿ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ರೈತ ಸಂಘ ಲಿಂಗಸಗೂರು ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೇ, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೇ 92 ಎಕರೆ ಸರ್ಕಾರಿ ಜಮೀನನ್ನು ಯಾವಾಗ ವಶಪಡಿಸಿಕೊಳ್ಳುತ್ತೀರಿ ಎಂದು ಜೆಡಿಎಸ್ ಪ್ರಶ್ರೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮ್ಮ ಸರ್ಕಾರದಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಸರ್ಕಾರಿ ಜಮೀನು ಕಬಳಿಸುವ ಅಲಿಖಿತ ಯೋಜನೆ ಜಾರಿಯಾಗಿದೆಯೇ ಎಂದು ಪ್ರಶ್ನೆ ಮಾಡಿದೆ.

ಆರ್ಬಿ ತಿಮ್ಮಾಪುರ ಅವರ ವಿರುದ್ಧ ಆರೋಪವೇನು ?
ರಾಜ್ಯದಲ್ಲಿ ಭೂ ಹಗರಣಗಳೇ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಇದೀಗ ಮತ್ತೊಬ್ಬ ರಾಜ್ಯ ಸಚಿವನ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಸಚಿವ ಆರ್ಬಿ ತಿಮ್ಮಾಪುರ ಅವರ ಒಡೆತನದ ಆರ್ಬಿ ಶುಗರ್ಸ್ ಕಂಪನಿಯು ಸರ್ಕಾರಿ ಭೂಮಿ ಕಬಳಿಸಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆಯ ಚಿಕ್ಕ ಉಪ್ಪೇರಿ ಗ್ರಾಮ ವ್ಯಾಪ್ತಿಯಲ್ಲಿರುವ ಗೈರಾಣಿ ಜಮೀನು ಪ್ರದೇಶವನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಲಿಂಗಸುಗೂರು ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಪತ್ರ ಬರೆಯಲಾಗಿದೆ.
ಸುಣಕಲ್ ಸಿಮಾಂತರದಲ್ಲಿ ಜಮೀನು ಖರೀದಿ ಮಾಡಿರುವ ಪ್ರಭಾವಿ ವ್ಯಕ್ತಿಗಳು ಈ ಪ್ರದೇಶದ ಪಕ್ಕದಲ್ಲೇ ಗೈರಾಣಿ ಭೂಮಿಯನ್ನು ಸಹ ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಆದರೆ, ಇದು ನಿರ್ದಿಷ್ಟವಾಗಿ ಜಾನುವಾರು ಅಭಿವೃದ್ಧಿಗಾಗಿ ಮೀಸಲಾಗಿದೆ. ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸುವ ಚಿಂತನೆ ಇದೆ ಎಂದು ಹೇಳಲಾಗುತ್ತಿದೆ. ಈ ರೀತಿ ಮಾಡಿದರೆ ಸುತ್ತಮುತ್ತದ ಪ್ರದೇಶದಲ್ಲಿರುವ ಜನರಿಗೆ ಸಮಸ್ಯೆ ಆಗಲಿದೆ ಎಂದು ಸ್ಥಳೀಯ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಹಲವು ಭೂ ಹಗರಣದ ಆರೋಪಗಳು ಸದ್ದು ಮಾಡುತ್ತಿವೆ. ವಿರೋಧ ಪಕ್ಷಗಳು ಇದನ್ನು ಅಸ್ತ್ರವಾಗಿ ಬಳಸಿಕೊಂಡಿವೆ. ಇದೀಗ ಅಬಕಾರಿ ಸಚಿವರ ವಿರುದ್ಧವೂ ಸಹ ಆರೋಪ ಕೇಳಿ ಬಂದಿದ್ದು, ಇದನ್ನು ಸಹ ವಿರೋಧ ಪಕ್ಷಗಳು ಟೀಕಿಸಿವೆ. ಆರೋಪ ಕೇಳಿ ಬರುತ್ತಿದ್ದಂತೆಯೇ ಈ ವಿಷಯದ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಮ್ಮ ನಾಯಕರಿಗೆಂದೇ ಹೊಸದಾಗಿ ಏನಾದರು ಯೋಜನೆ ಜಾರಿ ಮಾಡಿದೆಯೇ ಎಂದು ವ್ಯಂಗ್ಯವಾಡಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications