ಅರಣ್ಯ ಪ್ರದೇಶದ 1 ಕಿ. ಮೀ. ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಒಪ್ಪಿಗೆ
ಬೆಂಗಳೂರು, ಅಕ್ಟೋಬರ್ 12; ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮನೆ, ಕಟ್ಟಡ ನಿರ್ಮಾಣ ಮಾಡಲು ಇದ್ದ ನಿರ್ಬಂಧವನ್ನು ಕರ್ನಾಟಕ ಸರ್ಕಾರ ಸಡಿಲಿಸಲಿದೆ. ರಾಜ್ಯದಲ್ಲಿ ಮತ್ತೆ 6 ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪ ಸಮಿತಿ ಸಭೆಯ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಧ್ಯಮಗಳ ಜೊತೆ ಮಾತನಾಡಿದರು. ಅರಣ್ಯ ಪ್ರದೇಶದ 1 ಕಿ. ಮೀ. ವ್ಯಾಪ್ತಿಯ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡುವ ಕುರಿತು ವಿವರಣೆ ನೀಡಿದರು.

ಸಚಿವರು ಮಾತನಾಡಿ, "ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ 1 ಕಿ. ಮೀ. ವ್ಯಾಪ್ತಿಯಲ್ಲಿ ಮನೆ, ಕಟ್ಟಡ ನಿರ್ಮಾಣ ಮಾಡಲು ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಲಾಗುತ್ತದೆ" ಎಂದು ಹೇಳಿದರು.
"ಇದುವರೆಗೂ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ 1 ಕಿ. ಮೀ. ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳನ್ನು ನಿರ್ಮಾಣ ಮಾಡಲು ಅನುಮತಿ ಇರಲಿಲ್ಲ. ಈ ವ್ಯಾಪ್ತಿಯಲ್ಲಿರುವ ಖಾಸಗಿ ಭೂಮಿಯಲ್ಲಿ ಫಾರಂ ಹೌಸ್, ರೆಸಾರ್ಟ್, ಸಾಮಿಲ್, ಪವನ ವಿದ್ಯುತ್ ಘಟಕಗಳನ್ನು ನಿರ್ಮಾಣ ಮಾಡಲು ಅನುಮತಿ ದೊರೆಯಲಿದೆ" ಎಂದು ಸಚಿವರು ವಿವರಣೆ ನೀಡಿದರು.
"ರಾಜ್ಯದಲ್ಲಿ ಇಂತಹ ಸುಮಾರು 35 ಪ್ರದೇಶಗಳನ್ನು ಗುರುತಿಸಲಾಗಿದೆ. ಈ ಪೈಕಿ 29 ಪ್ರದೇಶದಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡಲು ಸಹಮತ ವ್ಯಕ್ತವಾಗಿದೆ. ನಾಗರಹೊಳೆ ಸೇರಿದಂತೆ ಇನ್ನೂ 6 ಪ್ರದೇಶಗಳಲ್ಲಿ ಇಂತಹ ನಿಯಮ ಸಡಿಲಿಸಲು ಸಹಮತ ವ್ಯಕ್ತವಾಗಿದೆ" ಎಂದರು.
6 ಪರಿಸರ ಸೂಕ್ಷ್ಮ ಪ್ರದೇಶಗಳು; ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಇನ್ನೂ 6 ಪರಿಸರ ಸೂಕ್ಷ್ಮ ಪ್ರದೇಶಗಳನ್ನು ಘೋಷಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ. ಇವುಗಳಲ್ಲಿ ಕಪ್ಪತ್ತಗುಡ್ಡ, ಅಣಶಿ ರಾಷ್ಟ್ರೀಯ ಉದ್ಯಾನ, ಚಿಂಕಾರ ವನ್ಯಜೀವಿ ಧಾಮಗಳು ಸೇರಿವೆ.
ಪರಿಸರ ಸೂಕ್ಷ್ಮ ವಲಯಗಳನ್ನು ನಿರ್ಣಯಿಸುವ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ 6 ತಾಣಗಳನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಲು ಶಿಫಾರಸು ಮಾಡಲು ಒಪ್ಪಿಗೆ ನೀಡಿದೆ.
2011ರಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಅನ್ವಯ ಪರಿಸರ ಸೂಕ್ಷ್ಮ ವಲಯಗಳಲ್ಲಿ ಅಭಿವೃದ್ದಿ ಚಟುವಟಿಕೆಗಳನ್ನು ಕೈಗೊಳ್ಳುವುದು ನಿಷೇಧ. ನಿರ್ಬಂಧಿತ ಚಟುವಟಿಕೆಗಳು ಮತ್ತು ನಿಷೇಧಿತ ಚಟುವಟಿಕೆಗಳು ಎಂದು ಕೇಂದ್ರ ಅರಣ್ಯ, ಪರಿಸರ ಸಚಿವಾಲಯ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ.
ಸಭೆಯಲ್ಲಿ ಗದಗ ಜಿಲ್ಲೆಯ ಕಪ್ಪತ್ತಗುಡ್ಡ. ತುಮಕೂರು ಜಿಲ್ಲೆಯ ಬುಕ್ಕಾಪಟ್ಟಣದ ಚಿಂಕಾರ ವನ್ಯಜೀವಿ ಧಾಮ, ಕೋಲಾರ ಜಿಲ್ಲೆಯ ಕಾಮಸಮುದ್ರ ವನ್ಯಜೀವಿ ಧಾಮ, ರಾಜೀವ್ಗಾಂಧಿ ರಾಷ್ಟ್ರೀಯ ಉದ್ಯಾನ, ಉತ್ತರ ಕನ್ನಡ ಜಿಲ್ಲೆಯ ಅಣಶಿ ರಾಷ್ಟ್ರೀಯ ಉದ್ಯಾನ, ಸಾತನೂರು ಬಳಿಯ ಕಾವೇರಿ ವಿಸ್ತರಿತ ವನ್ಯಜೀವಿಧಾಮವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಲಾಗುತ್ತದೆ.
ರಾಷ್ಟ್ರೀಯ ಉದ್ಯಾನ ಮತ್ತು ವನ್ಯಜೀವಿ ಧಾಮಗಳ ಸುತ್ತಮುತ್ತಲಿನ ಕನಿಷ್ಠ 1 ಕಿ. ಮೀ. ನಿಂದ 23.06 ಕಿ. ಮೀ. ಪ್ರದೇಶವನ್ನು ಪರಿಸರಸೂಕ್ಮ ಪ್ರದೇಶ ಎಂದು ಘೋಷಣೆ ಮಾಡಬಹುದು. ಆದರೆ ಇಲ್ಲಿ ಯಾವ-ಯಾವ ಚಟುವಟಿಕೆ ನಡೆಸಬಹುದು ಎಂಬುದಕ್ಕೆ ಮಾರ್ಗಸೂಚಿಗಳಿವೆ.
ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಮಾಡುವ ಮೊದಲು ಆ ಪರಿಸರದಲ್ಲಿರುವ ವಸತಿ, ಶಾಲೆ, ಆಸ್ಪತ್ರೆ, ರಸ್ತೆ ಮುಂತಾದವುಗಳನ್ನು ಗಮನದಲ್ಲಿಟ್ಟುಕೊಳ್ಳಲಾಗುತ್ತದೆ. ಘೋಷಣೆಯಾದ ಬಳಿಕ ಕೆಲವು ಚಟುವಟಿಕೆಗಳಿಗೆ ಅನುಮತಿ ನೀಡಲಾಗುತ್ತದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Karnataka: ರಾಜ್ಯದಲ್ಲಿ ಹೆಚ್ಚಾಯ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: 3 ವರ್ಷದಲ್ಲಿ 27 ಸಾವು -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications