ಅಮರನಾಥ ಯಾತ್ರೆ; ಕನ್ನಡಿಗರನ್ನು ಕರೆತರಲು ಸರ್ಕಾರದಿಂದ ವ್ಯವಸ್ಥೆ
ಬೆಂಗಳೂರು, ಜುಲೈ 09; ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಇವರಲ್ಲಿ 20ಕ್ಕೂ ಹೆಚ್ಚು ಕನ್ನಡಿಗರು ಸೇರಿದ್ದಾರೆ. ಇವರು ಮೂಲತಃ ಗದಗ ಜಿಲ್ಲೆಯವರು.
ಅಮರನಾಥ ಯಾತ್ರೆಗೆ ತೆರಳಿದ್ದ ಕನ್ನಡಿಗರು ಅಲ್ಲಿ ಸಿಲುಕಿಕೊಂಡಿರುವ ವಿಚಾರ ರಾಜ್ಯ ಸರ್ಕಾರದ ಗಮನಕ್ಕೂ ಸಹ ಬಂದಿದೆ. ಸರ್ಕಾರ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಐಎಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಗಳು ಟ್ವೀಟ್ನಲ್ಲಿ, "ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ" ಎಂದು ಹೇಳಿದ್ದಾರೆ.
"ಗದಗದಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿ. ಮೀ. ದೂರದಲ್ಲಿರುವ ಪಂಚತಾರ್ನಿ ಟೆಂಟ್ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಟ್ವೀಟ್ ಮಾಡಿ, "ಹವಾಮಾನ ವೈಪರೀತ್ಯದಿಂದ ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23ಮಂದಿ ಸೇರಿದಂತೆ ಒಟ್ಟು 80 ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿರುವ ವಿಷಯವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಸಂಕಷ್ಟದಲ್ಲಿ ಸಿಲುಕಿರುವ ಎಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕರೆತರುವ ವ್ಯವಸ್ಥೆ ಮಾಡಲಾಗಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದಿಂದ ಸಮಸ್ಯೆ; ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಗುಡ್ಡ ಕುಸಿತವಾಗಿದೆ. ಇದರಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದ್ದರಿಂದ ನಾಲ್ಕು ದಿನಗಳಿಂದ ಕನ್ನಡಿಗರು ಅಲ್ಲಿ ಸಿಲುಕಿದ್ದಾರೆ.
ಗದಗ ಜಿಲ್ಲೆಯಿಂದ ಅಮರನಾಥ ಯಾತ್ರೆಗೆ ತೆರಳಿದ್ದವರು ಅಲ್ಲಿ ಸಿಲುಕಿರುವ ಬಗ್ಗೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಎಸ್. ನೇಮಗೌಡ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದರು. ರಕ್ಷಣಾ ಕಾರ್ಯಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದ್ದರು. ಬಳಿಕ ಅವರು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದರು.
ಗುಜರಾತಿ ಸಮುದಾಯಕ್ಕೆ ಸೇರಿದ 23 ಮಂದಿ ಒಟ್ಟಾಗಿ ಜುಲೈ 4ರಂದು ಅಮರನಾಥ ಯಾತ್ರೆಗೆ ತೆರಳಿದ್ದಾರೆ. ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಮಧ್ಯದಲ್ಲೇ ಸಿಕ್ಕಿಕೊಂಡು ಕ್ಯಾಂಪ್ನಲ್ಲೇ ಉಳಿದುಕೊಂಡಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಆದರೆ ಹವಾಮಾನ ಎರಡು ದಿನಗಳ ಕಾಲ ಹೀಗೆಯೆ ಇರಲಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆದ್ದರಿಂದ ಕ್ಯಾಂಪ್ನಲ್ಲಿಯೇ ಉಳಿಯುವುದು ಅನಿವಾರ್ಯವಾಗಿದೆ.
ಕನ್ನಡಿಗರು ಇರುವ ಕ್ಯಾಂಪ್ನಲ್ಲಿ 880 ಯಾತ್ರಾರ್ಥಿಗಳು ಇದ್ದಾರೆ. ಹವಾಮಾನ ಸರಿ ಇಲ್ಲದ ಕಾರಣ ಯಾತ್ರೆ ಮುಂದಕ್ಕೆ ಸಾಗುತ್ತಿಲ್ಲ. ಇದೇ ದಾರಿಯಲ್ಲಿ 15 ಯಾತ್ರಾರ್ಥಿಗಳು ಸಿಲುಕಿದ್ದಾರೆ. ಕ್ಯಾಂಪ್ನಲ್ಲಿ ಸಿಲುಕಿರುವ ಯಾತ್ರಾರ್ಥಿಗಳ ಜೊತೆ ಗದಗ ಜಿಲ್ಲಾಡಳಿತ ಮಾತುಕತೆ ನಡೆಸಿದ್ದು, ಅವರಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಮಾಡಿದೆ.
ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್. ಮಾತನಾಡಿ, "ಹವಾಮಾನ ಸರಿ ಇಲ್ಲ ಎಂಬ ಕಾರಣಕ್ಕೆ ಯಾತ್ರಿಗಳನ್ನು ಮುಂದಕ್ಕೆ ಬಿಡುತ್ತಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅಲ್ಲಿನ ಅಧಿಕಾರಿಗಳು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಯಾತ್ರಿಗಳ ಕಾಳಜಿ ಮಾಡಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ" ಎಂದು ಹೇಳಿದ್ದಾರೆ.
ಭಾರೀ ಮಳೆ ಮತ್ತು ಗುಡ್ಡ ಕುಸಿತದ ಕಾರಣ ತಾತ್ಕಾಲಿಕವಾಗಿ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಜುಲೈ 7ರಂದು ಘೋಷಣೆ ಮಾಡಿದ್ದರು. ಯಾವುದೇ ಯಾತ್ರಿಕರಿಗೆ ಗುಹೆಯತ್ತ ತೆರಳಲು ಸದ್ಯಕ್ಕೆ ಅನುಮತಿ ಇಲ್ಲ. ಕ್ಯಾಂಪ್ನಲ್ಲಿಯೇ ಉಳಿಯುವಂತೆ ಮನವಿ ಮಾಡಲಾಗಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ











Click it and Unblock the Notifications