Get Updates
Get notified of breaking news, exclusive insights, and must-see stories!

IAS, IPS Transfer: ಹಲವು ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಪಟ್ಟಿ

ಬೆಂಗಳೂರು, ಜೂನ್ 15: ಲೋಕಸಭೆ ಚುನಾವಣೆ 2024 ಮುಕ್ತಾಯಗೊಳ್ಳುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದೆ. ಹಲವು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಹಿರಿಯ ಐಎಎಸ್ ಅಧಿಕಾರಿಗಳಾದ ಟಿ. ಕೆ. ಅನಿಲ್ ಕುಮಾರ್, ಹರ್ಷ ಗುಪ್ತ ಸೇರಿ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

Government Of Karnataka IAS And IPS Officers Transfer List

ವರ್ಗಾವಣೆಗೊಂಡ ಅಧಿಕಾರಿಗಳು

* ಅನಿಲ್ ಕುಮಾರ್ ಕೆ. ಟಿ. (ಕೆಎ:1995). ಸರ್ಕಾರದ ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ವರ್ಗಾವಣೆ. ಸರ್ಕಾರದ ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ), ಬೆಂಗಳೂರು ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ನೇಮಕ. ಈ ಹುದ್ದೆಯಲ್ಲಿದ್ದ ಮೊಹಮ್ಮದ್ ಮೊಹಸಿನ್ ಬಿಡುಗಡೆ.

* ಹರ್ಷ ಗುಪ್ತ (ಕೆಎನ್: 1997). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಅನಿಲ್ ಕುಮಾರ್ ಕೆ. ಟಿ. ವರ್ಗಾವಣೆಗೊಳಿಸಲಾಗಿದೆ.

* ವಿಪುಪ್ ಬನ್ಸಾಲ್ (ಕೆಎನ್:2005). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಎಂಎಸ್‌ಎಂಇ & ಮೈನ್ಸ್), ಬೆಂಗಳೂರು ಹುದ್ದೆಗೆ ನೇಮಿಸಲಾಗಿದೆ. ಈ ಹುದ್ದೆ 30/6/2024ರಿಂದ ತೆರವಾಗಿತ್ತು.

* ರಣದೀಪ್ ಚೌಧರಿ (ಕೆಎನ್: 2008). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ. ಪ್ರಕಾಶ್ ಜಿ. ಸಿ. ಅವರನ್ನು ಬಿಡುಗಡೆ ಮಾಡಲಾಗಿದೆ.

* ಕುಮಾರ್ ಟಿ. ಹೆಚ್. ಎಂ. (ಕೆಎನ್:2008). ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ, ಬೆಂಗಳೂರು ಹುದ್ದೆಗೆ ಜೊತೆಗೆ ಹೆಚ್ಚುವರಿಯಾಗಿ ಆಯುಕ್ತರು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಬೆಂಗಳೂರು, ಹೊಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ನೀಡಲಾಗಿದೆ. ಈ ಹುದ್ದೆಯಲ್ಲಿದ್ದ ಸಿ. ಎನ್. ಶ್ರೀಧರ್ ವರ್ಗಾವಣೆ ಮಾಡಲಾಗಿದೆ.

ಐಪಿಎಸ್ ವರ್ಗಾವಣೆ

* ಕುಲದೀಪ್ ಕುಮಾರ್ ಆರ್. ಜೈನ್ (ಕೆಎನ್:2011) ಡಿಸಿಪಿ, ಬೆಂಗಳೂರು ಪೂರ್ವ ವಿಭಾಗ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ. ಡಿಸಿಪಿ ಟ್ರಾಫಿಲ್ ಪೂರ್ವ ವಿಭಾಗ, ಬೆಂಗಳೂರು ಹುದ್ದೆಗೆ ವರ್ಗಾವಣೆ.

* ಡಿ. ದೇವರಾಜ್ (ಕೆಎನ್:2012). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಸಿಪಿ ಪೂರ್ವ ವಿಭಾಗ, ಬೆಂಗಳೂರು ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+