IAS, IPS Transfer: ಹಲವು ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಪಟ್ಟಿ
ಬೆಂಗಳೂರು, ಜೂನ್ 15: ಲೋಕಸಭೆ ಚುನಾವಣೆ 2024 ಮುಕ್ತಾಯಗೊಳ್ಳುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದೆ. ಹಲವು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಹಿರಿಯ ಐಎಎಸ್ ಅಧಿಕಾರಿಗಳಾದ ಟಿ. ಕೆ. ಅನಿಲ್ ಕುಮಾರ್, ಹರ್ಷ ಗುಪ್ತ ಸೇರಿ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಗೊಂಡ ಅಧಿಕಾರಿಗಳು
* ಅನಿಲ್ ಕುಮಾರ್ ಕೆ. ಟಿ. (ಕೆಎ:1995). ಸರ್ಕಾರದ ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ವರ್ಗಾವಣೆ. ಸರ್ಕಾರದ ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ), ಬೆಂಗಳೂರು ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ನೇಮಕ. ಈ ಹುದ್ದೆಯಲ್ಲಿದ್ದ ಮೊಹಮ್ಮದ್ ಮೊಹಸಿನ್ ಬಿಡುಗಡೆ.
* ಹರ್ಷ ಗುಪ್ತ (ಕೆಎನ್: 1997). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಅನಿಲ್ ಕುಮಾರ್ ಕೆ. ಟಿ. ವರ್ಗಾವಣೆಗೊಳಿಸಲಾಗಿದೆ.
* ವಿಪುಪ್ ಬನ್ಸಾಲ್ (ಕೆಎನ್:2005). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಎಂಎಸ್ಎಂಇ & ಮೈನ್ಸ್), ಬೆಂಗಳೂರು ಹುದ್ದೆಗೆ ನೇಮಿಸಲಾಗಿದೆ. ಈ ಹುದ್ದೆ 30/6/2024ರಿಂದ ತೆರವಾಗಿತ್ತು.
* ರಣದೀಪ್ ಚೌಧರಿ (ಕೆಎನ್: 2008). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ. ಪ್ರಕಾಶ್ ಜಿ. ಸಿ. ಅವರನ್ನು ಬಿಡುಗಡೆ ಮಾಡಲಾಗಿದೆ.
* ಕುಮಾರ್ ಟಿ. ಹೆಚ್. ಎಂ. (ಕೆಎನ್:2008). ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ, ಬೆಂಗಳೂರು ಹುದ್ದೆಗೆ ಜೊತೆಗೆ ಹೆಚ್ಚುವರಿಯಾಗಿ ಆಯುಕ್ತರು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಬೆಂಗಳೂರು, ಹೊಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ನೀಡಲಾಗಿದೆ. ಈ ಹುದ್ದೆಯಲ್ಲಿದ್ದ ಸಿ. ಎನ್. ಶ್ರೀಧರ್ ವರ್ಗಾವಣೆ ಮಾಡಲಾಗಿದೆ.
ಐಪಿಎಸ್ ವರ್ಗಾವಣೆ
* ಕುಲದೀಪ್ ಕುಮಾರ್ ಆರ್. ಜೈನ್ (ಕೆಎನ್:2011) ಡಿಸಿಪಿ, ಬೆಂಗಳೂರು ಪೂರ್ವ ವಿಭಾಗ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ. ಡಿಸಿಪಿ ಟ್ರಾಫಿಲ್ ಪೂರ್ವ ವಿಭಾಗ, ಬೆಂಗಳೂರು ಹುದ್ದೆಗೆ ವರ್ಗಾವಣೆ.
* ಡಿ. ದೇವರಾಜ್ (ಕೆಎನ್:2012). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಸಿಪಿ ಪೂರ್ವ ವಿಭಾಗ, ಬೆಂಗಳೂರು ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications