ಲಾಕ್ಡೌನ್, ದಿನ 1: ಮಾರ್ಗಸೂಚಿಯಲ್ಲಿ ಬದಲಾವಣೆ 2
ಬೆಂಗಳೂರು, ಮೇ 11: ಕೊರೊನಾ ಮಾರ್ಗಸೂಚಿಯಲ್ಲಿ ಪದೇಪದೇ ಬದಲಾವಣೆಗಳನ್ನು ಮಾಡುತ್ತಾ, ಸಾರ್ವಜನಿಕ ವಲಯದಲ್ಲಿ ನಗೇಪಾಟಲಿಗೆ ಗುರಿಯಾಗುತ್ತಿರುವ ರಾಜ್ಯ ಸರಕಾರ, ಹಾಲೀ ಲಾಕ್ಡೌನಿನ ಮೊದಲನೇ ದಿನವೇ ಎರಡು ಬದಲಾವಣೆಗಳನ್ನು ಮಾಡಿದೆ.
Recommended Video
ಯಾವುದಕ್ಕೆ ನಿರ್ಬಂಧ, ಯಾವುದಕ್ಕೆ ನಿರ್ಬಂಧವಿಲ್ಲ ಎನ್ನುವುದು ಪ್ರತೀ ಮಾರ್ಗಸೂಚಿಯಲ್ಲೂ ಗೊಂದಲದ ಗೂಡಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ, ಸರಕಾರ ಹೊರಡಿಸುವ ಮಾರ್ಗಸೂಚಿ ಬಹುತೇಕ ಕನ್ನಡದಲ್ಲಿ ಇಲ್ಲದೇ ಇರುವುದು.
ಈ ಲಾಕ್ಡೌನ್, ಜನತಾ ಕರ್ಫ್ಯೂವಿನ ಮುಂದುವರಿದ ಭಾಗ ಎನ್ನುವಂತೆ, ಕೊಂಚ ಬದಲಾವಣೆಗಳನ್ನು ಮಾಡಿ ಮೇ ಎಂಟರಂದು ಪರಿಸ್ಕೃತ ಗೈಡ್ಲೈನ್ಸ್ ಅನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿತ್ತು. ಹೊಸ ಮಾರ್ಗಸೂಚಿ ಸೋಮವಾರದಿಂದ (ಮೇ 10) ಜಾರಿಗೆ ಬಂದಿತ್ತು.

ಮಾರ್ಗಸೂಚಿಯ ಪ್ರಕಾರ, ಹದಿನಾಲ್ಕು ದಿನಗಳ ಲಾಕ್ಡೌನ್ ವೇಳೆ, ಪೊಲೀಸರಿಗೆ ಫ್ರೀಹ್ಯಾಂಡ್ ನೀಡಲಾಗಿತ್ತು. ಇನ್ನೊಂದು, ಬೆಳಗ್ಗೆ ಆರರಿಂದ ಹತ್ತರವರೆಗೆ ಅವಶ್ಯಕ ವಸ್ತುಗಳ ಖರೀದಿಗೆ ವಾಹನವನ್ನು ಬಳಸದಂತೆ ನಿರ್ಬಂಧ ಹೇರಲಾಗಿತ್ತು.
ಪೊಲೀಸರಿಗೆ ಫ್ರೀಹ್ಯಾಂಡ್ ಸಿಕ್ಕಿದ್ದೇ ಸಿಕ್ಕಿದ್ದು, ಸಿಕ್ಕಸಿಕ್ಕಲ್ಲಿ ಲಾಠಿ ಬೀಸುವ ದೃಶ್ಯ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಮುಖ್ಯಮಂತ್ರಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕರೆ ಮಾಡಿ ಲಾಠಿ ಬೀಸದಂತೆ ಸೂಚನೆ ಕೊಟ್ಟರು. ಅದರ ಬೆನ್ನಲ್ಲೇ, ಬೆಂಗಳೂರು ಪೊಲೀಸ್ ಆಯುಕ್ತರು ಲಾಠಿ ಬೀಸದಂತೆ ತಮ್ಮ ಸಿಬ್ಬಂದಿಗಳಿಗೆ ಸೂಚಿಸಿದರು. ಅಲ್ಲಿಗೆ, ಮಾರ್ಗಸೂಚಿಯಲ್ಲಿ ಮೊದಲ ಬದಲಾವಣೆಯಾಯಿತು.
ಇದಾದ ಸ್ವಲ್ಪ ಹೊತ್ತಿನಲ್ಲೇ ಬೆಳಗ್ಗೆ ಅಗತ್ಯ ವಸ್ತುಗಳನ್ನು ಖರೀದಿಸಲು ವಾಹನವನ್ನು ಬಳಸಬಹುದು. ಆದರೆ, ಇದನ್ನೇ ಲಾಭವಾಗಿ ಪಡೆದುಕೊಂಡು ಅಡ್ಡಾದಿಡ್ಡಿ ಸುತ್ತಬೇಡಿ ಎಂದು ಸರಕಾರ ಆದೇಶ ಹೊರಡಿಸಿತು. ಅಲ್ಲಿಗೆ, ಲಾಕ್ ಡೌನಿನ ಮೊದಲ ದಿನವೇ, ಸರಕಾರ ಮಾರ್ಗಸೂಚಿಯಲ್ಲಿ ಎರಡು ಬದಲಾವಣೆಯನ್ನು ಮಾಡಿತ್ತು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications