ದೇವೇಗೌಡರಿಗಾಗಿ ದುಬಾರಿ ಕಾರು ಖರೀದಿಸಿದ ಯಡಿಯೂರಪ್ಪ ಸರಕಾರ
ಬೆಂಗಳೂರು, ಸೆ 23: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರಿಗೆ, ಯಡಿಯೂರಪ್ಪನವರ ಸರಕಾರ ದುಬಾರಿ ವೋಲ್ವೋ ಕಾರನ್ನು ಖರೀದಿಸಿದೆ. ರಾಜ್ಯಸಭೆಗೆ ಗೌಡ್ರು ಆಯ್ಕೆಯಾಗಿರುವ ಕಾರಣ ಶಿಷ್ಟಾಚಾರದ ಪ್ರಕಾರ ಕಾರು ನೀಡಬೇಕಿದೆ.
Recommended Video
ವೋಲ್ವೋ XC60 ಡಿ5 ಸಿರೀಸ್ ಕಾರನ್ನು ದೇವೇಗೌಡರಿಗಾಗಿ, ಮುಖ್ಯ ಕಾರ್ಯದರ್ಶಿಯ ಹೆಸರಿನಲ್ಲಿ ರಾಜ್ಯ ಸರಕಾರ ಖರೀದಿಸಿದೆ. ಈಗಾಗಲೇ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಫಾರ್ಚ್ಯೂನರ್ ಕಾರನ್ನು ಸರಕಾರ ನೀಡಿದೆ.
ಸರಕಾರ ಕಾರು ಖರೀದಿಸಿದ್ದರೂ, ದೇವೇಗೌಡರಿಗೆ ಇನ್ನೂ ಇದು ಹಸ್ತಾಂತರಗೊಳ್ಲಬೇಕಿದೆ. ಹಾಗಾಗಿ, ವೋಲ್ವೋ ಕಾರು ಇನ್ನೂ ಕುಮಾರಕೃಪ ಅತಿಥಿಗೃಹದಲ್ಲಿದೆ. 15 ದಿನಗಳ ಹಿಂದಷ್ಟೇ ಈ ಕಾರನ್ನು ಖರೀದಿಸಲಾಗಿದೆ.

ಈ ದುಬಾರಿ ಕಾರಿನ ಮೂಲಬೆಲೆ ಅರವತ್ತು ಲಕ್ಷ ರೂಪಾಯಿ. ಸರಕಾರದ ಹೆಸರಿನಲ್ಲಿ ಕಾರನ್ನು ಖರೀದಿಸುತ್ತಿರುವುದರಿಂದ, ಯಾವುದೇ ತೆರಿಗೆ ಈ ಖರೀದಿಗೆ ಅನ್ವಯವಾಗುವುದಿಲ್ಲ. ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ, ಇದು ಮುಗಿದ ಮೇಲೆ ಗೌಡ್ರು ಸರಕಾರದಿಂದ ಕಾರನ್ನು ತೆಗೆದುಕೊಳ್ಳಬಹುದು.
ಇತ್ತೀಚೆಗೆ ರಾಜ್ಯಸಭಾ ಸದಸ್ಯರಿಗೆ ಕನ್ನಡದಲ್ಲಿ ದೇವೇಗೌಡರು ಪ್ರಮಾಣವಚನ ಸ್ವೀಕರಿಸಿದ್ದರು. ಕೃಷಿ ಸಂಬಂಧಿತ ಕಾಯ್ದೆ ವಿಚಾರದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸಂಸದರು ಒಮ್ಮತದ ತೀರ್ಮಾನಕ್ಕೆ ಬರುವಂತೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಎಲ್ಲಾ ಪಕ್ಷಗಳ ಸಂಸದರಿಗೆ ಕಿವಿಮಾತು ಹೇಳಿದ್ದರು.
"ಪರಸ್ಪರ ಒಮ್ಮತದ ತೀರ್ಮಾನಕ್ಕೆ ಬರಲು ಸಂಸದರು ಶಾಂತಿಯುತವಾಗಿ ಚರ್ಚೆ ನಡೆಸಬೇಕು. ಸಂಸತ್ ಕಲಾಪಗಳನ್ನು ನಡೆಸುವುದಕ್ಕೆ ಸಂಸದರು ಅವಕಾಶ ಕಲ್ಪಿಸಿ ಕೊಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಹಕಾರದೊೆಂದಿಗೆ ಎಲ್ಲರೂ ಕೆಲಸ ಮಾಡಬೇಕಿದೆ" ಎಂದು ಸಲಹೆ ನೀಡಿದ್ದರು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications