Get Updates
Get notified of breaking news, exclusive insights, and must-see stories!

ಬಾಹ್ಯ ಮೂಲಗಳಿಂದ ವಿದ್ಯುತ್ ಖರೀದಿಸಲು ಕರ್ನಾಟಕ ಸರ್ಕಾರದ ಚಿಂತನೆ

ಬೆಂಗಳೂರು, ಅಕ್ಟೋಬರ್‌ 13: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಇಳಿಮುಖವಾಗಿದ್ದು, ಬಾಹ್ಯ ಮೂಲಗಳಿಂದ ವಿದ್ಯುತ್ ಖರೀದಿಸುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ವಿದ್ಯುತ್ ಉತ್ಪಾದನೆ ಇಳಿಮುಖವಾಗಿದ್ದು, ಬೇಡಿಕೆ ಹೆಚ್ಚುತ್ತಿದೆ. ಕಳೆದ ವರ್ಷ ರಾಜ್ಯವು 900 ಮೆಗಾವ್ಯಾಟ್ ಬಳಸಿದ್ದರೆ, ಈ ವರ್ಷ ಬೇಡಿಕೆ 1500-1600 ಮೆಗಾವ್ಯಾಟ್‌ಗೆ ಏರಿದೆ. ಹೀಗಾಗಿ ಬಾಹ್ಯ ಮೂಲಗಳಿಂದ ವಿದ್ಯುತ್ ಖರೀದಿಸುವ ಸಾಧ್ಯತೆಗಳ ಕುರಿತು ಚರ್ಚಿಸಲು ಸಭೆ ನಡೆಸಲಾಗುವುದು. ಇನ್ನೂ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ತ್ರಿಫೇಸ್ ವ್ಯವಸ್ಥೆಯಲ್ಲಿ ಏಳು ಗಂಟೆ ವಿದ್ಯುತ್ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Government of Karnataka thinking of buying power from external sources

ಲಭ್ಯವಿರುವ ವಿದ್ಯುತ್ತಿನ ದಕ್ಷ ಹಂಚಿಕೆಯೂ ಅತಿ ಮುಖ್ಯವಾಗಿದ್ದು, ಎಸ್ಕಾಂಗಳ ಎಂ.ಡಿ.ಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಎಲ್ಲ ಮುಖ್ಯ ಎಂಜಿನಿಯರುಗಳನ್ನು ಜಿಲ್ಲೆಗೊಬ್ಬರಂತೆ ನೋಡಲ್‌ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ಅವರು ನಿರಂತರ 5 ಗಂಟೆ ವಿದ್ಯುತ್‌ ಪೂರೈಕೆ ಯಾವುದೇ ಅಡಚಣೆಯಿಲ್ಲದೆ ಆಗುವಂತೆ ಖಾತರಿಪಡಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆಯಾಗುತ್ತಿರುವುದನ್ನು ಖಾತರಿಪಡಿಸಬೇಕು.

ದಕ್ಷಿಣದ ಎಲ್ಲ ರಾಜ್ಯಗಳಲ್ಲಿ ವಿದ್ಯುತ್‌ ಕೊರತೆ ತೀವ್ರವಾಗಿದೆ. ಪ್ರತಿ ವರ್ಷ ಬದಲಿ ಮಾರ್ಗೋಪಾಯ ಹೊಂದಿರಬೇಕು. ಯುದ್ಧ ಕಾಲೇ ಶಸ್ತ್ರಾಭ್ಯಾಸ ಎಂಬಂತೆ ಕಾರ್ಯಪ್ರವೃತ್ತರಾದರೆ ಸಮಸ್ಯೆ ಬಗೆಹರಿಯುವುದಿಲ್ಲ. ಶೇ.13 ರಷ್ಟು ವಿದ್ಯುತ್‌ ವಿತರಣೆ ನಷ್ಟವಾಗುತ್ತಿದೆ. ವಿದ್ಯುತ್‌ ಕಳವು ಗೃಹ ಜ್ಯೋತಿಯಿಂದ ಕಡಿಮೆಯಾಗಿದೆ. ಕೈಗಾರಿಕಾ ವಿದ್ಯುತ್‌ ಕಳವು ಅತಿ ಕಡಿಮೆ.

ಕಬ್ಬಿನ ಬೆಳೆಗೆ ನೀರು ಹಾಯಿಸಲು ಕೆಲವು ಜಿಲ್ಲೆಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಬ್ಬಿನ ಕಟಾವು, ಅರೆಯುವಿಕೆ ಪ್ರಾರಂಭವಾದ ಕೂಡಲೇ ಬೇಡಿಕೆ ಇಳಿಕೆಯಾಗಲಿದ್ದು, ಕಬ್ಬು ಅರೆಯುವಿಕೆಯೊಂದಿಗೆ ಕೊ-ಜೆನರೇಶನ್‌ ನಿಂದ ವಿದ್ಯುತ್‌ ಲಭ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಕಷ್ಟು ಮಳೆಯಾಗದೆ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಸವಾಲಿನ ಸಂಗತಿ ಎಂದು ಸರ್ಕಾರದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು. 2023 ರ ನೈಋತ್ಯ ಮಾನ್ಸೂನ್ ಅವಧಿಯು ಸೆಪ್ಟೆಂಬರ್ 30 ರಂದು "ಅಧಿಕೃತವಾಗಿ" ಕೊನೆಗೊಂಡಾಗ, ಜೂನ್ 1 ರಿಂದ ಸೆಪ್ಟೆಂಬರ್ 30 ರವರೆಗೆ ರಾಜ್ಯದಲ್ಲಿ ಸಂಚಿತ ಮಳೆಯು 642 ಮಿಮೀ ಆಗಿದ್ದು, ಸಾಮಾನ್ಯ 852 ಮಿಮೀ 25% ನಷ್ಟು ಕೊರತೆಯಿದೆ.

ಐಎಂಡಿ ಪ್ರಕಾರ, ಎಲ್ಲಾ 31 ಜಿಲ್ಲೆಗಳು ದೀರ್ಘಾವಧಿಯ ಸರಾಸರಿಗಿಂತ ಕಡಿಮೆ ಮಳೆಯನ್ನು ಪಡೆದಿದ್ದು, ರಾಜ್ಯವು ಬರಗಾಲಕ್ಕೆ ಸಲುಕಿದೆ. ವಿವಿಧ ಪ್ರದೇಶಗಳಲ್ಲಿ, ಮಲೆನಾಡು ಜಿಲ್ಲೆಗಳು 39% ಕೊರತೆಯನ್ನು ಅನುಭವಿಸಿದರೆ ದಕ್ಷಿಣ ಒಳನಾಡಿನ ಕರ್ನಾಟಕ ಪ್ರದೇಶಗಳಲ್ಲಿ 27% ಕೊರತೆಯಿದೆ. ಕರಾವಳಿ ಬೆಲ್ಟ್ ಮತ್ತು ಉತ್ತರ ಆಂತರಿಕ ಕರ್ನಾಟಕವು ಇತ್ತೀಚಿನ ವರ್ಷಗಳಲ್ಲಿ ದುರ್ಬಲ ಮಾನ್ಸೂನ್ ಎಂದು ಪರಿಗಣಿಸಲ್ಪಟ್ಟಿರುವ 19% ನಷ್ಟು ಸಂಚಿತ ಕೊರತೆಯನ್ನು ಹೊಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+