ಮಲ್ಲೇಶ್ವರ ಸ್ಫೋಟ ಪ್ರಕರಣ ː ಸಂತ್ರಸ್ತೆ ಲಿಷಾಗೆ ಸರ್ಕಾರಿ ಉದ್ಯೋಗ
ಬೆಂಗಳೂರು, ಜುಲೈ 30: ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ 2013 ಏಪ್ರಿಲ್ 17ರಂದು ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಷಾಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಕೊನೆಗೂ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಗ್ರೂಪ್ ಸಿ(ಎಫ್ ಡಿಐ) ಶ್ರೇಣಿ ಹುದ್ದೆ ನೀಡಲಾಗಿದೆ.
ಹೈಕೋರ್ಟ್ ಆದೇಶಕ್ಕೆ ಮಣಿದ ಕರ್ನಾಟಕ ಸರ್ಕಾರ, ಲಿಷಾಗೆ ಅಗ್ನಿಶಾಮಕ ಮತ್ತು ಗೃಹ ರಕ್ಷಕ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿ(ಎಫ್ಡಿಐ) ಹುದ್ದೆ ನೀಡಿದೆ.
2013 ರ ಏಪ್ರಿಲ್ 17 ರಂದು ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ ನಡೆದಿತ್ತು. ಈ ವೇಳೆ ಕಾಲೇಜಿನಿಂದ ಹಿಂತಿರುಗುತ್ತಿದ್ದ ಲೀಷಾ ಗಂಭೀರವಾಗಿ ಗಾಯಗೊಂಡಿದ್ದರು. 2016ರ ಅಕ್ಟೋಬರ್ ನಲ್ಲಿ ಸರ್ಕಾರಿ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಜೊತೆಗೆ ಪರಿಹಾರ ನೀಡುವ ಕುರಿತು ಕೇಂದ್ರ ಸರ್ಕಾರಕ್ಕೂ ಸೂಚಿಸಿತ್ತು.

'ಅಂಗವಿಕಲ ಕೋಟಾದಡಿಯಲ್ಲಿ ಉದ್ಯೋಗ ನೀಡಬೇಕು, 1 ಕೋಟಿ ಪರಿಹಾರ ನೀಡಬೇಕು' ಎಂದು ಹೈಕೋರ್ಟಿಗೆ 2015ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ರಾಜ್ಯ ಸರ್ಕಾರವು ಪರಿಹಾರ ರೂಪದಲ್ಲಿ 8.24 ಲಕ್ಷ ರು ಮಾತ್ರ ನೀಡಿದೆ.
ದಾಳಿಗೆ ತುತ್ತಾದವರಿಗೆ ನೀಡುವ ಪರಿಹಾರ ಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ತನ್ನ ರಾಷ್ಟ್ರೀಯ ನೀತಿಯಲ್ಲಿ ಬದಲಾವಣೆ ತರಬೇಕಾದ ಅನಿವಾರ್ಯತೆ ಇದೆ. ಇದರ ಸಲುವಾಗಿ ವಿಶೇಷ ಸಮಿತಿ ನೇಮಿಸುವ ಅಗತ್ಯವಿದೆ ಎಂದು ಲಿಷಾ ಕೋರಿದ್ದರು. ಕಬ್ಬಿಣದ ಚೂರುಗಳು ಅವರ ಎಡಗಾಲಿಗೆ ಹೊಕ್ಕಿತ್ತು. ಲಿಷಾ ಅವರ ಕಾಲಿಗೆ ಚಿಕಿತ್ಸೆಗೆ ಸುಮಾರು 10 ಲಕ್ಷ ರು ಖರ್ಚಾಗಿದೆ. ಮಹಾರಾಣೀಸ್ ಅಮ್ಮಣಿ ಕಾಲೇಜಿನಲ್ಲಿ ಬಿಸಿಎ ಓದುತ್ತಿರುವ ಲಿಷಾ ಅವರು ಆಸ್ಪತ್ರೆಯಲ್ಲೇ ಇದ್ದಾಗಲೇ ಸಿಇಟಿ ಬರೆದಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications