ಸರ್ಕಾರಿ ಕಚೇರಿಗಳಲ್ಲಿ 'ಸಾಹೇಬ್ರು ಇಲ್ಲ ನಾಳೆ ಬನ್ನಿ' ಎಂದು ಹೇಳುವಂತಿಲ್ಲ
ಬೆಂಗಳೂರು, ಡಿ. 13: "ಸರ್ಕಾರದ ಕೆಲಸ ದೇವರ ಕೆಲಸ" ಎಂದು ವಿಧಾನಸೌಧ ಸೇರಿದಂತೆ ಸರ್ಕಾರದ ಎಲ್ಲ ಕಚೇರಿಗಳ ಮೇಲೆ ಬರೆದಿರುತ್ತದೆ. ಆದರೆ ಕೆಲಸಕ್ಕಾಗಿ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಹತ್ತಾರು ಬಾರಿ ಅಲೆದರೂ ಸಕಾಲದಲ್ಲಿ ಸರ್ಕಾರಿ ಕಚೇರಿಗಳಿಗೆ ಪ್ರವೇಶ ಸಿಗುವುದೇ ಇಲ್ಲ, ಪ್ರವೇಶ ಸಿಕ್ಕರೂ 'ಸಾಹೇಬರು ಇಲ್ಲ ನಾಳೆ ಬನ್ನಿ' ಎಂಬ ರೆಡಿಮೇಡ್ ಉತ್ತರವನ್ನ ಅಲ್ಲಿನ ಸಿಬ್ಬಂದಿ ಕೊಡುತ್ತಾರೆ.
ಇದಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಖಡಕ್ ಆದೇಶ ಹೊರಸಿಡಿದ್ದಾರೆ. ಪ್ರತಿ ಮಧ್ಯಾಹ್ನ 3.30 ರಿಂದ ಸಂಜೆ 5.30 ಗಂಟೆವೆರೆಗೆ ಅಧಿಕಾರಿಗಳು ಖಡ್ಡಾಯವಾಗಿ ತಮ್ಮ ಕಚೇರಿಯಲ್ಲಿ ಹಾಜರಿದ್ದು ಸಮಸ್ಯೆ ಹೇಳಿಕೊಂಡು ಬರುವವರನ್ನು ಭೇಟಿ ಮಾಡಬೇಕು ಎಂದು ಕರ್ನಾಟಕ ಸಚಿವಾಲಯ ಕೈಪಿಡಿಯ ಪ್ಯಾರಾ 272 (3)ರನ್ವಯ ಸುತ್ತೋಲೆ ಹೊರಡಿಸಲಾಗಿದೆ. ಅಧಿಕಾರಿಗಳು ಜನಸಮಾನ್ಯರ ಭೇಟಿಗೆ ಸಮಯಾವಕಾಶ ಕೊಡುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ 'ಒನ್ ಇಂಡಿಯಾ'ಕ್ಕೆ ಮಾಹಿತಿ ಕೊಟ್ಟಿದೆ.
ಮಧ್ಯಾಹ್ನ 3.30 ನಂತರ ವಿಧಾನಸೌಧಕ್ಕೆ ಮುಕ್ತ ಪ್ರವೇಶ

ಮಧ್ಯಾಹ್ನ 3,30 ರಿಂದ ಸಂಜೆ 5.30ರವೆರೆಗ ಪಾಸ್ ಇಲ್ಲದೆಯೆ ವಿಧಾನಸೌಧಕ್ಕೂ ಸಮಾನ್ಯರಿಗೆ ಪ್ರವೇಶ ಕಲ್ಪಿಸಲಾಗಿದ್ದು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಇತರ ಅಧಿಕಾರಿಗಳನ್ನ ಭೇಟಿ ಮಾಡಿ ಸಮಸ್ಯೆ ಹೇಳಿಕೊಳ್ಳಲು ಅವಕಾಶವಿದೆ. ಇದಲ್ಲದೆ ಅಧಿಕಾರಿಗಳು ಮಧ್ಯಾಹ್ನ ಖಡ್ಡಾಯವಾಗಿ ಯಾವುದೇ ಸಭೆಗಳನ್ನು ನಡೆಸಬಾರದು.
ಸಭೆಗಳನ್ನು ನೆಪ ಹೇಳದೆ ಖಡ್ಡಾಯವಾಗಿ ಜನರನ್ನ ಭೇಟಿ ಮಾಡಲೇ ಬೇಕೆಂದು ಆದೇಶದಲ್ಲಿ ಸೂಚಿಸಲಾಗಿದೆ. ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ ಸೇರಿದಂತೆ ಎಲ್ಲ ನಿಗಮ ಮಂಡಳಿಗಳು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳು, ಜಿಲ್ಲಾ ಪಂಚಾಯ್ತಿ ಸಿಇಓಗಳು ಸಾರ್ವಜನಿಕ ರಜಾ ದಿನ ಹೊರತು ಪಡಿಸಿ ಜನರ ಭೇಟಿಗೆ ಅವಕಾಶ ಕೊಡಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications