Government Employees: ಸರ್ಕಾರಿ ನೌಕರರ ವೇತನದಿಂದ ಜೀವ ವಿಮಾ ಪಾಲಿಸಿಗಳ ಕಂತು ಕಡಿತ : ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನದಿಂದ, ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತು, ಸಾಲದ ಕಂತು ಮತ್ತು ಸಾಲದ ಬಡ್ಡಿಯ ಕಂತುಗಳ ನಿಖರ ಮೊಬಲಗಿನ ಕಟಾವಣೆ ಹಾಗೂ ಕಟಾವಣೆ ಮೊಬಲಗಿನ ತಿದ್ದುಪಡಿ ಮಾಡುವ ಬಗ್ಗೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್.ಆರ್.ಎಂ.ಎಸ್. ತಂತ್ರಾಂಶಗಳ ಅನುಕಲನ ವೇದಿಕೆಯ ಮೂಲಕ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಕಟಾವಣೆಯಾಗುತ್ತಿರುವ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತು, ಸಾಲದ ಕಂತು ಮತ್ತು ಸಾಲದ ಬಡ್ಡಿಯ ಕಂತಿನ ಮೊಬಲಗುಗಳು, ವಿಮಾ ಇಲಾಖೆಯ ದತ್ತಾಂಶದಂತೆ ಕಟಾವಣೆಯಾಗಬೇಕಿರುವ ಮೊಬಲಗುಗಳಿಗಿಂತ ವ್ಯತ್ಯಾಸವಿರುವುದು ಕಂಡುಬಂದಿರುತ್ತದೆ.

ಉಲ್ಲೇಖಿತ ಸುತ್ತೋಲೆಯಲ್ಲಿ, ಈ ಮೇಲೆ ವಿವರಿಸಿರುವಂತೆ ವ್ಯತ್ಯಾಸವಿರುವ 15,287 ಪ್ರಕರಣಗಳನ್ನು ಗುರುತಿಸಿ, ದತ್ತಾಂಶವನ್ನು ಜಿಲ್ಲಾವಾರು ಪ್ರತ್ಯೇಕಿಸಿ, Excel Sheet ನಲ್ಲಿ ನಮೂದಿಸಿ, ಜಿಲ್ಲಾ ವಿಮಾಧಿಕಾರಿಗಳಿಗೆ ಕಳುಹಿಸಲಾಗಿದೆ. ಸದರಿ ಪ್ರಕರಣಗಳನ್ನು ಭೌತಿಕ ಕಡತಗಳೊಂದಿಗೆ ಪರಿಶೀಲಿಸಿ, ನ್ಯೂನತೆಯಿರುವ ಪ್ರಕರಣಗಳನ್ನು ಪ್ರತ್ಯೇಕಿಸಿ, ವಿಮಾದಾರರ ವೇತನ ಬಟವಾಡೆ ಅಧಿಕಾರಿಗಳಿಗೆ ಪತ್ರ ಬರೆದು, ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ಕಟಾವಣೆ ಮಾಡುತ್ತಿರುವ ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತು, ಸಾಲದ ಕಂತು ಮತ್ತು ಸಾಲದ ಬಡ್ಡಿಯ ಕಂತುಗಳ ಮೊಬಲಗುಗಳಲ್ಲಿ ವ್ಯತ್ಯಾಸವನ್ನು ಸರಿಪಡಿಸುವಂತೆ, ಹಾಗೂ ರದ್ದು ಪಡಿಸಬೇಕಿರುವ ಜೀವ ವಿಮಾ ಪಾಲಿಸಿಗಳನ್ನು ಪಟ್ಟಿಮಾಡಿ ನಿಯಮಾನುಸಾರ ಶಿಫಾರಸ್ಸಿನೊಂದಿಗೆ ಎ.ವಿ.ಜಿ., ಶಾಖೆಗೆ ಕಳುಹಿಸುವಂತೆ ಸೂಚಿಸಲಾಗಿತ್ತು.
ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತು, ಸಾಲದ ಕಂತು ಮತ್ತು ಸಾಲದ ಬಡ್ಡಿಯ ಕಂತುಗಳ ಮೊಬಲಗುಗಳನ್ನು ನಿಯಮಾನುಸಾರ ಹೆಚ್.ಆರ್.ಎಂ.ಎಸ್., ನಲ್ಲಿ ತಿದ್ದುಪಡಿ ಮಾಡುವ ಅವಕಾಶವನ್ನು ವಿಮಾ ಇಲಾಖೆಗೆ ನೀಡಲಾಗಿರುತ್ತದೆ. ಈ ಕೆಲಸವನ್ನು ಪ್ರಸ್ತುತ ವಿಮಾ ಇಲಾಖೆಯ ಗಣಕ ವಿಭಾಗದಲ್ಲಿ ನಿರ್ವಹಿಸಲಾಗುತ್ತಿದೆ. ಆದುದರಿಂದ, ಮೇಲ್ಕಂಡ ವಿಷಯದ ಸಂಬಂಧ ವಿಮಾ ಇಲಾಖೆಯ ಜಿಲ್ಲಾ ವಿಮಾಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯವಿಧಾನಗಳು ಈ ಕೆಳಕಂಡಂತ್ತಿರುತ್ತವೆ.
* ಹೆಚ್.ಆರ್.ಎಂ.ಎಸ್., ನಲ್ಲಿ ವಿಮಾ ಕಂತು, ಸಾಲದ ಕಂತು ಮತ್ತು ಸಾಲದ ಬಡ್ಡಿಯ ಕಂತುಗಳ ಮೊಬಲಗು (Insurance Details / Loan and Recoveries) ಗಳನ್ನು ತಿದ್ದುಪಡಿ ಮಾಡುವ ಸಂಬಂಧ ಕೋರಿಕೆಗಳನ್ನು ವಿಮಾದಾರರಿಂದ ನೇರವಾಗಿ ವಿಮಾ ಇಲಾಖೆಯ ಗಣಕ ವಿಭಾಗದಲ್ಲಿ ಸ್ವೀಕರಿಸುವುದಿಲ್ಲ.
* ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತು, ಸಾಲದ ಕಂತು ಮತ್ತು ಸಾಲದ ಬಡ್ಡಿಯ ಕಂತುಗಳ ಮೊಬಲಗುಗಳನ್ನು (Insurance Details / Loan and Recoveries) ಹೆಚ್.ಆರ್.ಎಂ.ಎಸ್., ನಲ್ಲಿ ತಿದ್ದುಪಡಿ ಮಾಡುವ ಬಗ್ಗೆ ವಿಮಾದಾರರಿಂದ ಜಿಲ್ಲಾ ವಿಮಾ ಕಛೇರಿಗಳಿಗೆ ಸಲ್ಲಿಕೆಯಾಗುವ ಕೋರಿಕೆಗಳನ್ನು ವಿಷಯವಾರು KGIDMIS Portal ತಂತ್ರಾಂಶದಲ್ಲಿ Ticket Rise ಮಾಡುವ ಮೂಲಕ ಕೋರಿಕೆಗಳನ್ನು ವಿಮಾ ಇಲಾಖೆಯ ಗಣಕ ವಿಭಾಗಕ್ಕೆ ಸಲ್ಲಿಸಬೇಕು.
* ವಿಮಾ ನಿರ್ದೇಶನಾಲಯದ ಸುತ್ತೋಲೆ ಸಂಖ್ಯೆ 17/2025-26, ದಿನಾಂಕ 24-07-2025 ರಲ್ಲಿ ತಿಳಿಸಿರುವಂತೆ ವಿಮಾ ಇಲಾಖೆಯ ದತ್ತಾಂಶದಲ್ಲಿ ನಿಯಮಾನುಸಾರ ತಿದ್ದುಪಡಿಗಳನ್ನು ಜಿಲ್ಲಾ ವಿಮಾ ಕಛೇರಿಗಳ ಮಟ್ಟದಲ್ಲೇ ಜರೂರಾಗಿ ಪೂರ್ಣಗೊಳಿಸಬೇಕು. (ಹೆಚ್.ಆರ್.ಎಂ.ಎಸ್., ದತ್ತಾಂಶ ಸರಿ ಇದ್ದು, ವಿಮಾ ಇಲಾಖೆಯ ದತ್ತಾಂಶ ತಿದ್ದುಪಡಿಯಾಗಬೇಕಿರುವ ಪ್ರಕರಣಗಳು.)
* ಸಾಲದ ಬಾಕಿ ಮೊತ್ತವನ್ನು ಪೂರ್ಣವಾಗಿ ಪಾವತಿಸಿ, ಸಾಲದ ಕಂತುಗಳ ಕಟಾವಣೆಯನ್ನು ನಿಲ್ಲಿಸುವಂತೆ ವಿಮಾದಾರರಿಂದ ಜಿಲ್ಲಾ ವಿಮಾ ಕಛೇರಿಗಳಿಗೆ ಸಲ್ಲಿಕೆಯಾಗಿರುವ ಕೋರಿಕೆಗಳನ್ನು, ಜಿಲ್ಲಾ ವಿಮಾ ಕಛೇರಿಗಳಲ್ಲಿ ಪರಿಶೀಲಿಸಿ, ಕೋರಿಕೆ ಪ್ರಕರಣದ ಸಾಲ ಮತ್ತು ಬಡ್ಡಿ ಪೂರ್ಣಪ್ರಮಾಣದಲ್ಲಿ ವಿಮಾ ಇಲಾಖೆಗೆ ಸ್ವೀಕೃತಿಯಾಗಿರುವುದನ್ನು ದೃಢಪಡಿಸಿಕೊಂಡು, ಸಾಲದ ಕಂತು ಮತ್ತು ಬಡ್ಡಿ ಕಂತುಗಳ ಕಟಾವಣೆಯನ್ನು ನಿಲ್ಲಿಸಲು KGID MIS Portal (ವಿಮಾ ಇಲಾಖೆಯ ಸಹಾಯವಾಣಿ) ನಲ್ಲಿ Ticket Rise ಮಾಡುವ ಮೂಲಕ ಗಣಕ ವಿಭಾಗಕ್ಕೆ ಕೋರಿಕೆ ಸಲ್ಲಿಸಬೇಕು.
* ವಿಮಾ ನಿರ್ದೇಶನಾಲಯದ ಸುತ್ತೋಲೆ ಸಂಖ್ಯೆ 17/2025-26, ದಿನಾಂಕ 24-07-2025 ರಲ್ಲಿ ತಿಳಿಸಿರುವಂತೆ ಪರಿಶೀಲಿಸಿ, ವಿಮಾ ಇಲಾಖೆಯ ದತ್ತಾಂಶ ಸರಿಯಿದ್ದು, ಹೆಚ್.ಆರ್.ಎಂ.ಎಸ್. ನಲ್ಲಿ ತಿದ್ದುಪಡಿಯಾಗಬೇಕಿರುವ ಪ್ರಕರಣಗಳನ್ನು ಜಿಲ್ಲಾ ವಿಮಾ ಕಛೇರಿಗಳಿಂದ ವಿಮಾ ಇಲಾಖೆಯ KGID MIS Portal (ವಿಮಾ ಇಲಾಖೆಯ ಸಹಾಯವಾಣಿ) ನಲ್ಲಿ ಯಾವುದೇ ದಾಖಲೆಗಳನ್ನು Upload ಮಾಡದೇ, Ticket Rise ಮಾಡುವ ಮೂಲಕ ವಿಮಾ ಇಲಾಖೆಯ ಗಣಕ ವಿಭಾಗಕ್ಕೆ ಕೋರಿಕೆ ಸಲ್ಲಿಸಬೇಕು.
* ರದ್ದುಪಡಿಸಿರುವ, ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ವಿವರವನ್ನು ಪಟ್ಟಿಮಾಡಿ, ವಿಮಾ ಇಲಾಖೆಯ ಗಣಕ ವಿಭಾಗಕ್ಕೆ ಸಲ್ಲಿಸಬೇಕು. ಸದರಿ ವಿವರವನ್ನು ಗಣಕ ವಿಭಾಗದಲ್ಲಿ ಕ್ರೋಢೀಕರಿಸಿ, DataVerification Portal ನಲ್ಲಿ ರದ್ದಾದ ಪಾಲಿಸಿಗಳ ವಿಮಾ ಮೊತ್ತ ಮತ್ತು ವಿಮಾ ಕಂತನ್ನು ಶೂನ್ಯ (Zero) ಮಾಡಲಾಗುವುದು. Kgidverificationportal ನಲ್ಲಿ ಇ-ಸಹಿ ಮಾಡುವ ಮೂಲಕ ದತ್ತಾಂಶವನ್ನು kgidonline ತಂತ್ರಾಂಶಕ್ಕೆ ಕಳುಹಿಸಬೇಕು.
*. ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತುಗಳ ಕಟಾವಣೆಯನ್ನು ಪಾಲಿಸಿಯ ಹೊಣೆ ದಿನಾಂಕದಿಂದ ಆರಂಭಿಸದೇ, ವಿಮಾ ಕಂತು ಕಟಾವಣೆಯನ್ನು ಇತ್ತೀಚೆಗೆ ಆರಂಭಿಸಿರುವ ಪಾಲಿಸಿಗಳನ್ನು ಮುಂದುವರೆಸುವ / ರದ್ದುಪಡಿಸುವ ಬಗ್ಗೆ ಆದೇಶ ಕೋರಿ ಎ.ವಿ.ಜಿ. ಶಾಖೆಗೆ KGID MIS Portal (ವಿಮಾ ಇಲಾಖೆಯ ಸಹಾಯವಾಣಿ) ನಲ್ಲಿ Ticket Rise ಮಾಡುವ ಮೂಲಕ ಕೋರಿಕೆ ಸಲ್ಲಿಸಬೇಕು. ಎ.ವಿ.ಜಿ. ಶಾಖೆಯಿಂದ ಪಾಲಿಸಿ ರದ್ದತಿ ಬಗ್ಗೆ ಆದೇಶ ಬಂದಲ್ಲಿ ಅಂತಹ ಪಾಲಿಸಿಗಳ ವಿವರವನ್ನು KGID MIS Portal (ವಿಮಾ ಇಲಾಖೆಯ ಸಹಾಯವಾಣಿ) ನಲ್ಲಿ Ticket Rise ಮಾಡುವ ಮೂಲಕ ರದ್ದಾದ ಪಾಲಿಸಿಗಳ ವಿಮಾ ಮೊತ್ತ ಮತ್ತು ವಿಮಾ ಕಂತನ್ನು ಶೂನ್ಯಗೊಳಿಸಲು ಗಣಕ ವಿಭಾಗಕ್ಕೆ ಕೋರಿಕೆ ಸಲ್ಲಿಸಬೇಕು. ನಂತರ ಕ್ರಮ ಸಂಖ್ಯೆ 5 ರಲ್ಲಿ ತಿಳಿಸಿರುವಂತೆ ಕ್ರಮವಹಿಸಬೇಕು. ಪಾಲಿಸಿ ಮುಂದುವರೆಸುವಂತೆ ಆದೇಶ ಬಂದಲ್ಲಿ, ಕ್ರಮ ಸಂಖ್ಯೆ 4 ರಲ್ಲಿ ತಿಳಿಸಿರುವಂತೆ ಕ್ರಮವಹಿಸಬೇಕು.
* ವೇತನ ಬಟವಾಡೆ ಕಛೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನದಿಂದ ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತು ಮತ್ತು ಸಾಲದ ಕಂತುಗಳನ್ನು ಕಟಾವಣೆ ಮಾಡುವಾಗ ತಪ್ಪಾಗಿ ಬದಲಿ ನೌಕರರ ವೇತನದಿಂದ ಕಟಾವಣೆ ಆರಂಭಿಸಿದ್ದು, ಪ್ರಸ್ತುತ ತಿದ್ದುಪಡಿಗಾಗಿ ಕೋರಿಕೆ ಸಲ್ಲಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆಯೂ ಸಹ ತಿದ್ದುಪಡಿಗಾಗಿ KGID MIS Portal (ವಿಮಾ ಇಲಾಖೆಯ ಸಹಾಯವಾಣಿ) ನಲ್ಲಿ Ticket Rise ಮಾಡುವ ಮೂಲಕ ಗಣಕ ವಿಭಾಗಕ್ಕೆ ಕೋರಿಕೆ ಸಲ್ಲಿಸಬೇಕು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications