Government Employees: ಸರ್ಕಾರಿ ನೌಕರರು ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ: ಕರ್ನಾಟಕ ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರಿ ನೌಕರರು ಕರ್ತವ್ಯದ ವೇಳೆ ಸಮಯಪಾಲನೆ, ಐಡಿ ಕಾರ್ಡ್ ಧರಿಸುವುದು, ಪ್ರಾಮಾಣಿಕತೆ ಮತ್ತು ನಿಗದಿತ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಮುಖ್ಯವಾಗಿ ನಿಗದಿತ ಸಮಯಕ್ಕೆ ಹಾಜರಾಗುವುದು, ವಿಳಂಬಕ್ಕೆ ಕಾರಣ ನೀಡುವುದು, ಮತ್ತು ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿ ಧರಿಸುವುದು ಅತ್ಯಗತ್ಯ, ಇದೀಗ ಕರ್ನಾಟಕ ಸರ್ಕಾರವಿ ಸರ್ಕಾರಿ ನೌಕರರಿಗೆ ಕರ್ತವ್ಯದ ವೇಳೆ ಕಡ್ಡಾಯವಾಗಿ ಕೆಲ ನಿಯಮಗಳನ್ನೂ ಪಾಲಿಸಬೇಕು ಎಂದು ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಕಛೇರಿಗಳಲ್ಲಿ ಸರ್ಕಾರಿ ನೌಕರರು ಚಲನವಲನ ವಹಿ (Movement Register)ಮತ್ತು ನಗದು ಘೋಷಣೆ ವಹಿ (Cash Declaration Register) ಯನ್ನು ನಿರ್ವಹಣೆ ಮಾಡದಿರುವುದು, ಸಭ್ಯ ಉಡುಗೆ ತೊಡುಗೆಗಳನ್ನು ಧರಿಸದಿರುವ ಕುರಿತು ಸಾರ್ವಜನಿಕರಿಂದ/ಸಂಘ ಸಂಸ್ಥೆಗಳಿಂದ ಹಲವಾರು ದೂರುಗಳು ಸ್ವೀಕೃತವಾಗುತ್ತಿವೆ. ಈ ಕುರಿತು ಈ ಹಿಂದೆ ಹಲವು ಸುತ್ತೋಲೆಗಳನ್ನು ಹೊರಡಿಸಲಾಗಿರುತ್ತದೆ. ಆದಾಗ್ಯೂ ಸದರಿ ಸುತ್ತೋಲೆಗಳನ್ನು ಪಾಲನೆ ಮಾಡದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದೆ.

1.ಚಲನವಲನ ವಹಿ ನೋಂದಣಿ( Movement Register)
* ಕಚೇರಿ ವೇಳೆಯಲ್ಲಿ ಸರ್ಕಾರಿ ನೌಕರರ ಚಲನವಲನವನ್ನು ನಿಯಂತ್ರಿಸಲು ಚಲನವಲನ ವಹಿಯ ನಿರ್ವಹಣೆ ಬಗ್ಗೆ ಸುತ್ತೋಲೆ ಸಂಖ್ಯೆ: ಸಿಆಸುಇ 02 ತಎಇ 2016, ದಿನಾಂಕ: 12.04.2016, ಸಿಆಸುಇ 05 ಕತವ 2020, ໖:07.02.2020 ಹಾಗೂ /4464335/2025, ໖:25.07.2022 , 03, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಚಲನವಲನ ವಹಿ (Movement Register) ಯನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಸೂಚಿಸಿದೆ.
* ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸರ್ಕಾರಿ ಕಚೇರಿಗಳ ನಿಗದಿತ ಪ್ರಾರಂಭ ಸಮಯವಾದ ಬೆಳಿಗ್ಗೆ 10.10 ಗಂಟೆಗೆ ಕಾರ್ಯಾಲಯಕ್ಕೆ ಹಾಜರಾಗಬೇಕು ಹಾಗೂ ಕಛೇರಿ ಸಮಯ ಮುಗಿಯುವವರೆಗೂ ತಮ್ಮ ಕರ್ತವ್ಯದ ಸ್ಥಳದಲ್ಲಿಯೇ ಹಾಜರಿರಬೇಕು. ಕಚೇರಿ ಸಮಯದಲ್ಲಿ ಅಧಿಕೃತ ಕಾರ್ಯಕ್ಕಾಗಿ ಹೊರ ಹೋಗಬೇಕಾದ್ದಲ್ಲಿ:
* ಚಲನವಲನ ವಹಿಯಲ್ಲಿ ಹೊರ ಹೋಗುವ ಕಾರಣ/ಉದ್ದೇಶವನ್ನು ದಾಖಲಿಸಬೇಕು.
* ಮೇಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯಬೇಕು. ಹೊರ ಹೋಗುವ ಸಮಯ ಹಾಗೂ ಹಿಂದಿರುಗಿದ ಸಮಯವನ್ನು ಸಹಿ ಮತ್ತು ದಿನಾಂಕದೊಂದಿಗೆ ದಾಖಲಿಸಬೇಕು.
* ಚಲನವಲನ ವಹಿಯಲ್ಲಿ ದಾಖಲು ಮಾಡದೇ ಕರ್ತವ್ಯ ಸ್ಥಳದಲ್ಲಿ ಹಾಜರಿಲ್ಲದ ಅಧಿಕಾರಿ/ಸಿಬ್ಬಂದಿಗಳನ್ನು ಅನಧಿಕೃತವಾಗಿ ಗೈರು ಹಾಜರಿ ಎಂದು ಪರಿಗಣಿಸುವುದು ಮತ್ತು ಮೇಲಾಧಿಕಾರಿಗಳು ಈ ಕುರಿತು ಕ್ರಮಕೈಗೊಳ್ಳುವುದು.
* ಕಚೇರಿ ಸಮಯದಲ್ಲಿ ಅನಧಿಕೃತವಾಗಿ ಮೇಲಾಧಿಕಾರಿಗಳು ನಿಯಂತ್ರಿಸುವುದು. ಹೊರ ಹೋಗುವ ನೌಕರರನ್ನು ಮೇಲಾಧಿಕಾರಿಗಳು ನಿಯಂತ್ರಿಸುವುದು.
2. ನಗದು ಘೋಷಣೆ ವಹಿ (Cash Declaration Register)
* ನಗದು ಘೋಷಣೆ ವಹಿಯನ್ನು ನಿರ್ವಹಿಸುವ ಕುರಿತು ಸಿಆಸುಇ(ಆಸು) 21 ಕತವ 2022, ದಿನಾಂಕ: 04.02.2022 ಮತ್ತು 14.03.2022 ರಲ್ಲಿ ಸುತ್ತೋಲೆಗಳನ್ನು ಹೊರಡಿಸಲಾಗಿದೆ.
* ಸರ್ಕಾರಿ ನೌಕರರು ಅಧಿಕೃತ ಸಹಿ ಹಾಜರಾತಿ ವಹಿ/ಎಎಂಎಸ್ ನಲ್ಲಿ ಕರ್ತವ್ಯಕ್ಕೆ ವರದಿ ಮಾಡಿದ ತಕ್ಷಣ, ಕಛೇರಿಗೆ ತಂದ ನಗದು ಮೊತ್ತವನ್ನು ನಗದು ಘೋಷಣೆ ವಹಿಯ ನಿಗದಿತ ನಮೂನೆಯಲ್ಲಿ ಸಹಿಯೊಂದಿಗೆ ಘೋಷಿಸತಕ್ಕದ್ದು.
* ಮೇಲಾಧಿಕಾರಿಗಳು ತಮ್ಮ ಎಲ್ಲಾ ಸಿಬ್ಬಂದಿಗಳು ನಗದು ಘೋಷಣಾ ವಹಿಯಲ್ಲಿ ನಮೂದಿಸುತ್ತಿರುವ ಬಗ್ಗೆ ಆಗ್ಗಿಂದಾಗ್ಗೆ ಪರಿಶೀಲಿಸಲು ಸೂಚಿಸಿದೆ.
3. ಸಭ್ಯ ಉಡುಗೆ ತೊಡುಗೆಗಳನ್ನು ಧರಿಸುವುದು:
* ರಾಜ್ಯ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ/ನೌಕರರುಗಳು ಸರ್ಕಾರದ ಘನತೆಗೆ ಧಕ್ಕೆ ಬಾರದಂತೆ ಮತ್ತು ಶೋಭೆಯನ್ನು ತರುವಂತಹ ಸಭ್ಯ ಉಡುಗೆ ತೊಡುಗೆಗಳನ್ನು ಮಾತ್ರ ಧರಿಸಬೇಕೆಂದು ಸರ್ಕಾರವು ಪರಿಷ್ಕೃತ ಸುತ್ತೋಲೆ ಸಂಖ್ಯೆ: ಸಿಆಸುಇ 65 ಇಆಸು 2013, ದಿನಾಂಕ:16.09.2013 ರಂದು ಸುತ್ತೋಲೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications