ಪರಿಣಿತ ಎಂಜಿನಿಯರ್ಗಳ ಒದಗಿಸುವ ಕಂಪನಿ ಜತೆ ಸರ್ಕಾರದ ಸಹಭಾಗಿತ್ವ: ಎಂಬಿ ಪಾಟೀಲ್
ಸ್ಯಾನ್ ಫ್ರಾನ್ಸಿಸ್ಕೊ, ಅಕ್ಟೋಬರ್ 06: ಸೆಮಿಕಂಡಕ್ಟರ್ ಉತ್ಪನ್ನಗಳು ಮತ್ತು ಸೇವೆಗಳಿಗೆ ಹೆಸರಾಗಿರುವ ಎಲ್ಎಎಂ ರೀಸರ್ಚ್ (LAM Research) ಕಂಪನಿ ಕ್ಷೇತ್ರದಲ್ಲಿ 23 ವರ್ಷಗಳ ಅನುಭವ ಹೊಂದಿದೆ. ಬೆಂಗಳೂರಿನಲ್ಲೇ ನೆಲೆ ಹೊಂದಿದೆ. ಮುಂದಿನ ತಲೆಮಾರುಗಳಿಗೆ ಅಗತ್ಯವಾದ ಪರಿಣತ ಎಂಜಿನಿಯರುಗಳನ್ನು ಸಜ್ಜುಗೊಳಿಸಲು ಉತ್ಸುಕವಾಗಿರುವ ಕಂಪನಿಯು ಕರ್ನಾಟಕ ಸರ್ಕಾರದೊಂದಿಗೆ ಸಹಭಾಗಿತ್ವವನ್ನು ಬಯಸಿದೆ ಎಂದು ಪಾಟೀಲ್ ಹೇಳಿದರು.
ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಸೆಳೆಯಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಅವರು ಗುರುವಾರದಂದು ಸಭೆ ನಡೆಸಿದರು. ಈ ವೇಳೆ ಎಲ್ಎಎಂ ರೀಸರ್ಚ್, ಲಿಯೋ ಲ್ಯಾಬ್ಸ್ ಮತ್ತು ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ವಿಸ್ತೃತ ಮಾತುಕತೆ ನಡೆಸಿದರು.

ಈ ಸಭೆಯಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಸಾಥ್ ನೀಡಿದರು. ಈ ಮೂರೂ ಸಂಸ್ಥೆಗಳ ಉನ್ನತಾಧಿಕಾರಿಗಳ ಜತೆ ವಿಸ್ತೃತ ಚರ್ಚೆ ನಡೆಸಿದ್ದಲ್ಲದೆ ರಾಜ್ಯದಲ್ಲಿ ಬಂಡವಾಳ ಹೂಡಲು ಇರುವ ಪೂರಕ ವಾತಾವರಣದ ಬಗ್ಗೆ ವಿವರಿಸಿದರು.
ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಸೆಮಿಕಂಡಕ್ಟರ್ ಆರ್ & ಡಿ ಪಾರ್ಕ್ ನಲ್ಲಿ ನೂತನ ಪ್ರಯೋಗಾಲಯಗಳಲ್ಲಿ ರಚನಾತ್ಮಕ ಹೂಡಿಕೆ ಮಾಡುವ ಸಾಧ್ಯತೆಗಳನ್ನು ಪರಿಶೀಲಿಸಲು ಎಲ್ಎಎಂ ರೀಸರ್ಚ್ ಕಂಪನಿಯು ಮುಕ್ತವಾಗಿದೆ. ಇದನ್ನು ಸರ್ಕಾರದ ಪರವಾಗಿ ಸ್ವಾಗತಿಸಲಾಗಿದೆ ಎಂದರು.
ವಿವಿಧ ಕ್ಷೇತ್ರಗಳ ಅಭಿವೃದ್ಧಿಗಾಗಿ ಸಮಾಲೋಚನೆ
ಬಾಹ್ಯಾಕಾಶ ಸಂಶೋಧನೆ ಕ್ಷೇತ್ರದಲ್ಲಿ ಹೆಸರಾಗಿರುವ ಲಿಯೋ (ಲೋ ಅರ್ತ್ ಆರ್ಬಿಟ್) ಲ್ಯಾಬ್, ಭಾರತದಲ್ಲಿ ರೆಡಾರುಗಳನ್ನು ಸ್ಥಾಪಿಸಲು ಮುಂದಾಗುವ ಖಾಸಗಿ ಕ್ಷೇತ್ರದವರಿಗೆ ಸರ್ಕಾರ ನೀಡುವ ಅನುಮೋದನೆಗಳನ್ನು ಕುರಿತು ಅಧ್ಯಯನ ನಡೆಸುವ ಬಗ್ಗೆ ಚರ್ಚಿಸಿದೆ. ಜತೆಗೆ ರಾಜ್ಯದ ಬಾಹ್ಯಾಕಾಶ ಕಾರ್ಯಪರಿಸರದಲ್ಲಿ ಅದು ನೆಲೆಯೂರಲು ಆಸಕ್ತಿ ತಾಳಿದೆ. ಇದಕ್ಕಾಗಿ ನಮ್ಮಲ್ಲಿ ಸ್ಪೇಸ್ ಟೆಕ್ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆಗೆ ಕೈ ಜೋಡಿಸಲು ಅದು ಒಲವು ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಗ್ ಡೇಟಾ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಟೆಕಾಂಡ್ ಕಂಪನಿಯ ಪ್ರತಿನಿಧಿಗಳು, ಬೆಂಗಳೂರಿನಲ್ಲಿ ತಮ್ಮ ಆರ್ & ಡಿ ಕೇಂದ್ರ ತೆರೆಯುವ ಬಗ್ಗೆ ಚರ್ಚಿಸಿದ್ದಾರೆ. ಇದು ಸಾಧ್ಯವಾದರೆ ರಾಜ್ಯದಲ್ಲಿ ಅಸೆಂಬ್ಲಿಂಗ್ ಮತ್ತು ಹಾರ್ಡ್ ವೇರ್ ಉತ್ಪಾದನೆಯನ್ನು ಆರಂಭಿಸಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಬಿಗ್ ಡೇಟಾದಿಂದ ನಮ್ಮ 2 ಮತ್ತು 3ನೇ ಹಂತದ ನಗರಗಳಿಗೆ ಕೂಡ ಪ್ರಯೋಜನ ಸಿಗಲಿದೆ. ಇ-ಆಡಳಿತದಲ್ಲಿ ಕೂಡ ಅದು ಸರಕಾರದೊಂದಿಗೆ ಸಹಭಾಗಿತ್ವ ಹೊಂದಲು ಬಯಸಿದೆ ಎಂದು ಸಚಿವರು ಮಾಹಿತಿ ನೀಡಿದು.
ಸಭೆಯಲ್ಲಿ ಎಲ್ಎಎಂ ರೀಸರ್ಚ್ ಕಂಪನಿಯ ಉಪಾಧ್ಯಕ್ಷರುಗಳಾದ ರಂಗೇಶ್ ರಾಘವನ್, ಕಾರ್ತಿಕ್ ರಾಮಮೋಹನ್, ಪ್ಯಾಟ್ ಲಾರ್ಡ್, ಲಿಯೋ ಲ್ಯಾಬ್ಸ್ ಕಂಪನಿಯ ಸಂಸ್ಥಾಪಕ ಡ್ಯಾನ್ ಸೀಪರ್ಲಿ, ರಚಿತ್ ಭಾಟಿಯಾ ಮತ್ತು ಟೇಕಾಂಡ್ ಕಂಪನಿಯ ಸಿಇಒ ಸಾಹಿಲ್ ಚಾವ್ಲಾ ಮತ್ತು ಸಹ ಸಂಸ್ಥಾಪಕ ರಮೇಶ್ ಸಿಂಗ್ ಭಾಗವಹಿಸಿದ್ದರು. ಸರ್ಕಾರದ ನಿಯೋಗದಲ್ಲಿ ಕೈಗಾರಿ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications