ಕರ್ನಾಟಕದಲ್ಲಿ ಇಂಧನ ಸೆಸ್ ವಿಧಿಸಲು ಸರ್ಕಾರದ ಚಿಂತನೆ
ಬೆಳಗಾವಿ, ಡಿಸೆಂಬರ್ 13: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಇಂಧನದ ಮೇಲೆ ಸೆಸ್ ವಿಧಿಸಲು ಯೋಜಿಸುತ್ತಿದ್ದು, ಇದನ್ನು ಅಸಂಘಟಿತ ವಲಯಗಳ ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಈ ಸಂಬಂಧ ಕಾರ್ಮಿಕ ಇಲಾಖೆ ವರದಿ ಸಿದ್ಧಪಡಿಸಿದ್ದು, ಈ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸುವ ಸಾಧ್ಯತೆ ಇದೆ. ಕಾರ್ಮಿಕ ಇಲಾಖೆಯು ತನ್ನ ವರದಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂ.ವರೆಗೆ ಸೆಸ್ ವಿಧಿಸಲು ಪ್ರಸ್ತಾಪಿಸಿದ್ದು, ವರ್ಷಕ್ಕೆ ಸುಮಾರು 2,000 ಕೋಟಿ ಆದಾಯ ಗಳಿಸಲು ಮುಂದಾಗಿದೆ.

ಅಸಂಘಟಿತ ವಲಯಕ್ಕೆ ಹೇಗೆ ಲಾಭ:
ಕಾರ್ಮಿಕ ಇಲಾಖೆಯು ಈ ಹಣವನ್ನು ಅಸಂಘಟಿತ ವಲಯಗಳ ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಿಕೊಳ್ಳಲು ಯೋಜಿಸಿದೆ. ಅಧಿಕಾರಿಗಳು ಹೇಳುವಂತೆ ಇಲಾಖೆಯು ನಿಯಂತ್ರಣಕ್ಕೆ ಒಳಪಡದ ಮತ್ತು ಯಾವುದೇ ಮಂಡಳಿಗಳ ವ್ಯಾಪ್ತಿಗೆ ಒಳಪಡದ 43 ವಲಯಗಳನ್ನು ಗುರುತಿಸಿದೆ. ಇಂತಹ ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯ ಅವಶ್ಯಕತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆಯು ಕಲ್ಯಾಣ ಯೋಜನೆಗಳಿಗೆ ಧನಸಹಾಯ ಮಾಡಲು ಆದಾಯವನ್ನು ಗಳಿಸುವ ಮಾರ್ಗಗಳನ್ನು ನೋಡುತ್ತಿದ್ದು, ಸೆಸ್ ಮೂಲಕ ಉತ್ಪತ್ತಿಯಾಗುವ ಈ ನಿಧಿಯನ್ನು ಅಸಂಘಟಿತ ವಲಯಗಳ ಕಾರ್ಮಿಕರ ಆರೋಗ್ಯ, ಶಿಕ್ಷಣ ಮತ್ತು ಅಪಘಾತ ವ್ಯಾಪ್ತಿಗೆ ಬಳಸಿಕೊಳ್ಳಲು ಕಾರ್ಮಿಕ ಇಲಾಖೆ ಯೋಜಿಸುತ್ತಿದೆ.
ಇಂಧನ ವೆಚ್ಚವನ್ನು ಹೆಚ್ಚಿಸುವ ಪ್ರಸ್ತಾಪ:
ಸಿಎಂಗೆ ಸಲ್ಲಿಸುವ ವರದಿ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಅದು ಸಲ್ಲಿಕೆಯಾದ ನಂತರ ಸಿಎಂ ಸಿದ್ದರಾಮಯ್ಯ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಸಾರಿಗೆ ಮಂಡಳಿಯಂತಹ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಮಂಡಳಿಗಳನ್ನು ಪ್ರಾರಂಭಿಸಿದೆ ಮತ್ತು ಅಂತಹ ಮಂಡಳಿಗಳ ಅಡಿಯಲ್ಲಿ ಬರುವ ಜನರಿಗೆ ಉದ್ದೇಶಿತ ಯೋಜನೆ ಅನ್ವಯಿಸುವುದಿಲ್ಲ.
ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹಣವಿಲ್ಲ ಎಂದು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿರುವ ಕಾಂಗ್ರೆಸ್ ಸರ್ಕಾರವು ಈ ಹೊಸ ಪ್ರಸ್ತಾವನೆಯೊಂದಿಗೆ ಮುಂದುವರಿಯಲು ನಿರ್ಧರಿಸಿದರೆ ತೀವ್ರ ವಿರೋಧವನ್ನು ಎದುರಿಸಬೇಕಾಗುತ್ತದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications