Datta Peeta: ದತ್ತಪೀಠ vs ಬಾಬಾ ಬುಡನ್ಗಿರಿ ವಿವಾದ: ಶಾಶ್ವತವಾಗಿ ಸಮಸ್ಯೆ ಬಗೆಹರಿಸಲು ಸರ್ಕಾರ ಚಿಂತನೆ
ಬೆಂಗಳೂರು, ಜನವರಿ 17:ಚಿಕ್ಕಮಗಳೂರು ದತ್ತಾತ್ರೇಯ ಪೀಠ ಬಾಬಾ ಬುಡನ್ಗಿರಿ ದರ್ಗಾ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಎಸ್ಎಲ್ಪಿ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಚಿಕ್ಕಮಗಳೂರು ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಧಾರ್ಮಿಕ ಮುಖಂಡರುಗಳೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಮಾಲೋಚನೆ ಸಭೆ ನಡೆಸಿದರು.
ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳ ಸಲಹೆಗಳನ್ನು ಪಡೆದರು. ದಾಖಲೆಗಳು ಶಾಶ್ವತವಾಗಿ ಇರುವಂತಹವು. ಈ ವಿಚಾರದಲ್ಲಿ ಕಾನೂನಿನ ಸಲಹೆ ಪಡೆಯಬೇಕಾಗುತ್ತದೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಸಮಸ್ಯೆಯನ್ನು ಹೆಚ್ಚು ದಿನ ಮುಂದಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಶಾಂತಿ ಸಾಮರಸ್ಯ ನೆಲೆಸುವಂತೆ ಮಾಡಬೇಕು. ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು ಎಂದು ಸರ್ಕಾರ ತೀರ್ಮಾನ ಮಾಡಿದೆ ಎಂದು ಸಭೆಯಲ್ಲಿ ತಿಳಿಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಪರಮೇಶ್ವರ ಅವರು ಮಾತನಾಡಿ, ಚಂದ್ರದೋಣ ಪರ್ವತದಲ್ಲಿರುವ ದತ್ತಾತ್ರೇಯ ಬಾಬಾ ಬುಡನ್ಗಿರಿ ದರ್ಗಾ ಕರ್ನಾಟಕದಲ್ಲಿ ಭಾವೈಕ್ಯತೆ ತೋರಿಸುವ ಸ್ಥಳ. 1975ರವರೆಗೆ ಒಂದು ರೀತಿಯ ಕಾರ್ಯಕ್ರಮಗಳು ನಡೆದರೆ, ತದನಂತರದ ದಿನಗಳಲ್ಲಿ ಅನೇಕ ಗೊಂದಲಗಳನ್ನು ಕಂಡಿದ್ದೇವೆ.
ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಪ್ರಯತ್ನಗಳನ್ನು ಮಾಡಿದೆ. ಹಿಂದು, ಮುಸ್ಲಿಂ ಸಮುದಾಯದವರು ಕೋರ್ಟ್ ಮೊರೆ ಹೋಗಿರುವುದನ್ನು ನೋಡಿದ್ದೇವೆ. ಸಮಿತಿ, ಸಚಿವ ಸಂಪುಟ ಉಪ ಸಮಿತಿಗಳನ್ನು ರಚಿಸಿ ದಾಖಲೆಗಳನ್ನು ಪರಿಶೀಲಿಸಿ ಕೋರ್ಟ್ಗೆ ತಿಳಿಸಲಾಗಿದ್ದು, ತೀರ್ಪುಗಳು ಬಂದಿವೆ. ಕೆಲವರು ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ತಿಳಿಸಿದರು.
ನಮ್ಮ ಸರ್ಕಾರವು ದತ್ತಾತ್ರೇಯ ಬಾಬಾ ಬುಡನ್ಗಿರಿ ದರ್ಗಾ ಗೊಂದಲವನ್ನು ಬಗೆಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದಾರೆ. ಈವರೆಗೆ ನಾಲ್ಕು ಸಭೆಗಳನ್ನು ನಡೆಸಿ, ಅನೇಕ ದಾಖಲೆಗಳನ್ನು ಪರಿಶೀಲಿಸಿ ದಾವೆಗೆ ಬೇಕಾದ ಮಾಹಿತಿಗಳನ್ನು ಕೋರ್ಟ್ಗೆ ನೀಡಲಾಗಿದೆ.
ಮಾರ್ಚ್ 24ರೊಳಗೆ ಸರ್ಕಾರದ ಅಭಿಪ್ರಾಯ ತಿಳಿಸುವಂತೆ ಜನವರಿ 7ರಂದು ಸುಪ್ರಿಂ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಎಲ್ಲರ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಮುಂದಿನ ವಾರ ಸಚಿವ ಸಂಪುಟ ಉಪಸಮಿತಿ ಸಭೆ ಕರೆದು ಜನಪ್ರತಿನಿಧಿಗಳು ಹಾಗೂ ಧಾರ್ಮಿಕ ಮುಖಂಡರು ತಿಳಿಸಿರುವ ಸಲಹೆಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸಿ ಕೋರ್ಟ್ಗೆ ತಿಳಿಸುತ್ತೇವೆ. ಅದಾದ ನಂತರ ಕೋರ್ಟ್ನಿಂದ ಬರುವ ತೀರ್ಮಾನದಂತೆ ನಡೆದುಕೊಳ್ಳೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ವಸತಿ ಮತ್ತು ವಕ್ಫ್ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಶಾಸಕರಾದ ಹೆಚ್.ಡಿ.ತಮ್ಮಯ್ಯ, ನಯನಾ ಮೋಟಮ್ಮ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಧಾರ್ಮಿಕ ಮುಖಂಡರು, ಚಿಕ್ಕಮಗಳೂರು ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications