ವರ್ಗಾವಣೆ: ಸರ್ಕಾರಿ ಶಾಲಾ ಶಿಕ್ಷಕ ವೃಂದದಕ್ಕೆ ಸಿಹಿಸುದ್ದಿ
ಬೆಂಗಳೂರು, ಜೂನ್ 16: ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ 2023-24ನೇ ಸಾಲಿನ ವರ್ಗಾವಣೆ ಕುರಿತು ಪ್ರಮುಖ ಮಾಹಿತಿಯೊಂದಿದೆ. ಶಾಲಾ ಶಿಕ್ಷಣ ಇಲಾಖೆ ವರ್ಗಾವಣೆಗೆಯ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಅಧಿಸೂಚನೆ 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಕರು/ ಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಮುಂದುವರೆಸಿ ಪರಿಷ್ಕೃತ ವೇಳಾ ಪಟ್ಟಿ ಬಿಡುಗಡೆ ಮಾಡಿದೆ ಎಂಬ ವಿಷಯವನ್ನು ಒಳಗೊಂಡಿದೆ.

ಅಧಿಸೂಚನೆ ವಿವರಗಳು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮಗಳಲ್ಲಿನಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ, ಪ್ರಕ್ರಿಯೆಗೆ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿರುತ್ತದೆ.
ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಮುಕ್ತಾಯವಾಗಿದ್ದು ಸದರಿ ಶಿಕ್ಷಕರ ಸಾಮಾನ್ಯ ಕೋರಿಕೆ ವರ್ಗಾವಣೆಯನ್ನು ಮುಂದುವರೆಸುವ ಕುರಿತಂತೆ ಸರ್ಕಾರಕ್ಕೆ ಏಕ ಕಡತದಲ್ಲಿ ಅನುಮೋದನೆ ಕೋರಿ ಸಲ್ಲಿಸಲಾಗಿರುತ್ತದೆ. ಸರ್ಕಾರ ಪರಿಶೀಲಿಸಿ ಸದರಿ ವರ್ಗಾವಣಾ ಪ್ರಕ್ರಿಯೆಯನ್ನು ಮುಂದುವರೆಸಲು ಅನುಮೊದನೆ ನೀಡಿರುತ್ತದೆ.
2020ರಲ್ಲಿ ಜಾರಿಯಾದ ಶಿಕ್ಷಕರ ವರ್ಗಾವಣೆ ಕಾಯ್ದೆಯಂತೆ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹಂಚಿಕೆ ಮತ್ತು ಕಡ್ಡಾಯ ವಲಯ ವರ್ಗಾವಣೆಗಳನ್ನು ಒಂದರ ನಂತರ ಒಂದನ್ನು ಪರ್ಯಾಯ ವರ್ಷಗಳಲ್ಲಿ ಹಮ್ಮಿಕೊಳ್ಳಬೇಕಾಗಿರುತ್ತದೆ.
ಪ್ರಸ್ತುತ ದಿನಾಂಕ 15/03/2024ರ ಅಧಿಸೂಚನೆಯಂತೆ ಕಡ್ಡಾಯ ವಲಯ ವರ್ಗಾವಣೆ ಒಳಗೊಂಡಂತೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿತ್ತು. ಈ ಮಧ್ಯ ಲೋಕಸಭಾ ಚುನಾವಣಾ ಘೋಷಣೆಯಾದ ಹಿನ್ನೆಲೆಯಲ್ಲಿ ಇಡೀ ವರ್ಗಾವಣೆ ಪ್ರಕ್ರಿಯೆಯು ಸರಿ ಸುಮಾರು 3 ತಿಂಗಳ ಕಾಲ ಮುಂದೂಡುವ ಅನಿವಾರ್ಯತೆ ಉದ್ಭವಿಸಿದ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆನ್ನು ಮುಂದುವರಿಸಲು ಸಾಧ್ಯವಾಗಿರುವುದಿಲ್ಲ.
ಸರ್ಕಾರದ ಆದೇಶದಂತೆ ಶೈಕ್ಷಣಿಕ ವರ್ಷ ಪಾರಂಭಿಸಿದ ನಂತರ ವಲಯ ವರ್ಗಾವಣೆ ಮಾಡುವುದು ಸೂಕ್ತವಲ್ಲವಾದ್ದರಿಂದ, ಪ್ರಸ್ತುತ ವರ್ಷ ವರ್ಗಾವಣೆಯಲ್ಲಿ ಮಾತ್ರ ವಲಯ ವರ್ಗಾವಣೆಯನ್ನು ಕೈಬಿಟ್ಟು ಇತರೆ ವರ್ಗಾವಣೆಗಳನ್ನು ಮುಂದುವರೆಸಲು ಅನುಮತಿಸಿರುತ್ತದೆ. ಆದ್ದರಿಂದ 2023-24ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ವಲಯ ವರ್ಗಾವಣೆ ಪ್ರಕ್ರಿಯೆಯನ್ನು ಕೈಬಿಡಲಾಗಿದೆ.
ಎಲ್ಲಾ ಸಾಮಾನ್ಯ/ ಪರಸ್ಪರ ವರ್ಗಾವಣೆಗಳನ್ನು On Line ಮೂಲಕವೇ ನಿರ್ವಹಿಸಬೇಕಾಗಿದ್ದು ಶಿಕ್ಷಕರು ವರ್ಗಾವಣಾ ಅರ್ಜಿ ಸಲ್ಲಿಸುವುದು, ಅರ್ಜಿಗಳ ಆದ್ಯತೆಗಳ ಪರಿಶೀಲನೆ, ಅರ್ಜಿಗಳ/ ಆದ್ಯತೆಗಳ ಅನುಮೋದನೆ/ ತಿರಸ್ಕಾರ, ಕರಡು ಅರ್ಹ/ ಅನರ್ಹ(ಕಾರಣ ಸಹಿತ) ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸಲ್ಲಿಕೆ, ಅಂತಿಮ ಆದ್ಯತಾ ಪಟ್ಟಿ ಪ್ರಕಟಣೆ, ಆದ್ಯತಾ ಪಟ್ಟಿ ಅನುಸಾರ ವರ್ಗಾವಣಾ ಕೌನ್ಸೆಲಿಂಗ್ ಪ್ರಕ್ರಿಯೆಗಳು ಇಲಾಖೆಯ ನಿಗದಿತ ತಂತ್ರಾಂಶದಲ್ಲಿಯೇ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ. ಉಳಿದಂತೆ ಸದರಿ ವರ್ಗಾವಣಾ ಪ್ರಕ್ರಿಯೆಯ ಮಾನದಂಡಗಳು ಯತಾವತ್ತಾಗಿ ಮುಂದುವರೆಯುತ್ತದೆ.
ಚುನಾವಣ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಹಿಂದೆ ಸದರಿ ವರ್ಗಾವಣೆಗೆ ನಿಗಧಿಪಡಿಸಿದ ವೇಳಾಪಟ್ಟಿಯಂತೆ ಪ್ರಕ್ರಿಯೆ ನಿರ್ವಹಿಸಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಪ್ರಸ್ತುತ ದಿನಗಳಿಗೆ ವೇಳಾಪಟ್ಟಿಯನ್ನು ಪರಿಷ್ಕರಿಸಿ ವಿಸ್ತರಿಸಿದ್ದು ಅದರಂತೆ ಅರ್ಜಿ ಸಲ್ಲಿಸುವ ದಿನಾಂಕವನ್ನು 20/06/2024ಕ್ಕೆ ವಿಸ್ತರಿಸಿ ಅಂತಿಮಗೊಳಿಸಿದ ಪ್ರಯುಕ್ತ ನಿಯಮಾನುಸಾರ ಕೊರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸುವುದು ಅದರಂತೆ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲು ಎಲ್ಲಾ ಪ್ರಾಧಿಕಾರಿಗಳಿಗೆ ಸೂಚಿಸಿದೆ.
ವರ್ಗಾವಣಾ ಅಧಿನಿಯಮ ಮತ್ತು ನಿಯಮಗಳನ್ನು ಎಲ್ಲಾ ಹಂತದ ವರ್ಗಾವಣಾ ಪ್ರಾಧಿಕಾರಿಗಳು ಕಡ್ಡಾಯವಾಗಿ ಓದಿಕೊಳ್ಳತಕ್ಕದ್ದು. ಮಾರ್ಗಸೂಚಿಗಳಲ್ಲಿ ತಿಳಿಸಿರುವಂತೆ ಹಾಗೂ ಶಿಕ್ಷಕರ ವರ್ಗಾವಣೆ ಕಾಯ್ದೆ/ ನಿಯಮಗಳು-2020 ಮತ್ತು ತಿದ್ದುಪಡಿ ಕಾಯ್ದೆ/ ನಿಯಮಗಳು-2022ರ ಪ್ರಕಾರ ಕ್ರಮವಹಿಸಲು ಸೂಚಿಸಲಾಗಿದೆ.
ಸಿದ್ಧಪಡಿಸಿದ ಅಧಿಸೂಚನೆಯು, ತಾಂತ್ರಿಕ/ ಆಡಳಿತಾತ್ಮಕ ಕಾರಣಗಳಿಂದಾಗಿ ವ್ಯತ್ಯಯಗಳುಂಟಾದಲ್ಲಿ ಅವಶ್ಯಕತೆಗೆ ಅನುಗುಣವಾಗಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಳ್ಳುವ ಪರತ್ತಿಗೆ ಒಳಪಟ್ಟಿರುತ್ತದೆ. ಈ ಸಂಬಂಧ ಪ್ರಕ್ರಿಯೆಯನ್ನು ನಿರ್ವಹಿಸುವ ಸಲುವಾಗಿ ಪರಿಷ್ಕತ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಮುಂದಿನ ಕ್ರಮಕ್ಕೆ ಸಕ್ಷಮ ಪ್ರಾಧಿಕಾರಿಗಳಿಗೆ ಯಾವುದೇ ಲೋಪವಾಗದಂತೆ ಅನುಷ್ಠಾನಕ್ಕೆ ಸೂಚಿಸಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications