ರಾಜ್ಯಾದ್ಯಂತ ಇಂದಿನಿಂದಲೇ ಸರ್ಕಾರಿ ಪ್ರಾಥಮಿಕ & ಪ್ರೌಢ ಶಾಲೆಗಳು ಓಪನ್, ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿದ್ಧತೆ ಹೇಗಿದೆ?
ಕರ್ನಾಟಕ, ಮೇ, 31: ಇದೀಗ ಬೇಸಿಗೆ ರಜೆ ಮುಕ್ತಾಯವಾದ ಹಿನ್ನೆಲೆ ರಾಜ್ಯಾದಲ್ಲಿ ಎಲ್ಲೆಡೆ ಸರ್ಕಾರಿ ಶಾಲೆಗಳು ಬುಧವಾರದಿಂದ (ಮೇ 31 ) ಆರಂಭ ಆಗಲಿವೆ. ಹಾಗೆಯೆ ಪರೀಕ್ಷೆ ಬರೆದು ಇಷ್ಟು ದಿನ ಬೀಸಿಗೆ ರಜೆಯಲ್ಲಿದ್ದ ಮಕ್ಕಳು ಇಂದಿನಿಂದ ಶಾಲೆಗೆ ಪಾಟಿಚೀಲ ಹಿಡಿದು ಹೊರಡಲು ಯುದ್ಧಕ್ಕೆ ಸಜ್ಜಾದಂತೆ ಶಾಲೆಗೆ ಹೊರಡಲು ತಯಾರಾಗಿದ್ದಾರೆ.
ಇನ್ನು 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದೆಲ್ಲೆಡೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭ ಆಗಿರಲಿವೆ. ಈ ಹಿನ್ನೆಲೆ ಹಲವೆಡೆ ಈಗಾಗಲೇ ನಿನ್ನೆಯಿಂದಲೂ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಹಬ್ಬದ ವಾತಾವರಣವನ್ನು ಸೂಷ್ಟಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಸಿಹಿ ಹಂಚಿವ ಮೂಲಕ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯೂ ಸೂಚನೆ ನೀಡಿದೆ.

ಇಂದಿನಿಂದ ಶಾಲೆ ಆರಂಭ ಹಿನ್ನೆಲೆ ರಾಜ್ಯಾದ್ಯಂತ ಎಲ್ಲಾ ಕಡೆಯೂ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ. ಮೇ 29 ಮತ್ತು ಮೇ 31ರಂದು ಶಾಲೆಯ ಕೊಠಡಿ, ಶೌಚಾಲಯ, ಕಾಂಪೌಂಡ್, ಆವರಣ ಎಲ್ಲವನ್ನು ಹಿರಿಯ ವಿದ್ಯಾರ್ಥಿಗಳು ಹಾಗೂ ಸಹಾಯಕರೊಂದಿಗೆ ಶಿಕ್ಷಕರು ಸ್ವಚ್ಛಗೊಳಿಸಿ ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಲು ಸನ್ನದ್ಧರಾಗಿದ್ದಾರೆ. ಅಲ್ಲದೆ ಮಕ್ಕಳನ್ನು ಶಾಲೆಯವರೆಗೂ ಬಿಡಲು ಪೋಷಕರು ಕೂಡ ತಯಾರಾಗಿ ಬರುತ್ತಿದ್ದಾರೆ.
ಹಾಗೆಯೇ ಶಿಕ್ಷಣ ಇಲಾಖೆ ಪ್ರಕಾರ ಶಾಲೆಗೆ ಆಗಮಿಸಲಿರುವ ಮಕ್ಕಳಿಗೆ ಮೊದಲ ದಿನ ಬಿಸಿಯೂಟದ ಜೊತೆ ಸಿಹಿ ಹಂಚಬೇಕು. ನಂತರ ಸ್ವಲ್ಪ ಸಮಯದ ಬಳಿಕ ಶೈಕ್ಷಣಿಕ ತರಗತಿಗಳನ್ನು ಪ್ರಾರಂಭಿಸಬೇಕು ಎನ್ನುವ ಮಾಹಿತಿಯನ್ನು ನೀಡಲಾಗಿದೆ. ಮತ್ತೊಂದೆಡೆ ಇದೀಗ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಆದ್ದರಿಂದ ಒಂದು ವೇಳೆ ಮಕ್ಕಳು ಶಾಲೆಗೆ ಬರಲಾಗದಿದ್ದರೆ ರಜೆ ಘೋಷಿಸಲು ಸಹ ಸೂಚನೆ ನೀಡಲಾಗಿದೆ.
ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಆರ್ಭಟ ಶುರು ಮಾಡಿದೆ. ಇದರಿಂದ ಶಾಲೆಗೆ ಬರುವ ಮಕ್ಕಳಿಗೆ ಯಾವುದೇ ತೊಂದರೆ ಆಗಬಾರದೆಂದು ಶಿಕ್ಷಣ ಇಲಾಖೆಯು ಭಾರೀ ಮಳೆ ಜೋರಾಗಿ ಬರುವ ಸಾಧ್ಯತೆ ಇದ್ದರೆ ಮಾತ್ರ ಶಾಲೆಗೆ ರಜೆ ಘೋಷಣೆ ಮಾಡುವ ಮುನ್ಸೂಚನೆಯನ್ನು ಕೂಡ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications