ರಾಜ್ಯಾದ್ಯಂತ ಇಂದಿನಿಂದಲೇ ಸರ್ಕಾರಿ ಪ್ರಾಥಮಿಕ & ಪ್ರೌಢ ಶಾಲೆಗಳು ಓಪನ್, ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿದ್ಧತೆ ಹೇಗಿದೆ?
ಕರ್ನಾಟಕ, ಮೇ, 31: ಇದೀಗ ಬೇಸಿಗೆ ರಜೆ ಮುಕ್ತಾಯವಾದ ಹಿನ್ನೆಲೆ ರಾಜ್ಯಾದಲ್ಲಿ ಎಲ್ಲೆಡೆ ಸರ್ಕಾರಿ ಶಾಲೆಗಳು ಬುಧವಾರದಿಂದ (ಮೇ 31 ) ಆರಂಭ ಆಗಲಿವೆ. ಹಾಗೆಯೆ ಪರೀಕ್ಷೆ ಬರೆದು ಇಷ್ಟು ದಿನ ಬೀಸಿಗೆ ರಜೆಯಲ್ಲಿದ್ದ ಮಕ್ಕಳು ಇಂದಿನಿಂದ ಶಾಲೆಗೆ ಪಾಟಿಚೀಲ ಹಿಡಿದು ಹೊರಡಲು ಯುದ್ಧಕ್ಕೆ ಸಜ್ಜಾದಂತೆ ಶಾಲೆಗೆ ಹೊರಡಲು ತಯಾರಾಗಿದ್ದಾರೆ.
ಇನ್ನು 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದೆಲ್ಲೆಡೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭ ಆಗಿರಲಿವೆ. ಈ ಹಿನ್ನೆಲೆ ಹಲವೆಡೆ ಈಗಾಗಲೇ ನಿನ್ನೆಯಿಂದಲೂ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಹಬ್ಬದ ವಾತಾವರಣವನ್ನು ಸೂಷ್ಟಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಸಿಹಿ ಹಂಚಿವ ಮೂಲಕ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯೂ ಸೂಚನೆ ನೀಡಿದೆ.

ಇಂದಿನಿಂದ ಶಾಲೆ ಆರಂಭ ಹಿನ್ನೆಲೆ ರಾಜ್ಯಾದ್ಯಂತ ಎಲ್ಲಾ ಕಡೆಯೂ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ. ಮೇ 29 ಮತ್ತು ಮೇ 31ರಂದು ಶಾಲೆಯ ಕೊಠಡಿ, ಶೌಚಾಲಯ, ಕಾಂಪೌಂಡ್, ಆವರಣ ಎಲ್ಲವನ್ನು ಹಿರಿಯ ವಿದ್ಯಾರ್ಥಿಗಳು ಹಾಗೂ ಸಹಾಯಕರೊಂದಿಗೆ ಶಿಕ್ಷಕರು ಸ್ವಚ್ಛಗೊಳಿಸಿ ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಲು ಸನ್ನದ್ಧರಾಗಿದ್ದಾರೆ. ಅಲ್ಲದೆ ಮಕ್ಕಳನ್ನು ಶಾಲೆಯವರೆಗೂ ಬಿಡಲು ಪೋಷಕರು ಕೂಡ ತಯಾರಾಗಿ ಬರುತ್ತಿದ್ದಾರೆ.
ಹಾಗೆಯೇ ಶಿಕ್ಷಣ ಇಲಾಖೆ ಪ್ರಕಾರ ಶಾಲೆಗೆ ಆಗಮಿಸಲಿರುವ ಮಕ್ಕಳಿಗೆ ಮೊದಲ ದಿನ ಬಿಸಿಯೂಟದ ಜೊತೆ ಸಿಹಿ ಹಂಚಬೇಕು. ನಂತರ ಸ್ವಲ್ಪ ಸಮಯದ ಬಳಿಕ ಶೈಕ್ಷಣಿಕ ತರಗತಿಗಳನ್ನು ಪ್ರಾರಂಭಿಸಬೇಕು ಎನ್ನುವ ಮಾಹಿತಿಯನ್ನು ನೀಡಲಾಗಿದೆ. ಮತ್ತೊಂದೆಡೆ ಇದೀಗ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಆದ್ದರಿಂದ ಒಂದು ವೇಳೆ ಮಕ್ಕಳು ಶಾಲೆಗೆ ಬರಲಾಗದಿದ್ದರೆ ರಜೆ ಘೋಷಿಸಲು ಸಹ ಸೂಚನೆ ನೀಡಲಾಗಿದೆ.
ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಆರ್ಭಟ ಶುರು ಮಾಡಿದೆ. ಇದರಿಂದ ಶಾಲೆಗೆ ಬರುವ ಮಕ್ಕಳಿಗೆ ಯಾವುದೇ ತೊಂದರೆ ಆಗಬಾರದೆಂದು ಶಿಕ್ಷಣ ಇಲಾಖೆಯು ಭಾರೀ ಮಳೆ ಜೋರಾಗಿ ಬರುವ ಸಾಧ್ಯತೆ ಇದ್ದರೆ ಮಾತ್ರ ಶಾಲೆಗೆ ರಜೆ ಘೋಷಣೆ ಮಾಡುವ ಮುನ್ಸೂಚನೆಯನ್ನು ಕೂಡ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications