ಹೊರ ರಾಜ್ಯದಲ್ಲಿರುವ ಕರ್ನಾಟಕದ ಕಾರ್ಮಿಕರಿಗಾಗಿ ಸಹಾಯವಾಣಿ
ಬೆಂಗಳೂರು, ಏಪ್ರಿಲ್ 30 : ಲಾಕ್ ಡೌನ್ನಿಂದಾಗಿ ವಿವಿಧ ಉದ್ಯಮಗಳು ಸ್ಥಗಿತವಾಗಿದೆ. ಹಲವು ಕಾರ್ಮಿಕರು ತಮ್ಮ ಊರಿಗೆ ಮರಳಿದ್ದಾರೆ. ಇನ್ನೂ ಅನೇಕರು ಇರುವಲ್ಲಿಯೇ ಸಿಕ್ಕಿ ಹಾಕಿಕೊಂಡಿದ್ದಾರೆ. ಕೆಲಸವೂ ಇಲ್ಲ, ವೇತನವೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.
ವಿವಿಧ ರಾಜ್ಯಗಳ ಕಾರ್ಮಿಕರು ಕರ್ನಾಟಕದಲ್ಲಿ ಸಿಲುಕಿಕೊಂಡಿದ್ದಾರೆ. ಹಾಗೆಯೇ ಕರ್ನಾಟಕದ ಕಾರ್ಮಿಕರು ವಿವಿಧ ರಾಜ್ಯಗಳಲ್ಲಿ ಇದ್ದಾರೆ. ಕರ್ನಾಟಕದ ಕಾರ್ಮಿಕರ ಸಹಾಯಕ್ಕಾಗಿ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ಈಗ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು ತವರು ರಾಜ್ಯಕ್ಕೆ ವಾಪಸ್ ಆಗಲು ಅನುಮಿತಿ ನೀಡಿದೆ. ವೈದ್ಯಕೀಯ ಪರೀಕ್ಷೆ ಮುಗಿಸಿಕೊಂಡು ರಾಜ್ಯ ಮಾಡುವ ಸಾರಿಗೆ ವ್ಯವಸ್ಥೆ ಮೂಲಕ ಕಾರ್ಮಿಕರು ಪ್ರಯಾಣ ಮಾಡಬಹುದಾಗಿದೆ.

ಕರ್ನಾಟಕ ಸರ್ಕಾರ ಹೊರ ರಾಜ್ಯದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಅವರಿಗೆ ಊಟ, ಔಷಧಿ ಸೇರಿದಂತೆ ಅಗತ್ಯ ಸೇವೆಗಳನ್ನು ಪೂರೈಕೆ ಮಾಡಲು ಸಹಾಯವಾಣಿಯನ್ನು ಆರಂಭಿಸಿದೆ. ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರು ಈ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.
ಕಾರ್ಮಿಕರು ಕರೆ ಮಾಡಬೇಕಾದ ನಂಬರ್ 080-22636800
ಲಾಕ್ ಡೌನ್ ಪರಿಣಾಮ ಉದ್ಯಮಗಳು ನಷ್ಟ ಅನುಭವಿಸುತ್ತಿವೆ. ಕರ್ನಾಟಕದಲ್ಲಿ ಹಲವು ಉದ್ಯಮಗಳಲ್ಲಿ ಕಾರ್ಮಿಕರನ್ನು ಕೆಲಸದಿಂದ ಕಿತ್ತು ಹಾಕಲಾಗುತ್ತಿದೆ. ವೇತನ ಕಡಿತಗೊಳಿಸಲಾಗುತ್ತಿದೆ. ಈ ಬಗ್ಗೆ ದೂರು ನೀಡಲು ಸಹ ಆನ್ಲೈನ್ ಮೂಲಕ ವ್ಯವಸ್ಥೆ ಮಾಡಲಾಗಿದೆ.












Click it and Unblock the Notifications