Belagavi Session: ರಾಜ್ಯದ ಈ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಹೆಚ್ಚಾಯ್ತು ಬೇಡಿಕೆ
ಬೆಂಗಳೂರು, ಡಿಸೆಂಬರ್ 04: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ 16ನೇ ವಿಧಾನಸಭೆಯ ವಿಧಾನಮಂಡಲಗಳ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇದರಲ್ಲಿ ರಾಜ್ಯದ ಬರ ಪರಿಸ್ಥಿತಿ ಮತ್ತು ರೈತರ ಕಷ್ಟನಷ್ಟಗಳ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಚರ್ಚೆಗೆ ಹೆಚ್ಚು ಮಹತ್ವವನ್ನು ನೀಡಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಬರಪೀಡಿತ ಪ್ರದೇಶದ ರೈತರಿಗೆ ಎಕರೆಗೆ 25,000ರೂ. ಪರಿಹಾರ ಕೊಡಬೇಕು. ಪಶು ಸಂಗೋಪನೆಯಲ್ಲಿ ತೊಡಗಿರುವ ಹಾಗು ಜಾನುವಾರುಗಳನ್ನು ಹೊಂದಿರುವ ರೈತರಿಗೆ ಪ್ರತಿ ಜಾನುವಾರಿಗೆ 5,000 ರೂಪಾಯಿ ಪರಿಹಾರ ಕೊಡಬೇಕು. ಬೆಲೆ ಏರಿಕೆ ನೀಗಿಸಿ ಕುಟುಂಬ ನಿರ್ವಹಿಸಲು ಪ್ರತಿ ಕುಟುಂಬಕ್ಕೆ ಉಚಿತ ರೇಷನ್ ಒದಗಿಸಬೇಕು ಎಂದು ಆಮ್ ಆದ್ಮಿ ಪಕ್ಷ ಪತ್ರದ ಮುಖೇನ ಸರ್ಕಾರಕ್ಕೆ ಆಗ್ರಹಿಸಿದೆ.

ನರೇಗಾ ಅಥವಾ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮೀಣ ಭಾಗದ ಜನರಿಗೆ ಆದಾಯ ವ್ಯವಸ್ಥೆ ಕಲ್ಪಿಸಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ನೋಡಿಕೊಂಡು ಸರ್ಕಾರಿ ಆಸ್ಪತ್ರೆಗಳ ವ್ಯವಸ್ಥೆ ಸುಧಾರಿಸಬೇಕು. ಬರ ಪೀಡಿತ ಪ್ರದೇಶಗಳ ಸರಿಯಾದ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಪತ್ರ
ಕೇಂದ್ರದ ಮೇಲೆ ಒತ್ತಡ ತನ್ನಿ
ಸರ್ವ ಪಕ್ಷಗಳ ನಿಯೋಗ ದೆಹಲಿಗೆ ತೆರಳಿ, ತುರ್ತು ಪರಿಸ್ಥಿತಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು. ರೈತರಿಗೆ ಬೆಳೆ ವಿಮೆಯ ತುರ್ತು ಪಾವತಿ ಮಾಡಬೇಕು. ಈ ನಿಟ್ಟಿನಲ್ಲಿ ಕಲಾಪದ ವೇಳೆ ತುರ್ತಾಗಿ ಚರ್ಚಿಸಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಚಂದ್ರು ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಬರೆದ ಪತ್ರ ಆಗ್ರಹಿಸಿದ್ದಾರೆ.

ಪ್ರಸ್ತುತದಲ್ಲಿನ ಬೇಡಿಕೆಗಳನ್ನು ತುರ್ತಾಗಿ ಚರ್ಚಿಸಿ ಪರಿಹಾರ ಒದಗಿಸದೇ ರೈತರುಗಳು ಆತ್ಮಹತ್ಯೆಯ ದಾರಿಯನ್ನು ಹಿಡಿದರೆ, ಅದಕ್ಕೆ ಜವಾಬ್ದಾರಿ ನಿಮ್ಮ ಸದನ ಹಾಗು ಅದರ ಸದಸ್ಯರಾಗಲಿದ್ದಾರೆ. ಒಂದು ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಕ್ಷವು ಸಾಮಾನ್ಯ ಜನರ ಹಕ್ಕುಗಳು ಮತ್ತು ಯೋಗಕ್ಷೇಮಕ್ಕಾಗಿ ಹೋರಾಡಲು ಬದ್ಧವಾಗಿದೆ.
ಹೋರಾಟದ ಎಚ್ಚರಿಕೆ ನೀಡಿದ ಎಎಪಿ
ಸದನದಲ್ಲಿ ಸರಿಯಾಗಿ ಚರ್ಚೆಯಾಗಿ ಪರಿಹಾರಗಳು ಸಿಗದಿದ್ದರೆ ಸದನದಾಚೆ ನಾವು ಜನಪರ ಹೋರಾಟಕ್ಕಿಳಿಯುವುದು ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇವಲ 800 ಕೋಟಿ ರೂ. ಗಳನ್ನು ಕುಡಿಯುವ ನೀರು ಹಾಗೂ ಮೇವು ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಮಾಡಿ ಕೈ ತೊಳೆದು ಕೊಂಡಿದ್ದಾರೆ. ಈ ತುರ್ತು ಪರಸ್ಥಿತಿ ನೀಗಿಸಲು ರಾಜ್ಯದ ಹಣಕಾಸು ನಿರ್ವಹಿಸುವಲ್ಲಾಗಲಿ, ಕೇಂದ್ರದಿಂದ ಹೆಚ್ಚಿನ ಅನುದಾನ ತರುವುದರಲ್ಲಾಗಲಿ ವಿಫಲರಾಗಿದ್ದಾರೆ.
ನಮ್ಮ ರಾಜ್ಯದ ಸಂಸದರಿಗಾಗಲಿ, ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಯ ಕೇಂದ್ರ ಸರ್ಕಾರಕ್ಕಾಗಲಿ ನಮ್ಮ ರೈತರು ಮತ್ತು ಗ್ರಾಮೀಣ ಸಮುದಾಯಗಳು ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸುವ ಬದ್ಧತೆ ಇದೆಯೇ ಎಂಬ ಅವರು ಪ್ರಶ್ನಿಸಿದರು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications