ಕಾವೇರಿ, ಮಹದಾಯಿ, ಕೃಷ್ಣಾ ಜಲವಿವಾದ: ವಕೀಲರಿಗೆ 122.75 ಕೋಟಿ ರುಪಾಯಿ ವೆಚ್ಚ ಮಾಡಿರುವ ರಾಜ್ಯ ಸರ್ಕಾರಗಳು
ಕರ್ನಾಟಕ ರಾಜ್ಯಕ್ಕೆ ಜಲವಿವಾದಗಳು ದೊಡ್ಡ ಸಮಸ್ಯೆಯಾಗಿದೆ. ರಾಜ್ಯದ ಜನರಿಗೆ ಅನ್ಯಾಯವಾಗುತ್ತಲೇ ಇದ್ದು, ಸರ್ಕಾರ ಮಾತ್ರ ನ್ಯಾಯಕ್ಕಾಗಿ ನೂರಾರು ಕೋಟಿಗಳನ್ನು ಖರ್ಚು ಮಾಡಿದೆ. ಕೃಷ್ಣಾ, ಕಾವೇರಿ, ಮಹದಾಯಿ ವಿಚಾರಗಳಲ್ಲಿ ರಾಜ್ಯದ ಪರ ವಕಾಲತ್ತು ವಹಿಸಿದ್ದ 41 ಹಿರಿಯ ನ್ಯಾಯವಾದಿಗಳಿಗೆ ರಾಜ್ಯ ಸರ್ಕಾರ ಈವರೆಗೆ 122 ಕೋಟಿ 75 ಲಕ್ಷ ರೂ. ಶುಲ್ಕವನ್ನು ಪಾವತಿ ಮಾಡಿದೆ.
ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಈ ಮಾಹಿತಿಯನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯಡಿ ಅವರು ವಕೀಲರ ಶುಲ್ಕದ ಬಗ್ಗೆ ಮಾಹಿತಿ ಕೇಳಿದ್ದರು. ರಾಜ್ಯ ಜಲ ಸಂಪನ್ಮೂಲ ಇಲಾಖೆ ಈ ಮಾಹಿತಿಯನ್ನು ನೀಡಿದೆ.

ಕಾವೇರಿ ನ್ಯಾಯಕ್ಕಾಗಿ 54.13 ಕೋಟಿ ರೂ. ವೆಚ್ಚ
ಮಾಧ್ಯಮಗಳ ಜೊತೆ ಮಾತನಾದಿದ ಆರ್ ಟಿಐ ಕಾರ್ಯಕರ್ತ ಭೀಮಪ್ಪ ಗಡಾದ, ಕರ್ನಾಟಕ, ತಮಿಳುನಾಡು, ಕೇರಳ, ಪಾಂಡಿಚೆರಿ ಸೇರಿ ನಾಲ್ಕು ರಾಜ್ಯಗಳ ನಡುವೆ ಇರುವ ಕಾವೇರಿ ನೀರು ಹಂಚಿಕೆ ವಿಚಾರ ಸಂಬಂಧ, 1990ರಲ್ಲಿ ಕಾವೇರಿ ವಿವಾದ ಇತ್ಯರ್ಥಕ್ಕೆ ಕಾವೇರಿ ನ್ಯಾಯಾಧಿಕರಣ ರಚನೆ ಮಾಡಲಾಗಿದೆ. 2017ರವೆರೆಗೆ ಕಾವೇರಿ ನ್ಯಾಯಾಧಿಕರಣದ ಎದುರು 580 ಸಭೆಗಳನ್ನು ನಡೆಸಲಾಗಿದೆ. ರಾಜ್ಯದ ಪರ ವಕಾಲತ್ತು ವಹಿಸಿದ್ದ ವಕೀಲರಿಗೆ ರಾಜ್ಯ ಸರ್ಕಾರ 54.13 ಕೋಟಿ ರೂಪಾಯಿ ಶುಲ್ಕವನ್ನಾಗಿ ಪಾವತಿ ಮಾಡಿದೆ ಎಂದು ಹೇಳಿದ್ದಾರೆ.
ಕೃಷ್ಣ ನದಿ ವಿವಾದಕ್ಕೆ 43.24 ಕೋಟಿ ರೂ. ವೆಚ್ಚ
ಕೃಷ್ಣಾ ನದಿ ನೀರು ಹಂಚಿಕೆ ವಿವಾದಕ್ಕೆ ಕೂಡ ರಾಜ್ಯ ಸರ್ಕಾರ ಭಾರಿ ಮೊತ್ತವನ್ನು ಖರ್ಚು ಮಾಡಿದೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮೂರು ರಾಜ್ಯಗಳ ನಡುವೆ ಈ ವಿವಾದ ನಡೆಯುತ್ತಿದ್ದು, ವಿವಾದ ಬಗೆಹರಿಸಲು 2004ರಲ್ಲಿ ಕೃಷ್ಣಾ ನ್ಯಾಯಾಧೀಕರಣ ರಚನೆ ಮಾಡಲಾಗಿದೆ.
2013ರವರೆಹೆ ಕೃಷ್ಣಾ ನ್ಯಾಯಾಧೀಕರಣದ ಎದುರು 295 ಸಭೆಗಳು ನಡೆದಿದ್ದು, ಇದುವರೆಗೆ ರಾಜ್ಯದ ಪರವಾಗಿ ವಾದ ಮಾಡಿರುವ ವಕೀಲರಿಗೆ ರಾಜ್ಯ ಸರ್ಕಾರಗಳು 43.24 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಆರ್ ಟಿಐ ಮಾಹಿತಿಯಲ್ಲಿ ತಿಳಿದುಬಂದಿದೆ.
ಉತ್ತರ ಕರ್ನಾಟಕದ ಪ್ರಮುಖ ನೀರಿನ ಯೋಜನೆಯಾದ ಮಹಾದಾಯಿ ವಿಚಾರದಲ್ಲಿ ಕೂಡ ರಾಜ್ಯ ಸರ್ಕಾರ ಹಲವು ಕೋಟಿ ರೂಪಾಯಿ ವೆಚ್ಚ ಮಾಡಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ವಿವಾದ ಇನ್ನೂ ಬಗೆಹರಿದಿಲ್ಲ. ವಿವಾದ ಇತ್ಯರ್ಥ ಪಡಿಸಲು 2010ರಲ್ಲಿ ಮಹದಾಯಿ ನ್ಯಾಯಾಧೀಕರಣ ರಚನೆ ಮಾಡಲಾಗಿದೆ, 2017ರವರೆಗೆ ಮಹದಾಯಿ ನ್ಯಾಯಾಧಿಕರಣದ ಎದುರು 97 ಸಭೆಗಳು ಆಗಿದ್ದು, ರಾಜ್ಯದ ಪರ ವಾದ ಮಂಡಿಸಿರುವ ವಕೀಲರಿಗೆ 25.38 ಕೋಟಿ ರೂಪಾಯಿ ಶುಲ್ಕವನ್ನಾಗಿ ಪಾವತಿ ಮಾಡಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications